ರಾಜ್ಯ

ಚುನಾವಣಾ ಜಾಹೀರಾತುಗಳಿಗೆ ಪೂರ್ವಾನುಮತಿ ಕಡ್ಡಾಯ

‌ಲೋಕಸಭಾ ಚುನಾವಣೆಯಲ್ಲಿ ವಿವಿಧ ಮಾಧ್ಯಮಗಳಾದ ದಿನಪತ್ರಿಕೆಗಳು,ಟಿ.ವಿ,ಕೇಬಲ್ ನೆಟ್ವರ್ಕ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುವ ಕಾರ್ಯಕ್ರಮಗಳ ಮೇಲೆ ಎಂ.ಸಿ.ಎಂ.ಸಿ ಸಮಿತಿ ವತಿಯಿಂದ ನಿಗಾವಹಿಸಲಾಗುತ್ತಿದ್ದು ಚುನಾವಣಾ ಜಾಹೀರಾತುಗಳಿಗೆ ಪೂರ್ವಾನುಮತಿ ಕಡ್ಡಾಯವಾಗಿರುತ್ತದೆ.

ಜಿಲ್ಲಾಧಿಕಾರಿ ಕಛೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾಧ್ಯಮ ಪ್ರಮಾಣೀಕರಣ ಹಾಗೂ ಮೇಲುಸ್ತುವಾರಿ ಸಮಿತಿ ( ಎಂ.ಸಿ.ಎಂ.ಸಿ) ವಿವಿಧ ಮಾಧ್ಯಮಗಳಲ್ಲಿ ದಿನನಿತ್ಯ ಪ್ರಸಾರವಾಗುವ ಸುದ್ದಿ, ಜಾಹೀರಾತುಗಳಲ್ಲಿ ಯಾವುದಾದರೂ ಉಲ್ಲಂಘನೆ ವರದಿಗಳು ಕಂಡುಬಂದರೆ ಅಥವ ವಿದ್ಯುನ್ಮಾನ ಮಾಧ್ಯಮ ಅಥವಾ ಸಾಮಾಜಿಕ ಜಾಲತಾಣಗಳಲ್ಲಿ ಎಂ.ಸಿ.ಎಂ.ಸಿ ಸಮಿತಿಯ ಅನುಮತಿಯಿಲ್ಲದೆ ಜಾಹೀರಾತು ಪ್ರಕಟಿಸುವಂತಿಲ್ಲ,ಒಂದು ವೇಳೆ ಸಮಿತಿಯ ಪೂರ್ವಾನುಮತಿ ಇಲ್ಲದೇ ಜಾಹೀರಾತು ಪ್ರಕಟಿಸಿದರೆ ಸಂಬಂಧಿಸಿದ ಅಭ್ಯರ್ಥಿಗಳಿಗೆ ನೋಟೀಸ್ ನೀಡಲಾಗುವುದು.

ವಿದ್ಯುನ್ಮಾನ ಮಾಧ್ಯಮ (ಎಲಕ್ಟ್ರಾನಿಕ್ ) ಗಳಾದ ಟಿ.ವಿ,ರೇಡಿಯೋ, ಮೊಬೈಲ್ ಸಂದೇಶ, ಧ್ವನಿ ಮುದ್ರಿತ ಸಂದೇಶಗಳು, ಬಲ್ಕ್ ಎಸ್.ಎಂ.ಎಸ್ ಹಾಗೂ ಸಾಮಾಜಿಕ ಜಾಲತಾಣಗಳಾದ, ಪೇಸ್ ಬುಕ್, ಎಕ್ಸ್ , ಇನ್ಸ್ಟಾಗ್ರಾಂ, ಗಳಲ್ಲಿ ಪ್ರಚಾರ ಕೈಗೊಳ್ಳುವವರು ಎಂ.ಸಿ.ಎಂ.ಸಿ ಪೂರ್ವಾನುಮತಿ ಪಡೆಯಬೇಕು.

ಪತ್ರಿಕೆಗಳಲ್ಲಿ ಜಾಹೀರಾತು ಪ್ರಕಟಣೆಗೆ ಮತದಾನ ಹಾಗೂ ಮತದಾನದ ಮುನ್ನಾದಿನ ಅಂದರೆ ಏಪ್ರಿಲ್ 26 ಹಾಗೂ 27 ರಂದು ಜಾಹೀರಾತು ಪ್ರಕಟಣೆಗೆ ಪೂರ್ವಾನುಮತಿ ಕಡ್ಡಾಯ.

ಪಾವತಿ ಸುದ್ದಿ ( ಪೇಯ್ಡ್ ನ್ಯೂಸ್) ನೈತಿಕ ಮತದಾನಕ್ಕೆ ವಿರುದ್ದವಾದ ನಡೆಯಾಗಿದ್ದು, ಪಾವತಿ ಸುದ್ದಿ ಪ್ರಕಟಿಸುವ ಮಾಧ್ಯಮಗಳ ವಿರುದ್ದ ಕ್ರಮ ಜರುಗಿಸಲಾಗುವುದು, ಪುನರಾವರ್ತನೆ ಆದರೆ ದಂಡ ವಿಧಿಸುವುದರೊಂದಿಗೆ ಪತ್ರಿಕೆಗಳಿಗಾದರೆ ಪಿ.ಸಿ.ಐ ಹಾಗೂ ಟಿ.ವಿ.ಮಾಧ್ಯಮಗಳಿಗೆ ಎನ್.ಬಿ.ಎಸ್.ಎ ಸಂಸ್ಥೆಗಳಿಗೆ ಕ್ರಮಕ್ಕೆ ಶಿಫಾರಸು ಮಾಡಲಾಗುವುದು. ಪತ್ರಿಕೆಗಳು ಮತದಾನ ಹಾಗೂ ಮತದಾನದ ಮುನ್ನಾದಿನ ಪೂರ್ವಾನುಮತಿ ಪಡೆದು ಜಾಹೀರಾತು ಪ್ರಕಟಿಸಬೇಕಾಗುತ್ತದೆ

ಅಭ್ಯರ್ಥಿಗಳು ಅಥವಾ ರಾಜಕೀಯ ಪಕ್ಷಗಳು ಜಾಹೀರಾತು ಪ್ರಕಟಣೆಗೆ ಅನುಮತಿ ಪಡೆಯಲು ನಿಗದಿತ ನಮೂನೆಗಳಲ್ಲಿ ಎಂ.ಸಿ.ಎಂ.ಸಿ ಸಮಿತಿಗೆ ಅರ್ಜಿ ಸಲ್ಲಿಸಬೇಕು ಎಂದು ಚುನಾವಣಾಧಿಕಾರಿ ಹಾಗೂ ಎಂ.ಸಿ.ಎಂ.ಸಿ ಸಮಿತಿಯ ಅಧ್ಯಕ್ಷರಾದ ಡಾ.ರಾಜೇಂದ್ರ ಕೆ.ವಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

39 mins ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

4 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

8 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

10 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

11 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

12 hours ago