ಚಿತ್ರದುರ್ಗ: ರಾಜ್ಯದಲ್ಲಿ ಅಧಿಕಾರ ಹಂಚಿಕೆ ಒಪ್ಪಂದದ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಈ ಬಗ್ಗೆ ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ಅಧಿಕಾರದ ಹಂಚಿಕೆ ಬಗ್ಗೆ ಕೇಳಿದರೆ ಅದಕ್ಕೆ ಉತ್ತರಿಸಲು ಆಗಲ್ಲ. ಸಚಿವ ಡಾ.ಜಿ.ಪರಮೇಶ್ವರ್ ಹೇಳಿಕೆಯ ಕುರಿತಾಗಿ ಅವರನ್ನೇ ಕೇಳಿ ಎಂದರು.
ಒಂದು ಪಕ್ಷದಲ್ಲಿ, ಕುಟುಂಬದಲ್ಲಿ ಘರ್ಷಣೆಗಳು ನಡೆಯುವುದು ಸಹಜ. ನಾವು ಸಚಿವರಾಗಿ ಕೆಲಸ ಮಾಡುತ್ತಿದ್ದೇವೆ. ಈಗ ಸಿಎಂ, ಕೆಪಿಸಿಸಿ ಅಧ್ಯಕ್ಷ ಹುದ್ದೆಯ ಚರ್ಚೆ ಅನಗತ್ಯ. 2028ಕ್ಕೆ ನಾವು ಸಿಎಂ ಹುದ್ದೆಗೆ ಪ್ರಯತ್ನ ಮಾಡುತ್ತೇವೆ ಎಂದು ಹೇಳಿದರು.
ಇನ್ನು ರಾಜ್ಯದಲ್ಲಿ ಅಧಿಕಾರ ಹಂಚಿಕೆ ಒಪ್ಪಂದ ಕುರಿತಂತೆ ಇತ್ತೀಚೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದರು. ಆದರೆ ಸಿಎಂ ಸಿದ್ದರಾಮಯ್ಯ ಇದನ್ನು ಅಲ್ಲಗೆಳೆದರು. ಅಧಿಕಾರ ಹಂಚಿಕೆ ಕುರಿತಂತೆ ಸಚಿವ ಜಿ.ಪರಮೇಶ್ವರ್ ಅವರು ಸಹ ಆಕ್ಷೇಪಿಸಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಇಬ್ಬರೇ ಒಪ್ಪಂದ ಮಾಡಿಕೊಂಡರೆ ನಾವೆಲ್ಲಾ ಯಾಕಿರಬೇಕು ಎಂದು ಪ್ರಶ್ನೆ ಮಾಡಿದ್ದರು. ರಾಜ್ಯದಲ್ಲಿ ಅಧಿಕಾರ ಹಂಚಿಕೆ ಒಪ್ಪಂದ ಆಗಿರುವುದು ನಿಜ. ಈ ಬಗ್ಗೆ ಡಿಕೆಶಿ ಹಾಗೂ ಸಿದ್ದರಾಮಯ್ಯ ಅವರನ್ನೇ ಕೇಳಿ ಎಂದರು.
ಹುಣಸೂರು: ತಾಲ್ಲೂಕಿನ ಬಿಳಿಕೆರೆ ಗ್ರಾಮದ ಕೆರೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಒಡಿಶಾ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿಕೊಂಡು ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆಗೆ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಳೆ ಮತದಾನ ನಡೆಯಲಿದೆ. ನಾಳೆ ಉತ್ತರ ಬಂಗಾಳದ ಎಲ್ಲಾ 152…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಕ್ಕಾಗಿ ಚುನಾವಣಾ ಆಯೋಗವು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ…
ಬೆಂಗಳೂರು: ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.…
ನವದೆಹಲಿ: ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು ಪ್ರಸಾರ ಭಾರತಿ ಹಿಂತೆಗೆದುಕೊಂಡಿದೆ. ಉತ್ತರ ಕರ್ನಾಟಕ ಜನರ ಒತ್ತಾಸೆ, ಅಭಿಲಾಷೆಯಂತೆ…