ಹುಬ್ಬಳ್ಳಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಪಕ್ಷ ಹೀನಾಯ ಸೋಲು ಕಂಡಿದ್ದು, ನಕರಾತ್ಮಕ ತಂತ್ರಗಳಿಂದ ರಾಜಕೀಯ ಮಾಡುತ್ತಿದ್ದವರಿಗೆ ಅಲ್ಲಿನ ಜನತೆ ತಕ್ಕ ಪಾಠ ಕಲಿಸಿದ್ದಾರೆ ಎಂದು ಕೇಂದ್ರ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಇಂದು(ಫೆಬ್ರವರಿ.8) ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದೆಹಲಿಯಲ್ಲಿ ಪ್ರಧಾನಿಗಳ ನೇತೃತ್ವದಲ್ಲಿ ಬಿಜೆಪಿಗೆ ಸಾರ್ವಜನಿಕರು ಭರ್ಜರಿ ತೀರ್ಪು ನೀಡಿದ್ದಾರೆ. ನಕಾರಾತ್ಮಕ ತಂತ್ರಗಳ ಮೂಲಕ ರಾಜಕೀಯ ಮಾಡುತ್ತಿದ್ದವರಿಗೆ ಇಲ್ಲಿನ ಜನತೆ ತಕ್ಕಪಾಠ ಕಲಿಸಿದ್ದಾರೆ. ಅಲ್ಲದೇ ದೆಹಲಿಯಲ್ಲಿ ಅರಾಜಕತೆ ಸೃಷ್ಠಿ ಮಾಡುತ್ತಿದ್ದವರಿಗೆ ಜನರ ತೀರ್ಪಿನಿಂದ ಕಪಾಳ ಮೋಕ್ಷವಾಗಿದೆ. ನಾವು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ನಂಬಿದ್ದೇವೆ. ಪ್ರಜಾಪ್ರಭುತ್ವದಲ್ಲಿ ಯಶಸ್ವಿಯಾದ ರಚನಾತ್ಮಕ ಹಾಗೂ ಪ್ರಬಲ ರಾಜಕೀಯ ಪಕ್ಷ ಇರಬೇಕು ಎನ್ನುವುದು ನಮ್ಮ ಅಭಿಲಾಷೆ ಎಂದು ಹೇಳಿದರು.
ಈ ಬಾರಿಯ ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ 45ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಈಗಾಗಲೇ ಬಿಜೆಪಿ ಗೆದ್ದಿದೆ. ಪ್ರಧಾನಿ ಮೋದಿ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ರಕ್ಷಣಾ ರಾಜನಾಥ್ ಸಿಂಗ್ ಹಾಗೂ ದೆಹಲಿಯ ಸಾರ್ವಜನಿಕರಿಗೆ ಧನ್ಯವಾದಗಳು ಎಂದು ಕೃತಜ್ಞತೆ ಸಲ್ಲಿಸಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…
ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…
ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು…