ಕಲಬುರ್ಗಿ: ವಿಕಸಿತ ಭಾರತದ ಪರಿಕಲ್ಪನೆಯಲ್ಲಿ ಕೇಂದ್ರ ಸರ್ಕಾರ 2029ರ ವೇಳೆಗೆ ಒನ್ ನೇಷನ್ ಒನ್ ಎಲೆಕ್ಷನ್ಗೆ ಸಿದ್ಧತೆ ನಡೆಸಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಈ ಕುರಿತು ಕಲಬುರ್ಗಿಯಲ್ಲಿಂದು ಮಾತನಾಡಿದ ಅವರು, ಒನ್ ನೇಷನ್ ಒನ್ ಎಲೆಕ್ಷನ್ನಿಂದ ಭಾರತದ ಅರ್ಥ ವ್ಯವಸ್ಥೆ ಬದಲಾಗಲಿದೆ. ರಾಜಕೀಯ ಸ್ಥಿರತೆ ಬಲಗೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇನ್ನು ಒನ್ ನೇಷನ್ ಒನ್ ಎಲೆಕ್ಷನ್ ಜಾರಿಗೊಂಡರೆ ತಾನು ಪ್ಯಾನ್ ಇಂಡಿಯಾ ಪಾರ್ಟಿ ಆಗಲು ಸಾಧ್ಯವಿಲ್ಲ ಎಂಬ ಭಯದಲ್ಲಿ ಕಾಂಗ್ರೆಸ್ ವಿಶೇಷ ರೀತಿ ವರ್ತನೆ ಮಾಡುತ್ತಿದೆ. ಕಾಂಗ್ರೆಸ್ನವರಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕಂಡರೆ ಭಯ. ಹಾಗಾಗಿ ಒಂದು ರಾಷ್ಟ್ರ, ಒಂದು ಚುನಾವಣೆಗೆ ತಗಾದೆ ತೆಗೆಯುತ್ತಿದ್ದಾರೆ. ಈ ಆತಂಕಕ್ಕೆ ಯಾವುದೇ ರೀತಿಯ ಅರ್ಥವಿಲ್ಲ ಎಂದು ಕಾಂಗ್ರೆಸ್ ಪಕ್ಷದ ವಿರುದ್ಧ ಕಿಡಿಕಾರಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಆರ್ಥಿಕತೆಯಲ್ಲಿ ಭಾರತ ಈಗ ಜಪಾನ್ ಅನ್ನು ಹಿಂದಿಕ್ಕಿದೆ. ಇನ್ನೆರಡು ವರ್ಷದಲ್ಲಿ 3ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲಿದೆ. 2047ಕ್ಕೆ ಜಗತ್ತಿನ ಅತ್ಯಂತ ಅಭಿವೃದ್ಧಿ ಹೊಂದಿದ ದೇಶವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಗುಂಡ್ಲುಪೇಟೆ: ಪಟ್ಟಣ ಮತ್ತು ಮಲ್ಲಯ್ಯನಪುರ ನಡುವಿನ ಅನ್ಗಲ್ ಗುಡ್ಡದ ತಪ್ಪಲಿನ ಪ್ರದೇಶದಲ್ಲಿ ಅಪರೂಪದ ಥೋರಿಯಂ ನಿಕ್ಷೇಪ ಪತ್ತೆಯಾಗಿದೆ. ಹಿಂದಿನ ವರ್ಷ…
ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಮೈಸೂರು -ಮಾನಂದವಾಡಿ ಮುಖ್ಯ ರಸ್ತೆಯಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಖಾಸಗಿ ಕಟ್ಟಡದ ಎರಡನೇ…
ಅಯೋಧ್ಯೆಯ ರಾಮ ಮಂದಿರವೂ ಸೇರಿದಂತೆ ದೇಶದ ವಿವಿಧ ದೇವಾಲಯಗಳಲ್ಲಿ ಕಾಣಿಕೆ ಹಣ, ದೇವರಿಗೆ ಭಕ್ತರು ಕಾಣಿಕೆ ರೂಪದಲ್ಲಿ ಸಲ್ಲಿಸುವ ಚಿನ್ನಾಭರಣಗಳು…
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಸೆಸ್ಕ್)ದವರು ಮೈಸೂರು ನಗರದ ವಿವಿಧೆಡೆ ಭೂಗತ ಕೇಬಲ್ಗಳನ್ನು ಅಳವಡಿಸುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಸೆಸ್ಕ್ ಯುಜಿ ಕೇಬಲ್…
ಸಂಗ್ರಹ ಮತ್ತು ಅನುವಾದ ಚೇತನಾ ತೀರ್ಥಹಳ್ಳಿ ಚೋಕನ್ ಎಂಬವನಿಗೆ ಸೀಜೋ ಎಂಬ ಸುಂದರ ಮಗಳಿದ್ದಳು. ಚೋಕನ್ ತನ್ನ ದೂರದ ಸಂಬಂಧಿಯಾದ…
ನವೀನ್ ಡಿಸೋಜ ಕೊಡಗಿನಲ್ಲಿ ಒಟ್ಟು ೪,೬೮,೬೫೭ ಮತದಾರರ ಪೈಕಿ ೩,೦೦,೩೬೯ ಮಂದಿಗೆ ನಮೂನೆ ವಿತರಣೆ; ೯,೧೨೫ ನಮೂನೆಗಳ ಡಿಜಿಟಲೀಕರಣ ಮಡಿಕೇರಿ:…