yathindra siddaramaiah
ಚಿಕ್ಕೋಡಿ : ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಯಾವುದೇ ಪ್ರತಿಕ್ರಿಯೆ ನೀಡದೇ ಅಂತರ ಕಾಯ್ದುಕೊಳ್ಳುವ ಪ್ರಯತ್ನ ನಡೆಸಿದರು.
ಬೆಳಗಾವಿ ಜಿಲ್ಲೆಯ ಕಾಗವಾಡ ತಾಲ್ಲೂಕಿನ ಕವಲಗುಡ್ಡ ಗ್ರಾಮದಲ್ಲಿ ನಡೆದ ಖಾಸಗಿ ಶಾಲೆಯ ವಾರ್ಷಿಕೋತ್ಸವದಲ್ಲಿ ಭಾಗಿಯಾಗಿದ್ದ ಅವರು, ಸುದ್ದಿಗಾರರ ಪ್ರಶ್ನೆಗಳಿಗೆ ಅತೀ ಜಾಗರೂಕತೆಯಿಂದ ಉತ್ತರಿಸಿದರು. ಸಿಎಂ ಬದಲಾವಣೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಯತೀಂದ್ರ, ಸಿಎಂ ಬದಲಾವಣೆ ಬಗ್ಗೆ ನಾನು ಈಗಾಗಲೇ ಹೇಳಿಕೆ ನೀಡಿದ್ದೇನೆ. ಅದರ ಬಗ್ಗೆ ಮತ್ತೊಮ್ಮೆ ನಾನು ಏನನ್ನೂ ಹೇಳಬೇಕಿಲ್ಲ. ಸ್ವತಃ ಮುಖ್ಯಮಂತ್ರಿಗಳೇ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಅಧಿಕಾರ ಯಾರಿಗೂ ಶಾಶ್ವತವಲ್ಲ ಹೀಗಾಗಿ ಈ ವಿಚಾರದಲ್ಲಿ ನಾನು ಹೆಚ್ಚಿಗೆ ಮಾತನಾಡುವುದು ಸರಿಯಲ್ಲ ಎಂದು ಹೇಳುವ ಮೂಲಕ ಚರ್ಚೆಗೆ ಪೂರ್ಣವಿರಾಮ ಇಡಲು ಪ್ರಯತ್ನಿಸಿದರು. ಈ ಹಿಂದೆ ’ಐದು ವರ್ಷ ನಮ್ಮಪ್ಪನೇ ಸಿಎಂ’ ಎಂದು ಹೇಳಿಕೆ ನೀಡುವ ಮೂಲಕ ಯತೀಂದ್ರ ಅವರು ಪಕ್ಷದೊಳಗೆ ಆಂತರಿಕ ಸಂಘರ್ಷಕ್ಕೆ ಕಾರಣವಾಗಿದ್ದರು.
ಹಿಂದುಳಿದವರ, ದೀನ ದಲಿತರ, ಅಲ್ಪಸಂಖ್ಯಾತರ ಶ್ರೇಯಸ್ಸಿಗಾಗಿ ತಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಗಲಿರುಳು ಶ್ರಮಿಸುತ್ತಿದ್ದು ಅವರ ಇಚ್ಛೆಯಂತೆ ತಾವು ಕೂಡಾ ನಡೆಯುವುದಾಗಿ, ಅಹಿಂದ ಜನರ ಪರವಾಗಿ ಶ್ರಮಿಸುವುದಾಗಿ ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…
ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…
ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…
ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…
ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…