ರಾಜ್ಯ

ಜಾತಿ ಗಣತಿ ಮುಂದಕ್ಕೆ ಹಾಕಿ ಇಲ್ಲವೇ ವಿಸ್ತರಿಸಿ : ಎಚ್‌ಡಿಕೆ ಒತ್ತಾಯ

ಬೆಂಗಳೂರು: ಆತುರಾತುರವಾಗಿ ಸೋಮವಾರದಿಂದ ಆರಂಭಿಸಲು ಉದ್ದೇಶಿಸಿರುವ ಶೈಕ್ಷಣಿಕ-ಸಾಮಾಜಿಕ ಸಮೀಕ್ಷೆಯನ್ನು ಮುಂದಕ್ಕೆ ಹಾಕಬೇಕು ಇಲ್ಲವೇ ಕನಿಷ್ಠ ಮೂರು ತಿಂಗಳಾದರೂ ವಿಸ್ತರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರಕಾರವನ್ನು ಒತ್ತಾಯ ಮಾಡಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಸಮೀಕ್ಷೆ ಬಗ್ಗೆ ನಮಗೇನೂ ತಕರಾರಿಲ್ಲ. ಸುಪ್ರೀಂ ಕೋರ್ಟ್ ಆದೇಶದಂತೆ ಕಾಲ ಕಾಲಕ್ಕೆ ಸಮೀಕ್ಷೆ ನಡೆಯಬೇಕು, ನಡೆಯಲಿ. ನಾನು ಬೇಡವೆನ್ನುವುದಿಲ್ಲ. ಆದರೆ, ಕೇವಲ ಹದಿನೈದೇ ದಿನದಲ್ಲಿ 6.5 ಕೋಟಿ ಜನರ ಸಮೀಕ್ಷೆ ಸಾಧ್ಯವೇ? ಈಗ ಪವಿತ್ರ ನಾಡಹಬ್ಬ, ನವರಾತ್ರಿಗಳ ಸಂದರ್ಭ. ಸಮೀಕ್ಷೆ ನಡೆಸುವ ಅಂಗವಾಡಿ ಕಾರ್ಯಕರ್ತೆಯರು, ಶಿಕ್ಷಕರು, ಸರಕಾರಿ ಅಧಿಕಾರಿ -ಸಿಬ್ಬಂದಿಗೆ ಹಬ್ಬ, ಆಚರಣೆ, ಸಂಭ್ರಮ ಇರುವುದಿಲ್ಲವೇ? ನಿಮಗೆ ಮಾತ್ರವೇ ನವರಾತ್ರಿಯೇ? ಎಂದು ತೀಕ್ಷಣವಾಗಿ ಪ್ರಶ್ನಿಸಿದ್ದಾರೆ.

ನವದುರ್ಗೆಯರನ್ನು ಪೂಜಿಸುವ ಈ ಕಾಲದಲ್ಲಿ ಮಹಿಳೆಯರಿಗೆ ತಮ್ಮ ಮನೆಗಳಲ್ಲಿ ನೆರವೇರಿಸಲೇಬೇಕಾದ ಧಾರ್ಮಿಕ ಕಾರ್ಯಗಳು ಇರುತ್ತವೆ. ಈ ಸಮಯದಲ್ಲಿ ಸಮೀಕ್ಷೆ ಹೇಗೆ ಸಾಧ್ಯ? ಹೀಗಾಗಿ ಇದು ಸಮೀಕ್ಷೆಗೆ ಸಕಾಲವಲ್ಲ. ಮುಂದಕ್ಕೆ ಹಾಕಿ ಅಥವಾ ಸಮಯ ವಿಸ್ತರಿಸಿ. ಜನರಿಗೆ ಪ್ರಾಮಾಣಿಕ, ವಸ್ತುನಿಷ್ಠ, ಸತ್ಯನಿಷ್ಠ ಸಮೀಕ್ಷೆ ಬೇಕು. ಇಲ್ಲವಾದರೆ ಇದಕ್ಕೂ ಹಿಂದಿನ ಎರಡು ಸಮೀಕ್ಷಾ ವರದಿಗಳ ಗತಿಯೇ ಆಗಲಿದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಜನರ ತೆರಿಗೆ ಹಣ ಪೋಲಾಗಬೇಕೆ? ಇನ್ನೂ ಎಷ್ಟು ಕೋಟಿ ಖರ್ಚಾಗಬೇಕು? ಕೊನೇಪಕ್ಷ 3 ತಿಂಗಳ ಕಾಲಾವಕಾಶ ಬೇಕೇಬೇಕು. ಹಂತ ಹಂತವಾಗಿ ಸಮೀಕ್ಷೆ ನಡೆಸಿ. ಅದಕ್ಕೇನು ಸಮಸ್ಯೆ?ಆತುರಾತುರ ಸಮೀಕ್ಷೆ ಯಾರ ಆನಂದಕ್ಕೆ? ಎಲ್ಲರನ್ನೂ ಒಳಗೊಳ್ಳುವ, ಯಾವ ಸಮುದಾಯಕ್ಕೂ ಅನ್ಯಾಯ ಆಗದಂತೆ ಆದರ್ಶ ಸಮೀಕ್ಷೆ ಅಗತ್ಯ. ತಪ್ಪಿದರೆ ಈ ಸಮೀಕ್ಷೆಯ ಹಿಂದಿರುವ ಶಕ್ತಿಗಳಿಗೆ ಶಿಕ್ಷೆ ತಪ್ಪಿದ್ದಲ್ಲ ಎಂದು ಅವರು ಕಿವಿಮಾತು ಹೇಳಿದ್ದಾರೆ

ಆಂದೋಲನ ಡೆಸ್ಕ್

Recent Posts

ವಡ್ಡರದೊಡ್ಡಿ ಮನೆಯೊಂದರಲ್ಲಿ ಕಳ್ಳತನ

ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…

11 hours ago

ಕೇಂದ್ರ ಸಚಿವ ಜಾರ್ಜ್ ಕುರಿಯನ್ ರಾಜೀನಾಮೆ

ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…

12 hours ago

ಕಾರು ಪಲ್ಟಿ: ಐವರಿಗೆ ಗಾಯ

ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…

13 hours ago

ಶಾಂತಳ್ಳಿ: ಮುಂದುವರೆದ ಕಾಡಾನೆ ಹಾವಳಿ

ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…

13 hours ago

ಕರ್ನಾಟಕದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಕೆ

ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.‌28ರವರೆಗೂ ಕರ್ನಾಟಕದಲ್ಲಿ ಮಳೆ…

14 hours ago

ಭಾರತದಲ್ಲಿ ಟೆಲಿಗ್ರಾಂ ನಿಷೇಧ ತೆರವು

ನವದೆಹಲಿ: ನೀಟ್‌ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್‌ ಹಾಗೂ…

16 hours ago