Kumaraswamy
ಬೆಂಗಳೂರು: ಆತುರಾತುರವಾಗಿ ಸೋಮವಾರದಿಂದ ಆರಂಭಿಸಲು ಉದ್ದೇಶಿಸಿರುವ ಶೈಕ್ಷಣಿಕ-ಸಾಮಾಜಿಕ ಸಮೀಕ್ಷೆಯನ್ನು ಮುಂದಕ್ಕೆ ಹಾಕಬೇಕು ಇಲ್ಲವೇ ಕನಿಷ್ಠ ಮೂರು ತಿಂಗಳಾದರೂ ವಿಸ್ತರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರಕಾರವನ್ನು ಒತ್ತಾಯ ಮಾಡಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಸಮೀಕ್ಷೆ ಬಗ್ಗೆ ನಮಗೇನೂ ತಕರಾರಿಲ್ಲ. ಸುಪ್ರೀಂ ಕೋರ್ಟ್ ಆದೇಶದಂತೆ ಕಾಲ ಕಾಲಕ್ಕೆ ಸಮೀಕ್ಷೆ ನಡೆಯಬೇಕು, ನಡೆಯಲಿ. ನಾನು ಬೇಡವೆನ್ನುವುದಿಲ್ಲ. ಆದರೆ, ಕೇವಲ ಹದಿನೈದೇ ದಿನದಲ್ಲಿ 6.5 ಕೋಟಿ ಜನರ ಸಮೀಕ್ಷೆ ಸಾಧ್ಯವೇ? ಈಗ ಪವಿತ್ರ ನಾಡಹಬ್ಬ, ನವರಾತ್ರಿಗಳ ಸಂದರ್ಭ. ಸಮೀಕ್ಷೆ ನಡೆಸುವ ಅಂಗವಾಡಿ ಕಾರ್ಯಕರ್ತೆಯರು, ಶಿಕ್ಷಕರು, ಸರಕಾರಿ ಅಧಿಕಾರಿ -ಸಿಬ್ಬಂದಿಗೆ ಹಬ್ಬ, ಆಚರಣೆ, ಸಂಭ್ರಮ ಇರುವುದಿಲ್ಲವೇ? ನಿಮಗೆ ಮಾತ್ರವೇ ನವರಾತ್ರಿಯೇ? ಎಂದು ತೀಕ್ಷಣವಾಗಿ ಪ್ರಶ್ನಿಸಿದ್ದಾರೆ.
ನವದುರ್ಗೆಯರನ್ನು ಪೂಜಿಸುವ ಈ ಕಾಲದಲ್ಲಿ ಮಹಿಳೆಯರಿಗೆ ತಮ್ಮ ಮನೆಗಳಲ್ಲಿ ನೆರವೇರಿಸಲೇಬೇಕಾದ ಧಾರ್ಮಿಕ ಕಾರ್ಯಗಳು ಇರುತ್ತವೆ. ಈ ಸಮಯದಲ್ಲಿ ಸಮೀಕ್ಷೆ ಹೇಗೆ ಸಾಧ್ಯ? ಹೀಗಾಗಿ ಇದು ಸಮೀಕ್ಷೆಗೆ ಸಕಾಲವಲ್ಲ. ಮುಂದಕ್ಕೆ ಹಾಕಿ ಅಥವಾ ಸಮಯ ವಿಸ್ತರಿಸಿ. ಜನರಿಗೆ ಪ್ರಾಮಾಣಿಕ, ವಸ್ತುನಿಷ್ಠ, ಸತ್ಯನಿಷ್ಠ ಸಮೀಕ್ಷೆ ಬೇಕು. ಇಲ್ಲವಾದರೆ ಇದಕ್ಕೂ ಹಿಂದಿನ ಎರಡು ಸಮೀಕ್ಷಾ ವರದಿಗಳ ಗತಿಯೇ ಆಗಲಿದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ಜನರ ತೆರಿಗೆ ಹಣ ಪೋಲಾಗಬೇಕೆ? ಇನ್ನೂ ಎಷ್ಟು ಕೋಟಿ ಖರ್ಚಾಗಬೇಕು? ಕೊನೇಪಕ್ಷ 3 ತಿಂಗಳ ಕಾಲಾವಕಾಶ ಬೇಕೇಬೇಕು. ಹಂತ ಹಂತವಾಗಿ ಸಮೀಕ್ಷೆ ನಡೆಸಿ. ಅದಕ್ಕೇನು ಸಮಸ್ಯೆ?ಆತುರಾತುರ ಸಮೀಕ್ಷೆ ಯಾರ ಆನಂದಕ್ಕೆ? ಎಲ್ಲರನ್ನೂ ಒಳಗೊಳ್ಳುವ, ಯಾವ ಸಮುದಾಯಕ್ಕೂ ಅನ್ಯಾಯ ಆಗದಂತೆ ಆದರ್ಶ ಸಮೀಕ್ಷೆ ಅಗತ್ಯ. ತಪ್ಪಿದರೆ ಈ ಸಮೀಕ್ಷೆಯ ಹಿಂದಿರುವ ಶಕ್ತಿಗಳಿಗೆ ಶಿಕ್ಷೆ ತಪ್ಪಿದ್ದಲ್ಲ ಎಂದು ಅವರು ಕಿವಿಮಾತು ಹೇಳಿದ್ದಾರೆ
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…