Kumaraswamy
ಬೆಂಗಳೂರು: ಆತುರಾತುರವಾಗಿ ಸೋಮವಾರದಿಂದ ಆರಂಭಿಸಲು ಉದ್ದೇಶಿಸಿರುವ ಶೈಕ್ಷಣಿಕ-ಸಾಮಾಜಿಕ ಸಮೀಕ್ಷೆಯನ್ನು ಮುಂದಕ್ಕೆ ಹಾಕಬೇಕು ಇಲ್ಲವೇ ಕನಿಷ್ಠ ಮೂರು ತಿಂಗಳಾದರೂ ವಿಸ್ತರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರಕಾರವನ್ನು ಒತ್ತಾಯ ಮಾಡಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಸಮೀಕ್ಷೆ ಬಗ್ಗೆ ನಮಗೇನೂ ತಕರಾರಿಲ್ಲ. ಸುಪ್ರೀಂ ಕೋರ್ಟ್ ಆದೇಶದಂತೆ ಕಾಲ ಕಾಲಕ್ಕೆ ಸಮೀಕ್ಷೆ ನಡೆಯಬೇಕು, ನಡೆಯಲಿ. ನಾನು ಬೇಡವೆನ್ನುವುದಿಲ್ಲ. ಆದರೆ, ಕೇವಲ ಹದಿನೈದೇ ದಿನದಲ್ಲಿ 6.5 ಕೋಟಿ ಜನರ ಸಮೀಕ್ಷೆ ಸಾಧ್ಯವೇ? ಈಗ ಪವಿತ್ರ ನಾಡಹಬ್ಬ, ನವರಾತ್ರಿಗಳ ಸಂದರ್ಭ. ಸಮೀಕ್ಷೆ ನಡೆಸುವ ಅಂಗವಾಡಿ ಕಾರ್ಯಕರ್ತೆಯರು, ಶಿಕ್ಷಕರು, ಸರಕಾರಿ ಅಧಿಕಾರಿ -ಸಿಬ್ಬಂದಿಗೆ ಹಬ್ಬ, ಆಚರಣೆ, ಸಂಭ್ರಮ ಇರುವುದಿಲ್ಲವೇ? ನಿಮಗೆ ಮಾತ್ರವೇ ನವರಾತ್ರಿಯೇ? ಎಂದು ತೀಕ್ಷಣವಾಗಿ ಪ್ರಶ್ನಿಸಿದ್ದಾರೆ.
ನವದುರ್ಗೆಯರನ್ನು ಪೂಜಿಸುವ ಈ ಕಾಲದಲ್ಲಿ ಮಹಿಳೆಯರಿಗೆ ತಮ್ಮ ಮನೆಗಳಲ್ಲಿ ನೆರವೇರಿಸಲೇಬೇಕಾದ ಧಾರ್ಮಿಕ ಕಾರ್ಯಗಳು ಇರುತ್ತವೆ. ಈ ಸಮಯದಲ್ಲಿ ಸಮೀಕ್ಷೆ ಹೇಗೆ ಸಾಧ್ಯ? ಹೀಗಾಗಿ ಇದು ಸಮೀಕ್ಷೆಗೆ ಸಕಾಲವಲ್ಲ. ಮುಂದಕ್ಕೆ ಹಾಕಿ ಅಥವಾ ಸಮಯ ವಿಸ್ತರಿಸಿ. ಜನರಿಗೆ ಪ್ರಾಮಾಣಿಕ, ವಸ್ತುನಿಷ್ಠ, ಸತ್ಯನಿಷ್ಠ ಸಮೀಕ್ಷೆ ಬೇಕು. ಇಲ್ಲವಾದರೆ ಇದಕ್ಕೂ ಹಿಂದಿನ ಎರಡು ಸಮೀಕ್ಷಾ ವರದಿಗಳ ಗತಿಯೇ ಆಗಲಿದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ಜನರ ತೆರಿಗೆ ಹಣ ಪೋಲಾಗಬೇಕೆ? ಇನ್ನೂ ಎಷ್ಟು ಕೋಟಿ ಖರ್ಚಾಗಬೇಕು? ಕೊನೇಪಕ್ಷ 3 ತಿಂಗಳ ಕಾಲಾವಕಾಶ ಬೇಕೇಬೇಕು. ಹಂತ ಹಂತವಾಗಿ ಸಮೀಕ್ಷೆ ನಡೆಸಿ. ಅದಕ್ಕೇನು ಸಮಸ್ಯೆ?ಆತುರಾತುರ ಸಮೀಕ್ಷೆ ಯಾರ ಆನಂದಕ್ಕೆ? ಎಲ್ಲರನ್ನೂ ಒಳಗೊಳ್ಳುವ, ಯಾವ ಸಮುದಾಯಕ್ಕೂ ಅನ್ಯಾಯ ಆಗದಂತೆ ಆದರ್ಶ ಸಮೀಕ್ಷೆ ಅಗತ್ಯ. ತಪ್ಪಿದರೆ ಈ ಸಮೀಕ್ಷೆಯ ಹಿಂದಿರುವ ಶಕ್ತಿಗಳಿಗೆ ಶಿಕ್ಷೆ ತಪ್ಪಿದ್ದಲ್ಲ ಎಂದು ಅವರು ಕಿವಿಮಾತು ಹೇಳಿದ್ದಾರೆ
ಪಿರಿಯಾಪಟ್ಟಣ: ಮೈಸೂರು ಜಿಲ್ಲೆಯ ಹಲವೆಡೆ ವರ್ಷದ ಮೊದಲ ಮಳೆಯಾಗುತ್ತಿದ್ದು, ಪಿರಿಯಾಪಟ್ಟಣದಲ್ಲಿ ಸಿಡಿಲು ಬಡಿದು ತೆಂಗಿನ ಮರ ಧಗಧಗನೇ ಹೊತ್ತಿ ಉರಿದಿದೆ.…
ಸರಗೂರು: ಕ್ಷೇತ್ರದ ಆದಿ ದೇವತೆ ಇಟ್ನಾ ಗ್ರಾಮದ ಶ್ರೀ ಚಿಕ್ಕದೇವಮ್ಮ ಬೆಟ್ಟದ ಯುಗಾದಿ ಹಬ್ಬದ ಜಾತ್ರಾ ಮಹೋತ್ಸವ ಮಾರ್ಚ್.19ರ ಯುಗಾದಿಯಂದು…
ಬೆಂಗಳೂರು: ವಿಧಾನಸಭೆಯಲ್ಲಿ ಅಪರೂಪದ ಅಚ್ಚರಿಯ ಪ್ರಸಂಗ ನಡೆದಿದ್ದು, ಸಚಿವರು ಹಾಗೂ ಅಧಿಕಾರಿಗಳ ವಿರುದ್ಧ ಗರಂ ಆದ ಸ್ಪೀಕರ್ ಯು.ಟಿ.ಖಾದರ್ ಅವರು…
ಮೈಸೂರು: ನಿತ್ಯ ಸಾವಿರಾರು ಜನರು ಓಡಾಡುವ ಫುಟ್ಪಾತ್ನಲ್ಲಿ ಈಗ ಅವೈಜ್ಞಾನಿಕ ಟಾಂಗಾ ಸ್ಟ್ಯಾಂಡ್ ನಿರ್ಮಾಣ ಮಾಡಲು ಮುಂದಾಗುತ್ತಿದ್ದು, ಪಾಲಿಕೆ ನಡೆಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಒಳಮೀಸಲಾತಿ ವಿಚಾರದಲ್ಲಿ ನಾಗಮೋಹನ್ ದಾಸ್ ನೀಡಿರುವ ವರದಿಯು ಅವೈಜ್ಞಾನಿಕವಾಗಿದ್ದು ಹಂಚಿಕೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಕಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…