ರಾಜ್ಯ

ದೆಹಲಿಯಲ್ಲಿ ಎಎಪಿ ಸೋಲು| ನಕಾರಾತ್ಮಕ ತಂತ್ರದ ರಾಜಕೀಯ ಮಾಡುತ್ತಿದ್ದವರಿಗೆ ಜನತೆಯಿಂದ ತಕ್ಕ ಪಾಠ: ಪ್ರಹ್ಲಾದ್‌ ಜೋಶಿ

ಹುಬ್ಬಳ್ಳಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಪಕ್ಷ ಹೀನಾಯ ಸೋಲು ಕಂಡಿದ್ದು, ನಕರಾತ್ಮಕ ತಂತ್ರಗಳಿಂದ ರಾಜಕೀಯ ಮಾಡುತ್ತಿದ್ದವರಿಗೆ ಅಲ್ಲಿನ ಜನತೆ ತಕ್ಕ ಪಾಠ ಕಲಿಸಿದ್ದಾರೆ ಎಂದು ಕೇಂದ್ರ ಪ್ರಹ್ಲಾದ್‌ ಜೋಶಿ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಇಂದು(ಫೆಬ್ರವರಿ.8) ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದೆಹಲಿಯಲ್ಲಿ ಪ್ರಧಾನಿಗಳ ನೇತೃತ್ವದಲ್ಲಿ ಬಿಜೆಪಿಗೆ ಸಾರ್ವಜನಿಕರು ಭರ್ಜರಿ ತೀರ್ಪು ನೀಡಿದ್ದಾರೆ. ನಕಾರಾತ್ಮಕ ತಂತ್ರಗಳ ಮೂಲಕ ರಾಜಕೀಯ ಮಾಡುತ್ತಿದ್ದವರಿಗೆ ಇಲ್ಲಿನ ಜನತೆ ತಕ್ಕಪಾಠ ಕಲಿಸಿದ್ದಾರೆ. ಅಲ್ಲದೇ ದೆಹಲಿಯಲ್ಲಿ ಅರಾಜಕತೆ ಸೃಷ್ಠಿ ಮಾಡುತ್ತಿದ್ದವರಿಗೆ ಜನರ ತೀರ್ಪಿನಿಂದ ಕಪಾಳ ಮೋಕ್ಷವಾಗಿದೆ. ನಾವು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ನಂಬಿದ್ದೇವೆ. ಪ್ರಜಾಪ್ರಭುತ್ವದಲ್ಲಿ ಯಶಸ್ವಿಯಾದ ರಚನಾತ್ಮಕ ಹಾಗೂ ಪ್ರಬಲ ರಾಜಕೀಯ ಪಕ್ಷ ಇರಬೇಕು ಎನ್ನುವುದು ನಮ್ಮ ಅಭಿಲಾಷೆ ಎಂದು ಹೇಳಿದರು.

ಈ ಬಾರಿಯ ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ 45ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಈಗಾಗಲೇ ಬಿಜೆಪಿ ಗೆದ್ದಿದೆ. ಪ್ರಧಾನಿ ಮೋದಿ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಕೇಂದ್ರ ರಕ್ಷಣಾ ರಾಜನಾಥ್‌ ಸಿಂಗ್‌ ಹಾಗೂ ದೆಹಲಿಯ ಸಾರ್ವಜನಿಕರಿಗೆ ಧನ್ಯವಾದಗಳು ಎಂದು ಕೃತಜ್ಞತೆ ಸಲ್ಲಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

8 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

8 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

8 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

8 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

9 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

9 hours ago