ರಾಜ್ಯ

ಹೆಚ್‌ಡಿಕೆ ಡಿಎನ್‌ಎನಲ್ಲೇ ದ್ವೇಷದ ರಾಜಕಾರಣ ಇದೆ: ಡಿಸಿಎಂ ಡಿಕೆಶಿ

ಬೆಂಗಳೂರು: ಭೂಮಿ ಒತ್ತುವರಿ ದ್ವೇಷದ ರಾಜಕಾರಣ ಎಂದು ಹೇಳಿಕೆ ನೀಡಿದ ಕೇಂದ್ರ ಸಚಿವ ಹೆಚ್‌ಡಿಕೆಗೆ, ಸುಮ್ಮನೇ ಇದ್ದರೆ ಅವರಿಗೂ ಕ್ಷೇಮ ನಮಗೂ ಕ್ಷೇಮ ಎಂದು ಹೇಳುವ ಮೂಲಕ ಡಿಸಿಎಂ ಡಿಕೆಶಿ ವಾರ್ನ್‌ ಮಾಡಿದ್ದಾರೆ.

ವಿಧಾನಸೌಧದಲ್ಲಿ ಇಂದು ಮಾತನಾಡಿದ ಅವರು, ನೋಡ್ರಿ ಇಡೀ ದೇಶಕ್ಕೆ ಗೊತ್ತು. ನಾವೇನಾದರೂ ಕೇಸ್‌ ಹಾಕಿದ್ದೇವಾ? ಸುಮಾರು 20 ವರ್ಷಗಳಿಂದಲೂ ಆ ಹಿರೇಮಠ ನನ್ನ ಮೇಲೂ ಕೇಸ್‌ ಹಾಕಿದ್ದಾರೆ. ಅವರ ಮೇಲೆಯೂ ಕೇಸ್‌ ಹಾಕಿದ್ದಾರೆ. ಇವರು ಯಾಕೆ ಗಾಬರಿಯಾಗಬೇಕು ಎಂದು ತಿರುಗೇಟು ನೀಡಿದರು.

ನೋಟಿಸ್‌ ನೀಡಿರುವುದು ಕೋರ್ಟ್‌. ಸಿದ್ದರಾಮಯ್ಯ ಮತ್ತು ನಾವು ಏನ್‌ ಮಾಡ್ತೀವಿ ಅಂತಾ ಕಿಡಿಕಾರಿದರು.

ದ್ವೇಷದ ರಾಜಕಾರಣ ಎನ್ನುವುದು ಅವರ ಡಿಎನ್‌ಎದಲ್ಲಿಯೇ ಇದೆ. ಅವರು ಮತ್ತು ಅವರ ತಂದೆ ದೇವೇಗೌಡ ಅವರು ನನ್ಮೇಲೆ ಏನ್‌ ಏನ್‌ ಕೇಸ್‌ ಹಾಕಿಸಿದ್ರು ಎನ್ನುವುದು ಗೊತ್ತಿದೆ. ನಮಗೂ ಬಳ್ಳಾರಿಗೂ ಸಂಬಂಧವೇ ಇಲ್ಲ. ಆವಾಗ ಹಾಕಿಸಿದ್ದು ಕೇಸ್‌ ಅಲ್ಲವಾ. ಕುಮಾರಸ್ವಾಮಿ ಸುಮ್ಮನೇ ಮರ್ಯಾದೆಯಿಂದ ಇದ್ದರೆ ಅವರಿಗೂ ಕ್ಷೇಮ ಎಂದು ಎಚ್ಚರಿಕೆ ನೀಡಿದರು.

ಆಂದೋಲನ ಡೆಸ್ಕ್

Recent Posts

ರಾಜ್ಯದಲ್ಲಿ ಶೀಘ್ರದಲ್ಲೇ ಅರ್ಹರಿಗೆ ಹೊಸ ಬಿಪಿಎಲ್‌ ಕಾರ್ಡ್‌ ವಿತರಣೆ: ಸಚಿವ ಮುನಿಯಪ್ಪ ಘೋಷಣೆ

ಬೆಳಗಾವಿ: ರಾಜ್ಯದಲ್ಲಿ ಶೀಘ್ರದಲ್ಲೇ ಅರ್ಹರಿಗೆ ಹೊಸ ಬಿಪಿಎಲ್‌ ಕಾರ್ಡ್‌ ವಿತರಣೆ ಮಾಡಲಾಗುವುದು ಎಂದು ಆಹಾರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಘೋಷಣೆ…

7 mins ago

ನಾಳೆ ಡೆವಿಲ್‌ ಚಿತ್ರ ರಿಲೀಸ್:‌ ಜೈಲಿನಿಂದಲೇ ಅಭಿಮಾನಿಗಳಿಗೆ ದರ್ಶನ್‌ ಸಂದೇಶ

ಬೆಂಗಳೂರು: ನಾಳೆ ನಟ ದರ್ಶನ್‌ ಅಭಿನಯದ ಡೆವಿಲ್‌ ಚಿತ್ರ ರಿಲೀಸ್‌ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಜೈಲಿನಿಂದಲೇ ಅಭಿಮಾನಿಗಳಿಗೆ ನಟ ದರ್ಶನ್‌…

20 mins ago

ಮೈಸೂರಿನಲ್ಲಿ ಸೆರೆ ಸಿಕ್ಕಿದ್ದ 4 ಹುಲಿ ಮರಿಗಳ ನಿಗೂಢ ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲ್ಲೂಕಿನ ಗೌಡನಕಟ್ಟೆಯಲ್ಲಿ ತಾಯಿಯೊಂದಿಗೆ ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು ಮೃತಪಟ್ಟಿವೆ ಎಂದು ತಿಳಿದುಬಂದಿದೆ. ಹುಣಸೂರು…

54 mins ago

ಓದುಗರ ಪತ್ರ: ಅದಲು-ಬದಲು…!

ಓದುಗರ ಪತ್ರ: ಅದಲು-ಬದಲು...! ಬೆಂಗಳೂರಿನಿಂದ ಬೆಳಗಾವಿಗೆ ಬಲುದೂರ ದೂರ ಬಂತು ಚಳಿಗಾಲದ ಅಧಿವೇಶನ ! ವಿಧಾನ ಸೌಧದಿಂದ ಸುವರ್ಣ ಸೌಧಕ್ಕೆ…

57 mins ago

ಓದುಗರ ಪತ್ರ:  ಚರಂಡಿಯಲ್ಲಿ ಕಸ ತೆರವುಗೊಳಿಸಿ

ಮೈಸೂರಿನ ಶ್ರೀರಾಂಪುರ ಬಡಾವಣೆ ಎರಡನೇ ಹಂತದಲ್ಲಿ ಎಸ್‌ಬಿಎಂ ಕಾಲೋನಿಯಲ್ಲಿರುವ ನಂದಿನಿ ಹಾಲಿನ ಕೇಂದ್ರದ ಎದುರಿನ ಚರಂಡಿಯಲ್ಲಿ ಕಸ ಕಡ್ಡಿಗಳು ತುಂಬಿದ್ದು,…

1 hour ago

ಓದುಗರ ಪತ್ರ:  ಸಾರ್ವಜನಿಕ ಶೌಚಾಲಯಗಳ ಬೀಗ ತೆರೆಯಿರಿ

ಮೈಸೂರಿನ ಮೆಟ್ರೋ ಪೋಲ್ ವೃತ್ತದ ಹತ್ತಿರ (ಮಹಾರಾಣಿ ಕಾಲೇಜು) ಮತ್ತು ಗಂಡಭೇರುಂಡ ಉದ್ಯಾನವನದ ಮುಂಭಾಗದಲ್ಲಿ ಹಾಗೂ ಕುವೆಂಪುನಗರದ ಉದಯರವಿ ರಸ್ತೆಯಲ್ಲಿ…

2 hours ago