ಹುಬ್ಬಳ್ಳಿ : ಕಾಂಗ್ರೆಸ್ ತನ್ನ ಎಡೆಯಲ್ಲಿ ಕತ್ತೆ ಸತ್ತು ಬಿದ್ದಿದ್ದರು ಬಿಜೆಪಿಯವರ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ ಎಂದು ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಸಚಿವರೊಬ್ಬರು ಸಿಎಂ ಡಿಸಿಎಂ ಚರ್ಚೆ ವಿವಾದ ಹುಟ್ಟು ಹಾಕುವಲ್ಲಿ ಬಿಜೆಪಿ ಕೈವಾಡವಿದೆ ಎಂದಿದ್ದಾರೆ. ಈ ಬಗ್ಗೆ ಯಾವ ಆಧಾರವಿದೆ. ಇದು ಸತ್ಯಕ್ಕೆ ದೂರವಾದ ಸಂಗತಿ. ಮೂವರು ಡಿಸಿಎಂ ಸೃಷ್ಟಿ ಹಾಗೂ ಸಿಎಂ ಬದಲಾವಣೆ ವಿಚಾರ ಕಾಂಗ್ರೆಸ್ ನ ಆಂತರಿಕ ವಿಚಾರ. ಆದರೆ ಬಿಜೆಪಿ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳಿದರು.
ಅಲ್ಲದೆ ರಾಜ್ಯದಲ್ಲಿ ಮೂವರು ಡಿಸಿಎಂಗಳ ಸ್ಥಾನ ಸೃಷ್ಠಿಸುವ ಕೂಗಿನ ಹಿಂದೆ ನೇರ ಸಿಎಂ ಸಿದ್ದರಾಮಯ್ಯ ಅವರದ್ದೇ ಪಾತ್ರವಿದೆ ಎಂದು ಆರೋಪಿಸಿದರು. ಈ ವಿಚಾರದಲ್ಲಿ ಬಿಜೆಪಿ ಯಾರ ಪರವೂ ಇಲ್ಲ ಅಥವಾ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ವಿರುದ್ಧವೂ ಅಲ್ಲ. ಇದು ಕಾಂಗ್ರೆಸ್ ಆಂತರಿಕ ವಿಚಾರ. ಈ ವಿವಾದದ ಹಿನ್ನಲೆಯಲ್ಲಿ ಡಿಕೆ ಶಿವಕುಮಾರ್ ಶಾಸಕರಿಗೆ, ಸಚಿವರಿಗೆ ಎಚ್ಚರಿಕೆ ಕೊಟ್ಟಿದ್ದಾರೆ. ಆದರೆ ಸಿದ್ದರಾಮಯ್ಯ ಮಾತ್ರ ಮೌನ ತಾಳಿದ್ದಾರೆ. ಡಿಸಿಎಂ ಬಗ್ಗೆ ಚರ್ಚೆ ಮಾಡಬೇಡಿ ಎಂದು ಯಾರಿಗೂ ಹೇಳಿಲ್ಲ ಯಾಕೆ..? ಇದರ ಹಿಂದೆ ಇರುವ ಮರ್ಮವೇನು ಎಂದು ಪ್ರಹ್ಲಾದ್ ಜೋಶಿ ಪ್ರಶ್ನೆ ಮಾಡಿದರು.
ಡಾ.ಎಂ.ಡಿ.ಉಮೇಶ್, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ…
ಡಾಕ್ಟರ್ ಮೆಹತಾ ಮತ್ತು ನಾನು ಅವರ ಮಿತ್ರನ ಮನೆಗೆ ಹೋದೆವು. ಅವರು ನನ್ನ ವಿಷಯದಲ್ಲಿ ತುಂಬಾ ಕರುಣೆ ಮತ್ತು ಆದರವುಳ್ಳವರಾಗಿದ್ದರು.…
ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…
ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…
ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ…