Government will be rock solid for five years CM Siddaramaiah
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತ ಪ್ರಕರಣದಲ್ಲಿ ತಮ್ಮ ರಾಜೀನಾಮೆ ಕೇಳುವ ನೈತಿಕತೆ ಬಿಜೆಪಿಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಈ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ರಾಜೀನಾಮೆ ಕೇಳುವ ಮೊದಲು ಇಂತಹದ್ದೇ ಅವಘಡಗಳು ನಡೆದಿದ್ದ ಸಂದರ್ಭದಲ್ಲಿ ರಾಜೀನಾಮೆ ನೀಡಿದ್ದ ಬಿಜೆಪಿ ನಾಯಕರ ಪಟ್ಟಿಯನ್ನು ಬಿಡುಗಡೆ ಮಾಡುವಂತೆ ರಾಜ್ಯದ ಬಿಜೆಪಿ ನಾಯಕರಿಗೆ ಮನವಿ ಮಾಡುತ್ತೇನೆ.
ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿರುವುದು ಒಂದು ಅಪಘಾತ. ಒಂದು ಜವಾಬ್ದಾರಿಯುತ ಸರ್ಕಾರವಾಗಿ ಆ ಘಟನೆಯ ಹೊಣೆಯನ್ನು ನಾವು ಹೊತ್ತಿಕೊಂಡಿದ್ದು, ಬೆಂಗಳೂರು ನಗರ ಪೊಲೀಸ್ ಕಮಿಷನರ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದ್ದೇವೆ. ರಾಜ್ಯ ಗುಪ್ತಚರ ಇಲಾಖೆಯ ಮುಖ್ಯಸ್ಥರನ್ನು ವರ್ಗಾವಣೆ ಮಾಡಿದ್ದೇವೆ. ನನ್ನ ರಾಜಕೀಯ ಕಾರ್ಯದರ್ಶಿಯನ್ನು ಸೇವೆಯಿಂದ ಬಿಡುಗಡೆಗೊಳಿಸಿದ್ದೇನೆ. ಈ ಪ್ರಕರಣದ ಸಮಗ್ರ ತನಿಖೆಗೆ ನಿವೃತ್ತ ನ್ಯಾಯಾಧೀಶರಾದ ಜಾನ್ ಮೈಕೆಲ್ ಕುನ್ಹಾ ಅವರ ನೇತೃತ್ವದಲ್ಲಿ ಏಕಸದಸ್ಯ ಆಯೋಗವನ್ನೂ ರಚಿಸಿದ್ದೇವೆ ಎಂದರು.
ಪ್ರತಿಯೊಂದು ಅಪಘಾತದ ಹಿಂದೆ ಸಾವು-ನೋವಿಗೆ ಈಡಾದವರ ಕುಟುಂಬದ ದುಃಖ ಮತ್ತು ಸಂಕಟ ಇರುವುದನ್ನು ನಾವು ಅರ್ಥ ಮಾಡಿಕೊಂಡಿದ್ದೇವೆ. ಇದೇ ಕಾರಣಕ್ಕಾಗಿ ನಾವು ಇಂತಹ ಪ್ರಕರಣಗಳನ್ನು ರಾಜಕೀಯಕ್ಕೆ ಬಳಸುವುದಿಲ್ಲ. ಹೀಗಿದ್ದರೂ ರಾಜ್ಯದ ಬಿಜೆಪಿ ನಾಯಕರು ಮತ್ತೆ ಮತ್ತೆ ಇಂತಹ ಪ್ರಕರಣಗಳನ್ನು ಕೆದಕಿ ಕೆದಕಿ ಜನರನ್ನು ಪ್ರಚೋದಿಸುತ್ತಿರುವ ಹಿನ್ನೆಲೆಯಲ್ಲಿ ಇವರ ಆತ್ಮವಂಚಕ ನಡವಳಿಕೆಯನ್ನು ಬಯಲು ಮಾಡುವ ಉದ್ದೇಶದಿಂದ ಬಿಜೆಪಿ ಆಡಳಿತದಲ್ಲಿನ ಕೆಲವು ಪ್ರಕರಣಗಳನ್ನು ರಾಜ್ಯದ ಜನತೆಯ ಗಮನಕ್ಕೆ ತರಲು ಇಷ್ಟಪಡುತ್ತೇನೆ ಎಂದರು.
2002ರಲ್ಲಿ ಗುಜರಾತ್ ರಾಜ್ಯದಲ್ಲಿ ನಡೆದ ಹತ್ಯಾಕಾಂಡದಲ್ಲಿ ಎಲ್ಲ ಧರ್ಮಗಳಿಗೆ ಸೇರಿದ್ದ ಅಂದಾಜು ಎರಡು ಸಾವಿರ ಅಮಾಯಕರು ಪ್ರಾಣ ಕಳೆದುಕೊಂಡರು. ಆ ಘಟನೆಯ ಹೊಣೆಹೊತ್ತು ರಾಜೀನಾಮೆ ನೀಡುವಂತೆ ಅವರದ್ದೇ ಪಕ್ಷದ ಪ್ರಧಾನಿ ಆಟಲ್ ಬಿಹಾರಿ ವಾಜಪೇಯಿ ಸೂಚನೆ ನೀಡಿದರೂ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿಯವರು ರಾಜೀನಾಮೆ ನೀಡಲಿಲ್ಲ. ಮಾತ್ರವಲ್ಲ ಇಲ್ಲಿಯವರೆಗೆ ಕನಿಷ್ಠ ಪಕ್ಷ ವಿಷಾದವನ್ನೂ ಸೂಚಿಸಿಲ್ಲ. ನಮ್ಮ ರಾಜೀನಾಮೆ ಕೇಳುವವರು ಮೊದಲು ಇದಕ್ಕೆ ಉತ್ತರಿಸಿ ಎಂದು ಆಗ್ರಹಿಸಿದರು.
ರಾಜ್ಯ ಬಿಜೆಪಿ ನಾಯಕರು ಇನ್ನಾದರೂ ಪ್ರತಿಭಟನೆಯಂತಹ ಬೀದಿ ಪ್ರಹಸನವನ್ನು ಕೈಬಿಟ್ಟು ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳಲಿ ಎಂದು ತಿರುಗೇಟು ನೀಡಿದ್ದಾರೆ.
ಹುಣಸೂರು: ಬೈಕ್ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲ್ಲೂಕಿನ ಯಶೋಧರಪುರ ಗೇಟ್ ಬಳಿ…
ಮೈಸೂರು: ರಂಗವಲ್ಲಿ ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಬೆಂಗಳೂರು ಇವರ ಸಹಯೋಗದೊಂದಿಗೆ ದಿನಾಂಕ: 28.01.2026 ಮತ್ತು 29.01.2026ರ ಸಂಜೆ…
ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡರನ್ನು…
ವಾಷಿಂಗ್ಟನ್: ಅಮೇರಿಕಾದಾದ್ಯಂತ ಬೀಸುತ್ತಿರುವ ಭೀಕರ ಹಿಮಬಿರುಗಾಳಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಹಿಮಪಾತ ಹಾಗೂ ಮೈಕೊರೆಯುವ ಚಳಿಗೆ ಇದುವರೆಗೆ ಸುಮಾರು 25ಕ್ಕೂ ಹೆಚ್ಚು…
ಬೆಂಗಳೂರು: ನಟಿ ಕಾವ್ಯಾಗೌಡ ಹಾಗೂ ಆಕೆಯ ಪತಿ ಸೋಮಶೇಖರ್ ಮೇಲೆ ಪತಿ ಸಂಬಂಧಿಕರೇ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ರಾಮಮೂರ್ತಿ…
ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…