ಲೋಕಸಭಾ ಚುನಾವಣೆಯಲ್ಲಿ ವಿವಿಧ ಮಾಧ್ಯಮಗಳಾದ ದಿನಪತ್ರಿಕೆಗಳು,ಟಿ.ವಿ,ಕೇಬಲ್ ನೆಟ್ವರ್ಕ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುವ ಕಾರ್ಯಕ್ರಮಗಳ ಮೇಲೆ ಎಂ.ಸಿ.ಎಂ.ಸಿ ಸಮಿತಿ ವತಿಯಿಂದ ನಿಗಾವಹಿಸಲಾಗುತ್ತಿದ್ದು ಚುನಾವಣಾ ಜಾಹೀರಾತುಗಳಿಗೆ ಪೂರ್ವಾನುಮತಿ ಕಡ್ಡಾಯವಾಗಿರುತ್ತದೆ.
ಜಿಲ್ಲಾಧಿಕಾರಿ ಕಛೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾಧ್ಯಮ ಪ್ರಮಾಣೀಕರಣ ಹಾಗೂ ಮೇಲುಸ್ತುವಾರಿ ಸಮಿತಿ ( ಎಂ.ಸಿ.ಎಂ.ಸಿ) ವಿವಿಧ ಮಾಧ್ಯಮಗಳಲ್ಲಿ ದಿನನಿತ್ಯ ಪ್ರಸಾರವಾಗುವ ಸುದ್ದಿ, ಜಾಹೀರಾತುಗಳಲ್ಲಿ ಯಾವುದಾದರೂ ಉಲ್ಲಂಘನೆ ವರದಿಗಳು ಕಂಡುಬಂದರೆ ಅಥವ ವಿದ್ಯುನ್ಮಾನ ಮಾಧ್ಯಮ ಅಥವಾ ಸಾಮಾಜಿಕ ಜಾಲತಾಣಗಳಲ್ಲಿ ಎಂ.ಸಿ.ಎಂ.ಸಿ ಸಮಿತಿಯ ಅನುಮತಿಯಿಲ್ಲದೆ ಜಾಹೀರಾತು ಪ್ರಕಟಿಸುವಂತಿಲ್ಲ,ಒಂದು ವೇಳೆ ಸಮಿತಿಯ ಪೂರ್ವಾನುಮತಿ ಇಲ್ಲದೇ ಜಾಹೀರಾತು ಪ್ರಕಟಿಸಿದರೆ ಸಂಬಂಧಿಸಿದ ಅಭ್ಯರ್ಥಿಗಳಿಗೆ ನೋಟೀಸ್ ನೀಡಲಾಗುವುದು.
ವಿದ್ಯುನ್ಮಾನ ಮಾಧ್ಯಮ (ಎಲಕ್ಟ್ರಾನಿಕ್ ) ಗಳಾದ ಟಿ.ವಿ,ರೇಡಿಯೋ, ಮೊಬೈಲ್ ಸಂದೇಶ, ಧ್ವನಿ ಮುದ್ರಿತ ಸಂದೇಶಗಳು, ಬಲ್ಕ್ ಎಸ್.ಎಂ.ಎಸ್ ಹಾಗೂ ಸಾಮಾಜಿಕ ಜಾಲತಾಣಗಳಾದ, ಪೇಸ್ ಬುಕ್, ಎಕ್ಸ್ , ಇನ್ಸ್ಟಾಗ್ರಾಂ, ಗಳಲ್ಲಿ ಪ್ರಚಾರ ಕೈಗೊಳ್ಳುವವರು ಎಂ.ಸಿ.ಎಂ.ಸಿ ಪೂರ್ವಾನುಮತಿ ಪಡೆಯಬೇಕು.
ಪತ್ರಿಕೆಗಳಲ್ಲಿ ಜಾಹೀರಾತು ಪ್ರಕಟಣೆಗೆ ಮತದಾನ ಹಾಗೂ ಮತದಾನದ ಮುನ್ನಾದಿನ ಅಂದರೆ ಏಪ್ರಿಲ್ 26 ಹಾಗೂ 27 ರಂದು ಜಾಹೀರಾತು ಪ್ರಕಟಣೆಗೆ ಪೂರ್ವಾನುಮತಿ ಕಡ್ಡಾಯ.
ಪಾವತಿ ಸುದ್ದಿ ( ಪೇಯ್ಡ್ ನ್ಯೂಸ್) ನೈತಿಕ ಮತದಾನಕ್ಕೆ ವಿರುದ್ದವಾದ ನಡೆಯಾಗಿದ್ದು, ಪಾವತಿ ಸುದ್ದಿ ಪ್ರಕಟಿಸುವ ಮಾಧ್ಯಮಗಳ ವಿರುದ್ದ ಕ್ರಮ ಜರುಗಿಸಲಾಗುವುದು, ಪುನರಾವರ್ತನೆ ಆದರೆ ದಂಡ ವಿಧಿಸುವುದರೊಂದಿಗೆ ಪತ್ರಿಕೆಗಳಿಗಾದರೆ ಪಿ.ಸಿ.ಐ ಹಾಗೂ ಟಿ.ವಿ.ಮಾಧ್ಯಮಗಳಿಗೆ ಎನ್.ಬಿ.ಎಸ್.ಎ ಸಂಸ್ಥೆಗಳಿಗೆ ಕ್ರಮಕ್ಕೆ ಶಿಫಾರಸು ಮಾಡಲಾಗುವುದು. ಪತ್ರಿಕೆಗಳು ಮತದಾನ ಹಾಗೂ ಮತದಾನದ ಮುನ್ನಾದಿನ ಪೂರ್ವಾನುಮತಿ ಪಡೆದು ಜಾಹೀರಾತು ಪ್ರಕಟಿಸಬೇಕಾಗುತ್ತದೆ
ಅಭ್ಯರ್ಥಿಗಳು ಅಥವಾ ರಾಜಕೀಯ ಪಕ್ಷಗಳು ಜಾಹೀರಾತು ಪ್ರಕಟಣೆಗೆ ಅನುಮತಿ ಪಡೆಯಲು ನಿಗದಿತ ನಮೂನೆಗಳಲ್ಲಿ ಎಂ.ಸಿ.ಎಂ.ಸಿ ಸಮಿತಿಗೆ ಅರ್ಜಿ ಸಲ್ಲಿಸಬೇಕು ಎಂದು ಚುನಾವಣಾಧಿಕಾರಿ ಹಾಗೂ ಎಂ.ಸಿ.ಎಂ.ಸಿ ಸಮಿತಿಯ ಅಧ್ಯಕ್ಷರಾದ ಡಾ.ರಾಜೇಂದ್ರ ಕೆ.ವಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…
ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…
ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…
11 ಯೋಧರಿಗೆ ಗಂಭೀರ ಗಾಯ ಭದೇರ್ವಾ : ದೋಡಾ ಜಿಲ್ಲೆಯ ಥನಾಲಾದ ಮೇಲ್ಭಾಗದ ಪ್ರದೇಶದಲ್ಲಿನ ಭದೇರ್ವಾ-ಚಂಬಾ ರಸ್ತೆಯಲ್ಲಿ ಗುರುವಾರ ಸೇನಾ…
ಬೆಂಗಳೂರು : ಬಿಗ್ ಬಾಸ್ ಮುಗಿದ ಮೇಲೂ ಗಿಲ್ಲಿ ನಟನ ಕ್ರೇಜ್ ಕಮ್ಮಿಯಾಗಿಲ್ಲ. ಹೋದ ಕಡೆ, ಬಂದಕಡೆ ಅಭಿಮಾನಿಗಳು ಮುತ್ತಿಕೊಳ್ಳುತ್ತಿದ್ದು,…
ಹೈದರಾಬಾದ್ : ಕಳೆದ ಕೆಲವು ದಿನಗಳಿಂದ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪುತ್ತಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗುರುವಾರ ಇದ್ದಕ್ಕಿದ್ದಂತೆ…