ಚಿಕ್ಕಬಳ್ಳಾಪುರ: ಮೊನ್ನೆಯಷ್ಟೇ (ಜೂನ್ 4) ಬಹುನಿರೀಕ್ಷಿತ ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಎನ್ಡಿಎ ಮೈತ್ರಿಕೂಟ ಬಹುಮತ ಪಡೆದುಕೊಂಡಿತು. ರಾಜ್ಯದಲ್ಲಿ ಬಿಜೆಪಿ 17, ಜೆಡಿಎಸ್ 2 ಮತ್ತು ಕಾಂಗ್ರೆಸ್ 9 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದವು.
ಫಲಿತಾಂಶ ಹೊರಬಿದ್ದ ಬಳಿಕ ಶಾಸಕ ಪ್ರದೀಪ್ ಈಶ್ವರ್ ಚಿಕ್ಕಬಳ್ಳಾಪುರ ಕ್ಷೇತ್ರದ ಫಲಿತಾಂಶದ ಕುರಿತು ತಾವು ನೀಡಿದ್ದ ಹೇಳಿಕೆಯಿಂದಾಗಿ ತೀವ್ರ ಟ್ರೋಲ್ಗೆ ಒಳಗಾದರು. ಚುನಾವಣೆಗೂ ಮುನ್ನ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೆ. ಸುಧಾಕರ್ ಕಾಂಗ್ರೆಸ್ ಅಭ್ಯರ್ಥಿಗಿಂತ ಕೇವಲ ಒಂದು ಮತ ಹೆಚ್ಚು ಲೀಡ್ ಪಡೆದರೂ ನಾನು ರಾಜೀನಾಮೆ ನೀಡುತ್ತೇನೆ ಎಂದು ಹೇಳಿಕೆ ನೀಡಿದ್ದರು.
ಈ ಹೇಳಿಕೆ ಟ್ರೋಲ್ ಆಗಿದ್ದು ಮಾತ್ರವಲ್ಲದೇ ಪ್ರದೀಪ್ ಈಶ್ವರ್ ಕೊಟ್ಟ ಮಾತಿನಂತೆ ರಾಜೀನಾಮೆ ಪತ್ರ ಬರೆದಿದ್ದಾರೆ ಎಂದು ಪತ್ರವೊಂದೂ ಸಹ ವೈರಲ್ ಆಯಿತು. ಆದರೆ ಅಸಲಿಯತ್ತೇನೆಂದರೆ ಈ ಪತ್ರ ನಕಲಿಯಾಗಿದೆ. ಈ ಬಗ್ಗೆ ಸ್ವತಃ ಪ್ರದೀಪ್ ಈಶ್ವರ್ ಸಹ ಪ್ರತಿಕ್ರಿಯಿಸಿದ್ದು, ಇದೊಂದು ನಕಲಿ ಪತ್ರ, ಆ ಪತ್ರಕ್ಕೂ ನನಗೂ ಸಂಬಂಧವಿಲ್ಲ, ಕಿಡಿಗೇಡಿಗಳು ನಕಲಿ ರಾಜೀನಾಮೆ ಪತ್ರ ಹರಿಬಿಟ್ಟಿದ್ದಾರೆ, ಈ ಬಗ್ಗೆ ನಾನು ಕಾನೂನು ಕ್ರಮ ಕೈಗೊಳ್ಳುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ.
ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು…
ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…
ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್ ಆಗಿದೆ. ಅಕ್ಟೋಬರ್.11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…
ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…
ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…
ಬೀಜಿಂಗ್: ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…