ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ದಾಖಲಾಗಿರುವ ಪೋಕ್ಸೋ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿಕೆ ಮಾಡಿದೆ. ಮುಂದಿನ ತಿಂಗಳ ಡಿಸೆಂಬರ್.2ರ ಮಧ್ಯಾಹ್ನ 2.30ಕ್ಕೆ ಅರ್ಜಿ ವಿಚಾರಣೆ ಮುಂದೂಡಿಕೆ ಮಾಡಿದೆ.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ದಾಖಲಾಗಿರುವ ಪ್ರಕರಣ ರದ್ದು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ನಡೆಸಿತು.
ಈ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ಅವರು, ಅರ್ಜಿಗೆ ಸಂಬಂಧಿಸಿದಂತೆ ತಮ್ಮ ವಾದವನ್ನು ಸೋಮವಾರ ಪೂರ್ಣಗೊಳಿಸುವುದಾಗಿ ನ್ಯಾಯಪೀಠಕ್ಕೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಅರ್ಜಿಯ ವಿಚಾರಣೆಯನ್ನು ಸೋಮವಾರಕ್ಕೆ ನಿಗದಿ ಪಡಿಸಲಾಗುವುದು. ಅಂದೇ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿತು.
ಇದರ ಜೊತೆಗೆ ಅರ್ಜಿದಾರ ಬಿ.ಎಸ್.ಯಡಿಯೂರಪ್ಪ ವಿಶೇಷ ನ್ಯಾಯಾಲಯಕ್ಕೆ ಖುದ್ದು ಹಾಜರಿಯಿಂದ ವಿನಾಯಿತಿ ನೀಡಿರುವ ಆದೇಶವನ್ನು ವಿಸ್ತರಿಸಿ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿಕೆ ಮಾಡಲಾಯಿತು.
ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಜೀವಮಾನದ ಮೊದಲ ಸಾರ್ವಜನಿಕ ಗಾಯನ ಕಾರ್ಯಕ್ರಮ ಮೈಸೂರಿನಿಂದಲೇ ಆರಂಭವಾಗಿತ್ತು. ಅಚ್ಚರಿಯೆಂದರೆ ಅವರ…
ಕಳೆದ ಒಂದು ವರ್ಷದಿಂದ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆಯದೇ ಸದ್ದು. ಇದೇನು ಹೊಸ ಬೆಳವಣಿಗೆಯಲ್ಲ. ಇದುವರೆಗೆ ಚುನಾವಣಾ ಆಯೋಗ ದೇಶದಾದ್ಯಂತ…
ಮೈಸೂರು : ಗಾನಕೋಗಿಲೆ ಎಸ್. ಜಾನಕಿ ಅವರ ಅಂತ್ಯಸಂಸ್ಕಾರದ ಸಿದ್ಧತೆಗಳು ಮೈಸೂರಿನ ಸರಗೂರು ಬಳಿಯ ಕಣಿಯನಹುಂಡಿ ಗ್ರಾಮದಲ್ಲಿ ಭರದಿಂದ ಸಾಗುತ್ತಿದ್ದು,…
ಮೈಸೂರು : ಕರುನಾಡಿನ ಮಣ್ಣಲ್ಲಿ ಜಾನಕಿ ಅಮ್ಮ ಕಣ್ಮುಚ್ಚಿದ್ದಾರೆ. ಅವರಿಗಾಗಿ ಕರುನಾಡ ಜನ ಕಣ್ಣು ತೆರೆಯಬೇಕು. ಅವರ ಸ್ಮಾರಕ ನಿರ್ಮಾಣವಾಗಬೇಕು…
ಫಾತಿಮಾ ರಲಿಯಾ ಯು ಟ್ಯೂಬ್ನಲ್ಲಿ ಒಬ್ಬೊಬ್ಬ ತಜ್ಞರೂ ಒಂದೊಂದು ಮಾಹಿತಿ ಕೊಡುತ್ತಿದ್ದರು. ಇದೆಲ್ಲಾ ಗೊಂದಲ ಬೇಡ ಎಂದು ಚಾಟ್ಜಿಪಿಟಿಯ ಬಳಿ…