ರಾಜ್ಯ

ಪ್ರಜ್ವಲ್‌ ಒಳ್ಳೆ ಹುಡುಗ, ಪಾಪ ಅವನಿಗೆ ಏನು ಗೊತ್ತಾಗಲ್ಲ: ಎಚ್‌ಡಿ ರೇವಣ್ಣ

ಆಲೂರು: ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಸಂಸದ ಪ್ರಜ್ವಲ್‌ ಅವರನ್ನು ನೆನೆದು ತಂದೆ ರೇವಣ್ಣ ಅನುಕಂಪ ವ್ಯಕ್ತಪಡಿಸಿದ್ದಾರೆ. ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ನಡೆದ ಜಾ.ದಳ ಕಾರ್ಯಕರ್ತರ ಸಭೆಯಲ್ಲಿ ಎಚ್‌ಡಿ ರೇವಣ್ಣ ತಮ್ಮ ಮಗನ ಬಗ್ಗೆ ಅನುಕಂಪದ ಮಾತುಗಳನ್ನಾಡಿದ್ದಾರೆ.

ಮಾಜಿ ಶಾಸಕ ರೇವಣ್ಣನವರು ಇಂದು (ಸೆ.20) ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ಮಗ ಪ್ರಜ್ವಲ್‌ ಅವರನ್ನು ನೆನಪಿಸಿಕೊಂಡು ಪ್ರಜ್ವಲ್‌ಗೆ ಏನು ಗೊತ್ತಾಗಲ್ಲ, ಪಾಪ ಅವನು ಒಳ್ಳೆ ಹುಡುಗ ಎಂದು ಹೇಳಿದ್ದಾರೆ. ನಂತರ ಸಭೆಯಲ್ಲ ಪಾಲ್ಗೊಂಡಿದ್ದ ಕಾರ್ಯಕರ್ತರಿಗೆ ಮುಂದಿನ ಮೂರು ವರ್ಷಗಳ ಕಾಲ ಸಮ್ಮನೆ ಇದ್ದು ಬಿಡಿ, ನನ್ನ ಕುಟುಂಬಕ್ಕೆ ಆದ ಅವಮಾನವನ್ನು ಬಡ್ಡಿ ಸಮೇತ ತೀರಿಸದಿದ್ದರೆ ನಾನು ಮಾಜಿ ಪ್ರಧಾನಿ ದೇವೇಗೌಡ ಅವರೇ ಮಗನೇ ಅಲ್ಲ ಎಂದು ಪ್ರತೀಕಾರದ ಮಾತುಗಳನ್ನು ನುಡಿದ್ದಾರೆ.

ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ಕಿರುಕುಳ ಹಾಗೂ ಆತ್ಯಾಚಾರ ಪ್ರಕರಣದ ಅಡಿಯಲ್ಲಿ ಕೆಲವು ತಿಂಗಳುಗಳಿಂದ ಜೈಲು ಪಾಲಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದದವರು ನನ್ನ ಕೈಗೆ ಸಿಗದೇ ಎಲ್ಲಿ ಹೋಗುತ್ತಾರೆ ಎಂದು ಕಿಡಿಕಾರಿದ್ದಾರೆ. ಇಂದು ಜಿಲ್ಲೆಯಲ್ಲಿ ಜಾ.ದಳ ಪಕ್ಷದಲ್ಲಿ ದೇವೇಗೌಡರು, ಕುಮಾರಣ್ಣ ಹಾಗೂ ನಾನು ಉಳಿದಿರುವುದು ನಿಮ್ಮಂತಹ ಪುಣ್ಯಾತ್ಮರಿಂದಲೇ ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

13 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

13 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

13 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

13 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

1 day ago