ರಾಜ್ಯ

ಜಾತಿ ಗಣತಿ ಮುಂದಕ್ಕೆ ಹಾಕಿ ಇಲ್ಲವೇ ವಿಸ್ತರಿಸಿ : ಎಚ್‌ಡಿಕೆ ಒತ್ತಾಯ

ಬೆಂಗಳೂರು: ಆತುರಾತುರವಾಗಿ ಸೋಮವಾರದಿಂದ ಆರಂಭಿಸಲು ಉದ್ದೇಶಿಸಿರುವ ಶೈಕ್ಷಣಿಕ-ಸಾಮಾಜಿಕ ಸಮೀಕ್ಷೆಯನ್ನು ಮುಂದಕ್ಕೆ ಹಾಕಬೇಕು ಇಲ್ಲವೇ ಕನಿಷ್ಠ ಮೂರು ತಿಂಗಳಾದರೂ ವಿಸ್ತರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರಕಾರವನ್ನು ಒತ್ತಾಯ ಮಾಡಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಸಮೀಕ್ಷೆ ಬಗ್ಗೆ ನಮಗೇನೂ ತಕರಾರಿಲ್ಲ. ಸುಪ್ರೀಂ ಕೋರ್ಟ್ ಆದೇಶದಂತೆ ಕಾಲ ಕಾಲಕ್ಕೆ ಸಮೀಕ್ಷೆ ನಡೆಯಬೇಕು, ನಡೆಯಲಿ. ನಾನು ಬೇಡವೆನ್ನುವುದಿಲ್ಲ. ಆದರೆ, ಕೇವಲ ಹದಿನೈದೇ ದಿನದಲ್ಲಿ 6.5 ಕೋಟಿ ಜನರ ಸಮೀಕ್ಷೆ ಸಾಧ್ಯವೇ? ಈಗ ಪವಿತ್ರ ನಾಡಹಬ್ಬ, ನವರಾತ್ರಿಗಳ ಸಂದರ್ಭ. ಸಮೀಕ್ಷೆ ನಡೆಸುವ ಅಂಗವಾಡಿ ಕಾರ್ಯಕರ್ತೆಯರು, ಶಿಕ್ಷಕರು, ಸರಕಾರಿ ಅಧಿಕಾರಿ -ಸಿಬ್ಬಂದಿಗೆ ಹಬ್ಬ, ಆಚರಣೆ, ಸಂಭ್ರಮ ಇರುವುದಿಲ್ಲವೇ? ನಿಮಗೆ ಮಾತ್ರವೇ ನವರಾತ್ರಿಯೇ? ಎಂದು ತೀಕ್ಷಣವಾಗಿ ಪ್ರಶ್ನಿಸಿದ್ದಾರೆ.

ನವದುರ್ಗೆಯರನ್ನು ಪೂಜಿಸುವ ಈ ಕಾಲದಲ್ಲಿ ಮಹಿಳೆಯರಿಗೆ ತಮ್ಮ ಮನೆಗಳಲ್ಲಿ ನೆರವೇರಿಸಲೇಬೇಕಾದ ಧಾರ್ಮಿಕ ಕಾರ್ಯಗಳು ಇರುತ್ತವೆ. ಈ ಸಮಯದಲ್ಲಿ ಸಮೀಕ್ಷೆ ಹೇಗೆ ಸಾಧ್ಯ? ಹೀಗಾಗಿ ಇದು ಸಮೀಕ್ಷೆಗೆ ಸಕಾಲವಲ್ಲ. ಮುಂದಕ್ಕೆ ಹಾಕಿ ಅಥವಾ ಸಮಯ ವಿಸ್ತರಿಸಿ. ಜನರಿಗೆ ಪ್ರಾಮಾಣಿಕ, ವಸ್ತುನಿಷ್ಠ, ಸತ್ಯನಿಷ್ಠ ಸಮೀಕ್ಷೆ ಬೇಕು. ಇಲ್ಲವಾದರೆ ಇದಕ್ಕೂ ಹಿಂದಿನ ಎರಡು ಸಮೀಕ್ಷಾ ವರದಿಗಳ ಗತಿಯೇ ಆಗಲಿದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಜನರ ತೆರಿಗೆ ಹಣ ಪೋಲಾಗಬೇಕೆ? ಇನ್ನೂ ಎಷ್ಟು ಕೋಟಿ ಖರ್ಚಾಗಬೇಕು? ಕೊನೇಪಕ್ಷ 3 ತಿಂಗಳ ಕಾಲಾವಕಾಶ ಬೇಕೇಬೇಕು. ಹಂತ ಹಂತವಾಗಿ ಸಮೀಕ್ಷೆ ನಡೆಸಿ. ಅದಕ್ಕೇನು ಸಮಸ್ಯೆ?ಆತುರಾತುರ ಸಮೀಕ್ಷೆ ಯಾರ ಆನಂದಕ್ಕೆ? ಎಲ್ಲರನ್ನೂ ಒಳಗೊಳ್ಳುವ, ಯಾವ ಸಮುದಾಯಕ್ಕೂ ಅನ್ಯಾಯ ಆಗದಂತೆ ಆದರ್ಶ ಸಮೀಕ್ಷೆ ಅಗತ್ಯ. ತಪ್ಪಿದರೆ ಈ ಸಮೀಕ್ಷೆಯ ಹಿಂದಿರುವ ಶಕ್ತಿಗಳಿಗೆ ಶಿಕ್ಷೆ ತಪ್ಪಿದ್ದಲ್ಲ ಎಂದು ಅವರು ಕಿವಿಮಾತು ಹೇಳಿದ್ದಾರೆ

ಆಂದೋಲನ ಡೆಸ್ಕ್

Recent Posts

ʼದಳಪತಿʼ ವಿಜಯ್‌ ಸೆಳೆಯಲು ಬಿಜೆಪಿ ತಂತ್ರ : ಡಿಸಿಎಂ ಸ್ಥಾನದ ಜತೆಗೆ 80 ಸ್ಥಾನದ ಆಫರ್‌!

ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್‌ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…

6 hours ago

ತಂಪೆರೆದ ಮಳೆ ; ಕೊಡಗು ಸೇರಿದಂತೆ ರಾಜ್ಯದ ಹಲವೆಡೆ ಮಳೆ

ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.‌15) ಸಂಜೆ ಅಕಾಲಿಕವಾಗಿ ಮಳೆ ಸುರಿದು…

6 hours ago

ಮಂಡ್ಯ | ನಾಲೆ ಅಭಿವೃದ್ಧಿಗೆ 100 ಕೋಟಿ ಅನುದಾನ ; ಶಾಸಕ ರವಿಕುಮಾರ್‌

ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…

7 hours ago

ಆದಿಚುಂಚನಗಿರಿ ಶ್ರೀಗಳ ನಡೆ ದಾರಿ ತಪ್ಪುತ್ತಿದೆ ಹೇಳಿಕೆ : ಕ್ಷೆಮೆಯಾಚಿಸಿದ ಶಾಸಕ ರಮೇಶ್‌ ಬಂಡಿಸಿದ್ದೇಗೌಡ

ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…

7 hours ago

ಎಚ್‌.ಡಿ.ಕೋಟೆ | ಬೈಕುಗಳ ನಡುವೆ ಡಿಕ್ಕಿ : ಓರ್ವ ಸಾವು

ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…

7 hours ago

ಭೀಕರ ಅಪಘಾತ : ಮೂವರು ಪೊಲೀಸ್ ಅಧಿಕಾರಿಗಳು ಸಾವು ; ಸ್ಥಳಕ್ಕೆ ಗೃಹ ಸಚಿವರ ಭೇಟಿ

ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…

7 hours ago