ರಾಜ್ಯ

ರಾಹುಲ್‌ ಗಾಂಧಿ ಅವರ ಆರೋಪಕ್ಕೆ ಉತ್ತರಿಸುವ ಅಗತ್ಯವಿಲ್ಲ: ಸಂಸದ ಪ್ರಹ್ಲಾದ್‌ ಜೋಶಿ

ಹುಬ್ಬಳ್ಳಿ: ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿಯೊಬ್ಬರೂ ಅಪ್ರಬುದ್ಧ ರಾಜಕಾರಣಿ ಅವರ ಆರೋಪಕ್ಕೆ ಉತ್ತರಿಸುವ ಅಗತ್ಯ ನನಗೆ ಇಲ್ಲ ಎಂದು ಸಂಸದ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಇಂದು(ಏಪ್ರಿಲ್‌.6) ಕೇಂದ್ರ ಸರ್ಕಾರ ವಕ್ಫ್ ಬಿಲ್ ತಿದ್ದುಪಡಿ ಬೆನ್ನಲ್ಲಿಯೇ ಕ್ರಿಶ್ಚಿಯನ್ನರ ಆಸ್ತಿ ಮೇಲೆ ಆರ್‌ಎಸ್‌ಎಸ್‌ ಕಣ್ಣಿಟ್ಟಿದೆ ಎಂಬ ರಾಹುಲ್ ಗಾಂಧಿ ಅವರ ಆರೋಪದ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ವಕ್ಫ್ ಮಸೂದೆಯನ್ನು ಮಂಡಿಸುವ ವೇಳೆ ರಾಹುಲ್ ಹಾಗೂ ಸಂಸದೆ ಪ್ರಿಯಾಂಕಾ ವಾದ್ರಾ ಸಂಸತ್ತಿನ ಒಳಗೆ ಬಂದಿರಲಿಲ್ಲ. ಮುಸ್ಲಿ ಪರವಾಗಿಯೇ ರಾಹುಲ್ ಮತ್ತು ಪ್ರಿಯಾಂಕ ಅವರು ಇದ್ದಾರೆ. ಹೀಗಿದ್ದರೂ ಅವರೇಕೆ ಲೋಕಸಭೆಗೆ ಬರಲಿಲ್ಲ.? ರಾಹುಲ್ ಗಾಂಧಿಗೆ ಗಂಭೀರತೆಯೇ ಇಲ್ಲ. ಅವರ ಹೇಳಿಕೆಗೆ ನಾನೇಕೆ ಪ್ರತಿಕ್ರಿಯೆ ನೀಡಬೇಕು. ಅವರೊಬ್ಬ ಅಪ್ರಬುದ್ಧ ರಾಜಕಾರಣಿ, ಅವರ ಮಾತಿಗೆ ಉತ್ತರಿಸುವ ಅವಶ್ಯಕತೆ ನನಗೆ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಕೇರಳದ ವಯನಾಡಿನಲ್ಲಿ ರಾಹುಲ್ ಹಾಗೂ ಪ್ರಿಯಾಂಕಾ ಅವರ ವಿರುದ್ಧ ಅಲ್ಲಿನ ಜನತೆ ಹೋರಾಟ ನಡೆಸುತ್ತಿದ್ದಾರೆ. ಹಾಗಾಗಿ ಆ ವಿಚಾರವನ್ನು ಬೇರೆ ಕಡೆಗೆ ಸೆಳೆಯಲು ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅವರೇ ಕೆಲ ಚರ್ಚ್‌ಗಳನ್ನು ವಕ್ಫ್ ಮಾಡಲು ಹೊರಟಿದ್ದರು. ಆದರೆ ವಕ್ಫ್ ತಿದ್ದುಪಡಿಯಿಂದಾಗಿ ಕ್ರಿಶ್ಚಿಯನ್ನರೂ ಇದೀಗ ಖುಷಿಯಲ್ಲಿದ್ದಾರೆ ಎಂದರು.

ಓಟ್ ಬ್ಯಾಂಕ್ ಜಾಸ್ತಿ ಇದೆಯೆಂಬ ಕಾರಣಕ್ಕೆ ಕ್ರಿಶ್ಚಿಯನ್ನರನ್ನು ಬಿಟ್ಟು ಮುಸ್ಲಿಮರ ಬೆನ್ನುಹತ್ತಿದ್ದಾರೆ. ಕಾಂಗ್ರೆಸ್ ನಾಯಕರು ಬರೀ ಓಟ್ ಬ್ಯಾಂಕ್ ಪಾಲಿಟಿಕ್ಸ್ ಮಾಡುತ್ತಿದ್ದಾರೆ. ಇನ್ನೂ ದೇಶದಲ್ಲಿ ವಕ್ಫ್ ಆಸ್ತಿ 18 ಲಕ್ಷದಿಂದ 39 ಲಕ್ಷ ಎಕರೆಗೆ ಏರಿಕೆಯಾಗಿದೆ. ಅದಕ್ಕೆ ಸರಿಯಾದ ರೀತಿಯಲ್ಲಿ ಆದಾಯ ಬಂದರೆ ಮುಸಲ್ಮಾನರಿಗೂ ಖುಷಿಯಾಗುತ್ತದೆ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಮಾದಪ್ಪನ ದರ್ಶನ ಮುಗಿಸಿ ಬರುವಾಗ ಬಸ್‌ ಪಲ್ಟಿ : ಇಬ್ಬರು ಸಾವು ; ಹಲವರು ಗಂಭೀರ

ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…

5 mins ago

ಮೈಸೂರು | ವ್ಯಕ್ತಿ ಅನುಮಾನಾಸ್ಪದ ಸಾವು ; ಹೆಂಡತಿಯಿಂದಲೇ ಕೊಲೆಯ ಶಂಕೆ

ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…

3 hours ago

ಬಿಜೆಪಿ ವಕ್ತಾರ ಎಂ.ಜಿ.ಮಹೇಶ್‌ 6 ವರ್ಷ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…

4 hours ago

ಅಸ್ಸಾಂನಲ್ಲಿ ಭೀಕರ ಪ್ರವಾಹ: ಜನಜೀವನ ಅಸ್ತವ್ಯಸ್ತ

ದಿಸ್ಪುರ್:‌ ನೆರೆಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಭೀಕರ ಪ್ರವಾಹ ಸೃಷ್ಟಿಯಾಗಿದೆ. ಭಾರೀ…

7 hours ago

ಕೈಕೊಟ್ಟ ಮುಂಗಾರು: ಕಬಿನಿ ಜಲಾಶಯದ ನೀರಿನ ಮಟ್ಟ ಮತ್ತಷ್ಟು ಕುಸಿತ

ಎಚ್.ಡಿ.ಕೋಟೆ: ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ. ರಾಜ್ಯದಲ್ಲಿ ಮೊದಲು ಭರ್ತಿಯಾಗುವ ಜಲಾಶಯ ಎಂಬ…

7 hours ago

ರಾಮಮಂದಿರದಲ್ಲಿ ಅಕ್ರಮ; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ

ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…

12 hours ago