ಹುಬ್ಬಳ್ಳಿ : ಕಾಂಗ್ರೆಸ್ ತನ್ನ ಎಡೆಯಲ್ಲಿ ಕತ್ತೆ ಸತ್ತು ಬಿದ್ದಿದ್ದರು ಬಿಜೆಪಿಯವರ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ ಎಂದು ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಸಚಿವರೊಬ್ಬರು ಸಿಎಂ ಡಿಸಿಎಂ ಚರ್ಚೆ ವಿವಾದ ಹುಟ್ಟು ಹಾಕುವಲ್ಲಿ ಬಿಜೆಪಿ ಕೈವಾಡವಿದೆ ಎಂದಿದ್ದಾರೆ. ಈ ಬಗ್ಗೆ ಯಾವ ಆಧಾರವಿದೆ. ಇದು ಸತ್ಯಕ್ಕೆ ದೂರವಾದ ಸಂಗತಿ. ಮೂವರು ಡಿಸಿಎಂ ಸೃಷ್ಟಿ ಹಾಗೂ ಸಿಎಂ ಬದಲಾವಣೆ ವಿಚಾರ ಕಾಂಗ್ರೆಸ್ ನ ಆಂತರಿಕ ವಿಚಾರ. ಆದರೆ ಬಿಜೆಪಿ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳಿದರು.
ಅಲ್ಲದೆ ರಾಜ್ಯದಲ್ಲಿ ಮೂವರು ಡಿಸಿಎಂಗಳ ಸ್ಥಾನ ಸೃಷ್ಠಿಸುವ ಕೂಗಿನ ಹಿಂದೆ ನೇರ ಸಿಎಂ ಸಿದ್ದರಾಮಯ್ಯ ಅವರದ್ದೇ ಪಾತ್ರವಿದೆ ಎಂದು ಆರೋಪಿಸಿದರು. ಈ ವಿಚಾರದಲ್ಲಿ ಬಿಜೆಪಿ ಯಾರ ಪರವೂ ಇಲ್ಲ ಅಥವಾ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ವಿರುದ್ಧವೂ ಅಲ್ಲ. ಇದು ಕಾಂಗ್ರೆಸ್ ಆಂತರಿಕ ವಿಚಾರ. ಈ ವಿವಾದದ ಹಿನ್ನಲೆಯಲ್ಲಿ ಡಿಕೆ ಶಿವಕುಮಾರ್ ಶಾಸಕರಿಗೆ, ಸಚಿವರಿಗೆ ಎಚ್ಚರಿಕೆ ಕೊಟ್ಟಿದ್ದಾರೆ. ಆದರೆ ಸಿದ್ದರಾಮಯ್ಯ ಮಾತ್ರ ಮೌನ ತಾಳಿದ್ದಾರೆ. ಡಿಸಿಎಂ ಬಗ್ಗೆ ಚರ್ಚೆ ಮಾಡಬೇಡಿ ಎಂದು ಯಾರಿಗೂ ಹೇಳಿಲ್ಲ ಯಾಕೆ..? ಇದರ ಹಿಂದೆ ಇರುವ ಮರ್ಮವೇನು ಎಂದು ಪ್ರಹ್ಲಾದ್ ಜೋಶಿ ಪ್ರಶ್ನೆ ಮಾಡಿದರು.
ಬೆಂಗಳೂರು: ಕೊಳ್ಳೇಗಾಲ ನಗರಸಭೆ ವ್ಯಾಪ್ತಿಯ ಬಸ್ತೀಪುರದ ಬಡ ಕುಟುಂಬಗಳಿಗೆ ಹಕ್ಕು ಪತ್ರ ನೀಡುವ ಬಗ್ಗೆ ಸ್ಥಳೀಯ ಶಾಸಕರೊಂದಿಗೆ ಚರ್ಚಿಸಿ ಕ್ರಮ…
ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು…
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.…
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…