Mysore
28
overcast clouds

Social Media

ಶನಿವಾರ, 11 ಏಪ್ರಿಲ 2026
Light
Dark

ತನ್ನ ಎಡೆಯಲ್ಲಿ ಕತ್ತೆ ಸತ್ತು ಬಿದ್ದಿದ್ರೂ ಬಿಜೆಪಿ ಮೇಲೆ ಗೂಬೆ ಕೂರಿಸೋದು ಸರಿಯಲ್ಲ : ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ : ಕಾಂಗ್ರೆಸ್‌ ತನ್ನ ಎಡೆಯಲ್ಲಿ ಕತ್ತೆ ಸತ್ತು ಬಿದ್ದಿದ್ದರು ಬಿಜೆಪಿಯವರ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ ಎಂದು ಕಾಂಗ್ರೆಸ್‌ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಸಚಿವರೊಬ್ಬರು ಸಿಎಂ ಡಿಸಿಎಂ ಚರ್ಚೆ ವಿವಾದ ಹುಟ್ಟು ಹಾಕುವಲ್ಲಿ ಬಿಜೆಪಿ ಕೈವಾಡವಿದೆ ಎಂದಿದ್ದಾರೆ. ಈ ಬಗ್ಗೆ ಯಾವ ಆಧಾರವಿದೆ. ಇದು ಸತ್ಯಕ್ಕೆ ದೂರವಾದ ಸಂಗತಿ. ಮೂವರು ಡಿಸಿಎಂ ಸೃಷ್ಟಿ ಹಾಗೂ ಸಿಎಂ ಬದಲಾವಣೆ ವಿಚಾರ ಕಾಂಗ್ರೆಸ್‌ ನ ಆಂತರಿಕ ವಿಚಾರ. ಆದರೆ ಬಿಜೆಪಿ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳಿದರು.

ಅಲ್ಲದೆ ರಾಜ್ಯದಲ್ಲಿ ಮೂವರು ಡಿಸಿಎಂಗಳ ಸ್ಥಾನ ಸೃಷ್ಠಿಸುವ ಕೂಗಿನ ಹಿಂದೆ ನೇರ ಸಿಎಂ ಸಿದ್ದರಾಮಯ್ಯ ಅವರದ್ದೇ ಪಾತ್ರವಿದೆ ಎಂದು ಆರೋಪಿಸಿದರು.  ಈ ವಿಚಾರದಲ್ಲಿ ಬಿಜೆಪಿ ಯಾರ ಪರವೂ ಇಲ್ಲ ಅಥವಾ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್‌ ವಿರುದ್ಧವೂ ಅಲ್ಲ. ಇದು ಕಾಂಗ್ರೆಸ್‌ ಆಂತರಿಕ ವಿಚಾರ. ಈ ವಿವಾದದ ಹಿನ್ನಲೆಯಲ್ಲಿ ಡಿಕೆ ಶಿವಕುಮಾರ್‌ ಶಾಸಕರಿಗೆ, ಸಚಿವರಿಗೆ ಎಚ್ಚರಿಕೆ ಕೊಟ್ಟಿದ್ದಾರೆ. ಆದರೆ ಸಿದ್ದರಾಮಯ್ಯ ಮಾತ್ರ ಮೌನ ತಾಳಿದ್ದಾರೆ. ಡಿಸಿಎಂ ಬಗ್ಗೆ ಚರ್ಚೆ ಮಾಡಬೇಡಿ ಎಂದು ಯಾರಿಗೂ ಹೇಳಿಲ್ಲ ಯಾಕೆ..? ಇದರ ಹಿಂದೆ ಇರುವ ಮರ್ಮವೇನು ಎಂದು ಪ್ರಹ್ಲಾದ್‌ ಜೋಶಿ ಪ್ರಶ್ನೆ ಮಾಡಿದರು.

 

Tags:
error: Content is protected !!