ರಾಜ್ಯ

ಜಾತಿ ಗಣತಿ ಮುಂದಕ್ಕೆ ಹಾಕಿ ಇಲ್ಲವೇ ವಿಸ್ತರಿಸಿ : ಎಚ್‌ಡಿಕೆ ಒತ್ತಾಯ

ಬೆಂಗಳೂರು: ಆತುರಾತುರವಾಗಿ ಸೋಮವಾರದಿಂದ ಆರಂಭಿಸಲು ಉದ್ದೇಶಿಸಿರುವ ಶೈಕ್ಷಣಿಕ-ಸಾಮಾಜಿಕ ಸಮೀಕ್ಷೆಯನ್ನು ಮುಂದಕ್ಕೆ ಹಾಕಬೇಕು ಇಲ್ಲವೇ ಕನಿಷ್ಠ ಮೂರು ತಿಂಗಳಾದರೂ ವಿಸ್ತರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರಕಾರವನ್ನು ಒತ್ತಾಯ ಮಾಡಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಸಮೀಕ್ಷೆ ಬಗ್ಗೆ ನಮಗೇನೂ ತಕರಾರಿಲ್ಲ. ಸುಪ್ರೀಂ ಕೋರ್ಟ್ ಆದೇಶದಂತೆ ಕಾಲ ಕಾಲಕ್ಕೆ ಸಮೀಕ್ಷೆ ನಡೆಯಬೇಕು, ನಡೆಯಲಿ. ನಾನು ಬೇಡವೆನ್ನುವುದಿಲ್ಲ. ಆದರೆ, ಕೇವಲ ಹದಿನೈದೇ ದಿನದಲ್ಲಿ 6.5 ಕೋಟಿ ಜನರ ಸಮೀಕ್ಷೆ ಸಾಧ್ಯವೇ? ಈಗ ಪವಿತ್ರ ನಾಡಹಬ್ಬ, ನವರಾತ್ರಿಗಳ ಸಂದರ್ಭ. ಸಮೀಕ್ಷೆ ನಡೆಸುವ ಅಂಗವಾಡಿ ಕಾರ್ಯಕರ್ತೆಯರು, ಶಿಕ್ಷಕರು, ಸರಕಾರಿ ಅಧಿಕಾರಿ -ಸಿಬ್ಬಂದಿಗೆ ಹಬ್ಬ, ಆಚರಣೆ, ಸಂಭ್ರಮ ಇರುವುದಿಲ್ಲವೇ? ನಿಮಗೆ ಮಾತ್ರವೇ ನವರಾತ್ರಿಯೇ? ಎಂದು ತೀಕ್ಷಣವಾಗಿ ಪ್ರಶ್ನಿಸಿದ್ದಾರೆ.

ನವದುರ್ಗೆಯರನ್ನು ಪೂಜಿಸುವ ಈ ಕಾಲದಲ್ಲಿ ಮಹಿಳೆಯರಿಗೆ ತಮ್ಮ ಮನೆಗಳಲ್ಲಿ ನೆರವೇರಿಸಲೇಬೇಕಾದ ಧಾರ್ಮಿಕ ಕಾರ್ಯಗಳು ಇರುತ್ತವೆ. ಈ ಸಮಯದಲ್ಲಿ ಸಮೀಕ್ಷೆ ಹೇಗೆ ಸಾಧ್ಯ? ಹೀಗಾಗಿ ಇದು ಸಮೀಕ್ಷೆಗೆ ಸಕಾಲವಲ್ಲ. ಮುಂದಕ್ಕೆ ಹಾಕಿ ಅಥವಾ ಸಮಯ ವಿಸ್ತರಿಸಿ. ಜನರಿಗೆ ಪ್ರಾಮಾಣಿಕ, ವಸ್ತುನಿಷ್ಠ, ಸತ್ಯನಿಷ್ಠ ಸಮೀಕ್ಷೆ ಬೇಕು. ಇಲ್ಲವಾದರೆ ಇದಕ್ಕೂ ಹಿಂದಿನ ಎರಡು ಸಮೀಕ್ಷಾ ವರದಿಗಳ ಗತಿಯೇ ಆಗಲಿದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಜನರ ತೆರಿಗೆ ಹಣ ಪೋಲಾಗಬೇಕೆ? ಇನ್ನೂ ಎಷ್ಟು ಕೋಟಿ ಖರ್ಚಾಗಬೇಕು? ಕೊನೇಪಕ್ಷ 3 ತಿಂಗಳ ಕಾಲಾವಕಾಶ ಬೇಕೇಬೇಕು. ಹಂತ ಹಂತವಾಗಿ ಸಮೀಕ್ಷೆ ನಡೆಸಿ. ಅದಕ್ಕೇನು ಸಮಸ್ಯೆ?ಆತುರಾತುರ ಸಮೀಕ್ಷೆ ಯಾರ ಆನಂದಕ್ಕೆ? ಎಲ್ಲರನ್ನೂ ಒಳಗೊಳ್ಳುವ, ಯಾವ ಸಮುದಾಯಕ್ಕೂ ಅನ್ಯಾಯ ಆಗದಂತೆ ಆದರ್ಶ ಸಮೀಕ್ಷೆ ಅಗತ್ಯ. ತಪ್ಪಿದರೆ ಈ ಸಮೀಕ್ಷೆಯ ಹಿಂದಿರುವ ಶಕ್ತಿಗಳಿಗೆ ಶಿಕ್ಷೆ ತಪ್ಪಿದ್ದಲ್ಲ ಎಂದು ಅವರು ಕಿವಿಮಾತು ಹೇಳಿದ್ದಾರೆ

ಆಂದೋಲನ ಡೆಸ್ಕ್

Recent Posts

ಪಶ್ಚಿಮ ಬಂಗಾಳ | ಸುವೇಂದು ಅಧಿಕಾರಿ ನೂತನ ಮುಖ್ಯಮಂತ್ರಿ

ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಟಿಎಂಸಿ ಆಡಳಿತಕ್ಕೆ ತೆರೆ ಎಳೆದು ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೇ…

1 hour ago

ಟಿವಿಕೆಗೆ ಎಡಪಕ್ಷಗಳ ಬೆಂಬಲ : ಬಹುಮತದ ಸೀಟಿ ಊದಿಯೇ ಬಿಟ್ಟ ದಳಪತಿ ವಿಜಯ್‌

ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಟಿವಿಕೆ ಸರ್ಕಾರ ರಚಿಸಲು…

1 hour ago

ತಮಿಳುನಾಡಿನಲ್ಲಿ ವಿಜಯ್‌ ಸಾಧನೆ ಎಲ್ಲರಿಗೂ ಅಚ್ಚರಿ ತಂದಿದೆ : ಕೇಂದ್ರ ಸಚಿವ ಎಚ್‌ಡಿಕೆ

ಹಾಸನ : ಮಾಧ್ಯಮಗಳಲ್ಲಿ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವರದಿಗಳು ಹರಿದಾಡುತ್ತಿದ್ದವು. ಆದರೆ ವಿಜಯ್‌ ಅವರ ಈಗಿನ ಸಾಧನೆಯನ್ನು…

3 hours ago

ಹೊರ್ಮುಜ್‌ ಜಲಸಂಧಿಯಿಂದ ನುಗ್ಗಿಬಂದ ಅಮೆರಿಕದ ಯುದ್ಧನೌಕೆಗಳು : ಇರಾನ್‌ನಿಂದ ದಾಳಿ

ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…

4 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ದೇಶದ ಪ್ರವಾಸೋದ್ಯಮವೂ, ಚಲನಚಿತ್ರ ಪ್ರವಾಸೋದ್ಯಮವೂ

ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…

6 hours ago

ವೈಭವದ ವಸಂತ ಮಹಲ್‌ಗೆ ಬೇಕಿದೆ ಕಾಯಕಲ್ಪ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಗರಿಮೆಯ ಕಿರೀಟದಂತಿರುವ, ಅಚ್ಚ ಹಸಿರಿನ ನಡುವಿನ ೧೮೩ ವರ್ಷಗಳ ಇತಿಹಾಸವಿರುವ ಅರಮ ನೆಯೊಂದು…

7 hours ago