ಹುಬ್ಬಳ್ಳಿ : ಕಾಂಗ್ರೆಸ್ ತನ್ನ ಎಡೆಯಲ್ಲಿ ಕತ್ತೆ ಸತ್ತು ಬಿದ್ದಿದ್ದರು ಬಿಜೆಪಿಯವರ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ ಎಂದು ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಸಚಿವರೊಬ್ಬರು ಸಿಎಂ ಡಿಸಿಎಂ ಚರ್ಚೆ ವಿವಾದ ಹುಟ್ಟು ಹಾಕುವಲ್ಲಿ ಬಿಜೆಪಿ ಕೈವಾಡವಿದೆ ಎಂದಿದ್ದಾರೆ. ಈ ಬಗ್ಗೆ ಯಾವ ಆಧಾರವಿದೆ. ಇದು ಸತ್ಯಕ್ಕೆ ದೂರವಾದ ಸಂಗತಿ. ಮೂವರು ಡಿಸಿಎಂ ಸೃಷ್ಟಿ ಹಾಗೂ ಸಿಎಂ ಬದಲಾವಣೆ ವಿಚಾರ ಕಾಂಗ್ರೆಸ್ ನ ಆಂತರಿಕ ವಿಚಾರ. ಆದರೆ ಬಿಜೆಪಿ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳಿದರು.
ಅಲ್ಲದೆ ರಾಜ್ಯದಲ್ಲಿ ಮೂವರು ಡಿಸಿಎಂಗಳ ಸ್ಥಾನ ಸೃಷ್ಠಿಸುವ ಕೂಗಿನ ಹಿಂದೆ ನೇರ ಸಿಎಂ ಸಿದ್ದರಾಮಯ್ಯ ಅವರದ್ದೇ ಪಾತ್ರವಿದೆ ಎಂದು ಆರೋಪಿಸಿದರು. ಈ ವಿಚಾರದಲ್ಲಿ ಬಿಜೆಪಿ ಯಾರ ಪರವೂ ಇಲ್ಲ ಅಥವಾ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ವಿರುದ್ಧವೂ ಅಲ್ಲ. ಇದು ಕಾಂಗ್ರೆಸ್ ಆಂತರಿಕ ವಿಚಾರ. ಈ ವಿವಾದದ ಹಿನ್ನಲೆಯಲ್ಲಿ ಡಿಕೆ ಶಿವಕುಮಾರ್ ಶಾಸಕರಿಗೆ, ಸಚಿವರಿಗೆ ಎಚ್ಚರಿಕೆ ಕೊಟ್ಟಿದ್ದಾರೆ. ಆದರೆ ಸಿದ್ದರಾಮಯ್ಯ ಮಾತ್ರ ಮೌನ ತಾಳಿದ್ದಾರೆ. ಡಿಸಿಎಂ ಬಗ್ಗೆ ಚರ್ಚೆ ಮಾಡಬೇಡಿ ಎಂದು ಯಾರಿಗೂ ಹೇಳಿಲ್ಲ ಯಾಕೆ..? ಇದರ ಹಿಂದೆ ಇರುವ ಮರ್ಮವೇನು ಎಂದು ಪ್ರಹ್ಲಾದ್ ಜೋಶಿ ಪ್ರಶ್ನೆ ಮಾಡಿದರು.
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…
ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ…
ನವೀನ್ ಡಿಸೋಜ ಶೀತ, ಕೆಮ್ಮು, ಜ್ವರ ಸಂಬಂಧ ೩,೭೬೨ ಪ್ರಕರಣ ದಾಖಲು; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ:…
ಮಹಾದೇಶ್ ಎಂ.ಗೌಡ ಹನೂರು: ಕುಡಿಯುವ ನೀರು, ಮೇವಿಗೂ ತೀವ್ರ ಹಾಹಾಕಾರ ಹನೂರು: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು,…