ಚಿತ್ರದುರ್ಗ: ರಾಜ್ಯದಲ್ಲಿ ಅಧಿಕಾರ ಹಂಚಿಕೆ ಒಪ್ಪಂದದ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಈ ಬಗ್ಗೆ ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ಅಧಿಕಾರದ ಹಂಚಿಕೆ ಬಗ್ಗೆ ಕೇಳಿದರೆ ಅದಕ್ಕೆ ಉತ್ತರಿಸಲು ಆಗಲ್ಲ. ಸಚಿವ ಡಾ.ಜಿ.ಪರಮೇಶ್ವರ್ ಹೇಳಿಕೆಯ ಕುರಿತಾಗಿ ಅವರನ್ನೇ ಕೇಳಿ ಎಂದರು.
ಒಂದು ಪಕ್ಷದಲ್ಲಿ, ಕುಟುಂಬದಲ್ಲಿ ಘರ್ಷಣೆಗಳು ನಡೆಯುವುದು ಸಹಜ. ನಾವು ಸಚಿವರಾಗಿ ಕೆಲಸ ಮಾಡುತ್ತಿದ್ದೇವೆ. ಈಗ ಸಿಎಂ, ಕೆಪಿಸಿಸಿ ಅಧ್ಯಕ್ಷ ಹುದ್ದೆಯ ಚರ್ಚೆ ಅನಗತ್ಯ. 2028ಕ್ಕೆ ನಾವು ಸಿಎಂ ಹುದ್ದೆಗೆ ಪ್ರಯತ್ನ ಮಾಡುತ್ತೇವೆ ಎಂದು ಹೇಳಿದರು.
ಇನ್ನು ರಾಜ್ಯದಲ್ಲಿ ಅಧಿಕಾರ ಹಂಚಿಕೆ ಒಪ್ಪಂದ ಕುರಿತಂತೆ ಇತ್ತೀಚೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದರು. ಆದರೆ ಸಿಎಂ ಸಿದ್ದರಾಮಯ್ಯ ಇದನ್ನು ಅಲ್ಲಗೆಳೆದರು. ಅಧಿಕಾರ ಹಂಚಿಕೆ ಕುರಿತಂತೆ ಸಚಿವ ಜಿ.ಪರಮೇಶ್ವರ್ ಅವರು ಸಹ ಆಕ್ಷೇಪಿಸಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಇಬ್ಬರೇ ಒಪ್ಪಂದ ಮಾಡಿಕೊಂಡರೆ ನಾವೆಲ್ಲಾ ಯಾಕಿರಬೇಕು ಎಂದು ಪ್ರಶ್ನೆ ಮಾಡಿದ್ದರು. ರಾಜ್ಯದಲ್ಲಿ ಅಧಿಕಾರ ಹಂಚಿಕೆ ಒಪ್ಪಂದ ಆಗಿರುವುದು ನಿಜ. ಈ ಬಗ್ಗೆ ಡಿಕೆಶಿ ಹಾಗೂ ಸಿದ್ದರಾಮಯ್ಯ ಅವರನ್ನೇ ಕೇಳಿ ಎಂದರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…