ರಾಜ್ಯ

ಅಧಿಕಾರ ಹಂಚಿಕೆ ದೊಂಬರಾಟದಂತಿದೆ : ಎಚ್.ಡಿ.ದೇವೇಗೌಡ ಟೀಕೆ

ಬೆಂಗಳೂರು : ಅಧಿಕಾರ ಹಸ್ತಾಂತರದ ವಿಚಾರದಲ್ಲಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಹೈಡ್ರಾಮ ಆಡುತ್ತಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಟೀಕಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಈ ಹಿಂದೆ ಗ್ರಾಮೀಣ ಭಾಗದಲ್ಲಿ ದೊಂಬರಾಟ ಆಡುತ್ತಿದ್ದರು. ಅದು ನೆನಪಿಸುವಂತಿದೆ ಎಂದು ಆರೋಪಿಸಿದರು.

ಉಪಮುಖ್ಯಮಂತ್ರಿ ಡಿಕೆಶಿಯವರು ಮಾಡುತ್ತಿರುವಷ್ಟು ದೇವರ ಪೂಜೆಯನ್ನು ನಾನೂ ಮಾಡಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರೂ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.

ಇದನ್ನೂ ಓದಿ:-ಮಂತ್ರಾಲಯಕ್ಕೆ ಭೇಟಿ ನೀಡಿದ ನಟ ರಿಷಬ್‌ ಶೆಟ್ಟಿ ಕುಟುಂಬ

ಲೋಕಸಭೆ ವಿರೋಧಪಕ್ಷದ ನಾಯಕ ರಾಹುಲ್‍ಗಾಂಧಿಯವರಿಗೆ ವೋಟ್ ಚೋರಿ ವಿಚಾರ ಮಾತ್ರ ಗೊತ್ತು. ಆದರೆ ಕರ್ನಾಟಕದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ತೆಲಂಗಾಣಕ್ಕೆ ಹೋಗಿದ್ದೂ ಸೇರಿದಂತೆ ಬೇರೆಬೇರೆ ವಿಚಾರಗಳ ಬಗ್ಗೆ ಅರಿವೇ ಇಲ್ಲ ಎಂದು ಟೀಕಿಸಿದರು.

ನರೇಗಾ ಹೆಸರು ಬದಲಾವಣೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಗೌಡರು, ಕಾಂಗ್ರೆಸ್ ನವರಿಗೆ ಮಹಾತ್ಮ ಗಾಂಧಿಯವರ ಬಗ್ಗೆ ಎಲ್ಲಿಲ್ಲದ ಪ್ರೀತಿ ಅಭಿಮಾನ ಈಗ ಹೃದಯದಿಂದ ಬಂದಿದೆ. ಈ ಹಿಂದೆ ದೇಶದ ಪ್ರಧಾನಿಯಾಗಿದ್ದ ಪಂಡಿತ್ ಜವಹರಲಾಲ್ ನೆಹರೂ, ಇಂದಿರಾಗಾಂಧಿಯವರ ಕಾಲದಲ್ಲಿ ಅವರು ಗಾಂಧಿ ಫೋಟೊಗಳನ್ನೇ ಬಳಸುತ್ತಿರಲಿಲ್ಲ. ಒಂದು ವೇಳೆ ಅವರು ಪ್ರಚಾರದ ಸಂದರ್ಭದಲ್ಲಿ ಗಾಂಧೀಜಿ ಫೋಟೊ ಬಳಸಿರುವುದನ್ನು ಸಾಬೀತುಪಡಿಸಿದರೆ ನಾನು ನೀಡಿರುವ ಹೇಳಿಕೆಯನ್ನು ವಾಪಸ್ ಪಡೆಯುತ್ತೇನೆ ಎಂದರು.

ಆಂದೋಲನ ಡೆಸ್ಕ್

Recent Posts

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

3 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

10 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

10 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

10 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

10 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

10 hours ago