ಹುಬ್ಬಳ್ಳಿ : ಕಾಂಗ್ರೆಸ್ ತನ್ನ ಎಡೆಯಲ್ಲಿ ಕತ್ತೆ ಸತ್ತು ಬಿದ್ದಿದ್ದರು ಬಿಜೆಪಿಯವರ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ ಎಂದು ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಸಚಿವರೊಬ್ಬರು ಸಿಎಂ ಡಿಸಿಎಂ ಚರ್ಚೆ ವಿವಾದ ಹುಟ್ಟು ಹಾಕುವಲ್ಲಿ ಬಿಜೆಪಿ ಕೈವಾಡವಿದೆ ಎಂದಿದ್ದಾರೆ. ಈ ಬಗ್ಗೆ ಯಾವ ಆಧಾರವಿದೆ. ಇದು ಸತ್ಯಕ್ಕೆ ದೂರವಾದ ಸಂಗತಿ. ಮೂವರು ಡಿಸಿಎಂ ಸೃಷ್ಟಿ ಹಾಗೂ ಸಿಎಂ ಬದಲಾವಣೆ ವಿಚಾರ ಕಾಂಗ್ರೆಸ್ ನ ಆಂತರಿಕ ವಿಚಾರ. ಆದರೆ ಬಿಜೆಪಿ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳಿದರು.
ಅಲ್ಲದೆ ರಾಜ್ಯದಲ್ಲಿ ಮೂವರು ಡಿಸಿಎಂಗಳ ಸ್ಥಾನ ಸೃಷ್ಠಿಸುವ ಕೂಗಿನ ಹಿಂದೆ ನೇರ ಸಿಎಂ ಸಿದ್ದರಾಮಯ್ಯ ಅವರದ್ದೇ ಪಾತ್ರವಿದೆ ಎಂದು ಆರೋಪಿಸಿದರು. ಈ ವಿಚಾರದಲ್ಲಿ ಬಿಜೆಪಿ ಯಾರ ಪರವೂ ಇಲ್ಲ ಅಥವಾ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ವಿರುದ್ಧವೂ ಅಲ್ಲ. ಇದು ಕಾಂಗ್ರೆಸ್ ಆಂತರಿಕ ವಿಚಾರ. ಈ ವಿವಾದದ ಹಿನ್ನಲೆಯಲ್ಲಿ ಡಿಕೆ ಶಿವಕುಮಾರ್ ಶಾಸಕರಿಗೆ, ಸಚಿವರಿಗೆ ಎಚ್ಚರಿಕೆ ಕೊಟ್ಟಿದ್ದಾರೆ. ಆದರೆ ಸಿದ್ದರಾಮಯ್ಯ ಮಾತ್ರ ಮೌನ ತಾಳಿದ್ದಾರೆ. ಡಿಸಿಎಂ ಬಗ್ಗೆ ಚರ್ಚೆ ಮಾಡಬೇಡಿ ಎಂದು ಯಾರಿಗೂ ಹೇಳಿಲ್ಲ ಯಾಕೆ..? ಇದರ ಹಿಂದೆ ಇರುವ ಮರ್ಮವೇನು ಎಂದು ಪ್ರಹ್ಲಾದ್ ಜೋಶಿ ಪ್ರಶ್ನೆ ಮಾಡಿದರು.
ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕು ದೊಡ್ಡಕವಲಂದೆ ಹೋಬಳಿಯ ದೊಡ್ಡಕವಲಂದೆ ಗ್ರಾಮದ ಕಾಂತರಾಜು ಮತ್ತು ಮಹೇಶ್ವರಿ ದಂಪತಿಗಳ ಪುತ್ರ ಮಹದೇವ…
ಗುಂಡ್ಲುಪೇಟೆ: ಬೇಟೆಯಾಡಲು ಹೋದ ಚಿರತೆಯೊಂದು ಮುಳ್ಳುಹಂದಿ ದಾಳಿಗೆ ಸಿಲುಕಿ ಬಲಿಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಬೊಮ್ಮನಹಳ್ಳಿಯಲ್ಲಿ ನಡೆದಿದೆ.…
ಬೆಂಗಳೂರು: ಕರ್ನಾಟಕ ಸರ್ಕಾರದ 2026ನೇ ಸಾಲಿನ 10ನೇ ಸಚಿವ ಸಂಪುಟ ಸಭೆಯಲ್ಲಿ ಏಪ್ರಿಲ್.16ರಂದು ಕರೆಯಲಾಗಿದೆ. ಏಪ್ರಿಲ್.16ರ ಸಂಜೆ 4.30ಕ್ಕೆ ವಿಧಾನಸೌಧದ…
ಬೆಂಗಳೂರು: ಬಿಬಿಎಂಪಿ ಹೆಸರು ಬದಲಿಸಿ ಜಿಬಿಎ ಮಾಡಿದ್ದೇ ಕಾಂಗ್ರೆಸ್ ಸರ್ಕಾರದ ಸಾಧನೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್…
ವಾಷಿಂಗ್ಟನ್ : ನಾಸಾದ ಐತಿಹಾಸಿಕ ಆರ್ಟೆಮಿಸ್-2 ಮಿಷನ್ ಯಶಸ್ವಿಯಾಗಿ ಪೂರ್ಣಗೊಂಡಿದೆ. ಚಂದ್ರನನ್ನು ಸುತ್ತುವಳಿ ಮಾಡಿ ಭೂಮಿಗೆ ವಾಪಸಾಗುವ ಮೊದಲ ಕ್ರೂಡ್…
ಇಸ್ಲಾಮಾಬಾದ್ : ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧವನ್ನು ಕೊನೆಗೊಳಿಸುವ ಉದ್ದೇಶದಿಂದ ಇಸ್ಲಾಮಾಬಾದ್ನಲ್ಲಿ ಆಯೋಜಿಸಲಾಗಿರುವ ಐತಿಹಾಸಿಕ ಶಾಂತಿ ಮಾತುಕತೆಗೆ ಇರಾನ್…