ರಾಜ್ಯ

ಮುಡಾ ಹಗರಣವನ್ನು ಇ.ಡಿ. ತನಿಖೆ ಮಾಡುತ್ತಿರುವುದು ಕಾನೂನು ಬಾಹಿರ: ಪೊನ್ನಣ್ಣ

ಬೆಂಗಳೂರು: ಮುಡಾ ಹಗರಣವನ್ನು ಇ.ಡಿ.ಅಧಿಕಾರಿಗಳು ತನಿಖೆ ಮಾಡುತ್ತಿರುವುದು ಕಾನೂನು ಬಾಹಿರವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರ ಎ.ಎಸ್‌.ಪೊನ್ನಣ್ಣ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು(ಜನವರಿ.28) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮೈಸೂರು ಲೋಕಾಯುಕ್ತ ಅಧಿಕಾರಿಗಳು ತನಿಖೆ ನಡೆಸುವ ವೇಳೆಯೇ ಇ.ಡಿ.ಅಧಿಕಾರಿಗಳು ಮಧ್ಯಪ್ರವೇಶಿಸಿ ಪ್ರಕರಣವನ್ನು ಕೈಗೆತ್ತುಕೊಂಡು ತನಿಖೆ ನಡೆಸಿದೆ. ಹಾಗಾಗಿ ಈ ತನಿಖೆಯೂ ಕಾನೂನು ಬಾಹಿರವಾಗಿದೆ. ಹೀಗಿದ್ದರೂ ಇ.ಡಿ.ಸಂಸ್ಥೆಯೂ ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ ಹಾಗೂ ಸಚಿವ ಬೈರತಿ ಸುರೇಶ್‌ ಅವರಿಗೆ ನೋಟಿಸ್‌ ನೀಡಿದೆ. ಆದರೆ ಇದು ಸರಿಯಲ್ಲ, ಒಟ್ಟಿನಲ್ಲಿ ಇ.ಡಿ. ನೋಟಿಸ್‌ ನೀಡಿರುವುದು ಕಾನೂನಿಗೆ ವಿರುದ್ಧವಾಗಿದೆ ಎಂದು ವಾಗ್ದಾಳಿ ನಡೆಸಿದರು.

ಇ.ಡಿ.ಸಂಸ್ಥೆಯೂ ಈ ಹಿಂದೆ ಮುಡಾ ಮಾಜಿ ಆಯುಕ್ತ ಟಿ.ಬಿ.ನಟೇಶ್‌ ಅವರಿಗೂ ನೋಟಿಸ್‌ ಜಾರಿ ಮಾಡಿತ್ತು. ಆದರೆ ನಟೇಶ್‌ ಅವರು ತಮ್ಮ ವಿರುದ್ಧದ ಇ.ಡಿ.ಸಮನ್ಸ್‌ ಅನ್ನು ರದ್ದುಗೊಳಿಸುವಂತೆ ಹೈಕೋರ್ಟ್‌ ಮೇಟ್ಟಿಲೇರಿದ್ದರು. ನಟೇಶ್‌ ಅವರು ಸಲ್ಲಿಸಿದ್ದ ಅರ್ಜಿ ಅನ್ವಯ ಹೈಕೋರ್ಟ್‌ ನಿನ್ನೆ(ಜನವರಿ.27) ವಿಚಾರಣೆ ನಡೆಸಿ, ಸಮನ್ಸ್‌ ಅನ್ನು ರದ್ದುಗೊಳಿಸಿದೆ ಎಂದರು.

ಇನ್ನೂ ಸಿಎಂ ಪತ್ನಿ, ಸಚಿವ ಬೈರತಿ ಸುರೇಶ್‌ಗೆ ನೋಟಿಸ್ ಕೊಟ್ಟು ವಿಚಾರಣೆಗೆ ಬರುವಂತೆ ಹೇಳಿದ್ದರು. ಈ ಹಿಂದೆ ಇ.ಡಿ. ನೀಡಿದ್ದ ಮೊದಲ ನೋಟಿಸ್‌ಗೆ ಪಾರ್ವತಿ ಸಿದ್ದರಾಮಯ್ಯ ಅವರು ಕಾಲಾವಕಾಶ ನೀಡಿ ಎಂದು ಮನವಿ ಮಾಡಿದ್ದರು. ಆದರೆ ಈ ಮಧ್ಯೆಯೇ ಇ.ಡಿ. ಎರಡನೇ ನೋಟಿಸ್ ಜಾರಿ ಮಾಡಿದೆ. ಅಲ್ಲದೇ ಇ.ಡಿ. ಅಧಿಕಾರಿಗಳು ಪಾರ್ವತಿ ಸಿದ್ದರಾಮಯ್ಯ ಅವರ ಕುಟುಂಬದ ಎಲ್ಲಾ ಮಾಹಿತಿ ಕೇಳುತ್ತಿದ್ದಾರೆ. ಹೀಗಾಗಿ ನಾವು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದೇವೆ. ಹೈಕೋರ್ಟ್‌ ಫೆಬ್ರವರಿ.10ಕ್ಕೆ ಅರ್ಜಿ ವಿಚಾರಣೆಯನ್ನು ಮುಂದೂಡಿ, ಇ.ಡಿ. ನೋಟಿಸ್‌ಗೆ ತಡೆ ನೀಡಿದೆ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

15 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

15 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

15 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

18 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

18 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

18 hours ago