ಬೆಂಗಳೂರು: ಭೂಮಿ ಒತ್ತುವರಿ ದ್ವೇಷದ ರಾಜಕಾರಣ ಎಂದು ಹೇಳಿಕೆ ನೀಡಿದ ಕೇಂದ್ರ ಸಚಿವ ಹೆಚ್ಡಿಕೆಗೆ, ಸುಮ್ಮನೇ ಇದ್ದರೆ ಅವರಿಗೂ ಕ್ಷೇಮ ನಮಗೂ ಕ್ಷೇಮ ಎಂದು ಹೇಳುವ ಮೂಲಕ ಡಿಸಿಎಂ ಡಿಕೆಶಿ ವಾರ್ನ್ ಮಾಡಿದ್ದಾರೆ.
ವಿಧಾನಸೌಧದಲ್ಲಿ ಇಂದು ಮಾತನಾಡಿದ ಅವರು, ನೋಡ್ರಿ ಇಡೀ ದೇಶಕ್ಕೆ ಗೊತ್ತು. ನಾವೇನಾದರೂ ಕೇಸ್ ಹಾಕಿದ್ದೇವಾ? ಸುಮಾರು 20 ವರ್ಷಗಳಿಂದಲೂ ಆ ಹಿರೇಮಠ ನನ್ನ ಮೇಲೂ ಕೇಸ್ ಹಾಕಿದ್ದಾರೆ. ಅವರ ಮೇಲೆಯೂ ಕೇಸ್ ಹಾಕಿದ್ದಾರೆ. ಇವರು ಯಾಕೆ ಗಾಬರಿಯಾಗಬೇಕು ಎಂದು ತಿರುಗೇಟು ನೀಡಿದರು.
ನೋಟಿಸ್ ನೀಡಿರುವುದು ಕೋರ್ಟ್. ಸಿದ್ದರಾಮಯ್ಯ ಮತ್ತು ನಾವು ಏನ್ ಮಾಡ್ತೀವಿ ಅಂತಾ ಕಿಡಿಕಾರಿದರು.
ದ್ವೇಷದ ರಾಜಕಾರಣ ಎನ್ನುವುದು ಅವರ ಡಿಎನ್ಎದಲ್ಲಿಯೇ ಇದೆ. ಅವರು ಮತ್ತು ಅವರ ತಂದೆ ದೇವೇಗೌಡ ಅವರು ನನ್ಮೇಲೆ ಏನ್ ಏನ್ ಕೇಸ್ ಹಾಕಿಸಿದ್ರು ಎನ್ನುವುದು ಗೊತ್ತಿದೆ. ನಮಗೂ ಬಳ್ಳಾರಿಗೂ ಸಂಬಂಧವೇ ಇಲ್ಲ. ಆವಾಗ ಹಾಕಿಸಿದ್ದು ಕೇಸ್ ಅಲ್ಲವಾ. ಕುಮಾರಸ್ವಾಮಿ ಸುಮ್ಮನೇ ಮರ್ಯಾದೆಯಿಂದ ಇದ್ದರೆ ಅವರಿಗೂ ಕ್ಷೇಮ ಎಂದು ಎಚ್ಚರಿಕೆ ನೀಡಿದರು.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…