ಆಲೂರು: ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಸಂಸದ ಪ್ರಜ್ವಲ್ ಅವರನ್ನು ನೆನೆದು ತಂದೆ ರೇವಣ್ಣ ಅನುಕಂಪ ವ್ಯಕ್ತಪಡಿಸಿದ್ದಾರೆ. ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ನಡೆದ ಜಾ.ದಳ ಕಾರ್ಯಕರ್ತರ ಸಭೆಯಲ್ಲಿ ಎಚ್ಡಿ ರೇವಣ್ಣ ತಮ್ಮ ಮಗನ ಬಗ್ಗೆ ಅನುಕಂಪದ ಮಾತುಗಳನ್ನಾಡಿದ್ದಾರೆ.
ಮಾಜಿ ಶಾಸಕ ರೇವಣ್ಣನವರು ಇಂದು (ಸೆ.20) ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ಮಗ ಪ್ರಜ್ವಲ್ ಅವರನ್ನು ನೆನಪಿಸಿಕೊಂಡು ಪ್ರಜ್ವಲ್ಗೆ ಏನು ಗೊತ್ತಾಗಲ್ಲ, ಪಾಪ ಅವನು ಒಳ್ಳೆ ಹುಡುಗ ಎಂದು ಹೇಳಿದ್ದಾರೆ. ನಂತರ ಸಭೆಯಲ್ಲ ಪಾಲ್ಗೊಂಡಿದ್ದ ಕಾರ್ಯಕರ್ತರಿಗೆ ಮುಂದಿನ ಮೂರು ವರ್ಷಗಳ ಕಾಲ ಸಮ್ಮನೆ ಇದ್ದು ಬಿಡಿ, ನನ್ನ ಕುಟುಂಬಕ್ಕೆ ಆದ ಅವಮಾನವನ್ನು ಬಡ್ಡಿ ಸಮೇತ ತೀರಿಸದಿದ್ದರೆ ನಾನು ಮಾಜಿ ಪ್ರಧಾನಿ ದೇವೇಗೌಡ ಅವರೇ ಮಗನೇ ಅಲ್ಲ ಎಂದು ಪ್ರತೀಕಾರದ ಮಾತುಗಳನ್ನು ನುಡಿದ್ದಾರೆ.
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಕಿರುಕುಳ ಹಾಗೂ ಆತ್ಯಾಚಾರ ಪ್ರಕರಣದ ಅಡಿಯಲ್ಲಿ ಕೆಲವು ತಿಂಗಳುಗಳಿಂದ ಜೈಲು ಪಾಲಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದದವರು ನನ್ನ ಕೈಗೆ ಸಿಗದೇ ಎಲ್ಲಿ ಹೋಗುತ್ತಾರೆ ಎಂದು ಕಿಡಿಕಾರಿದ್ದಾರೆ. ಇಂದು ಜಿಲ್ಲೆಯಲ್ಲಿ ಜಾ.ದಳ ಪಕ್ಷದಲ್ಲಿ ದೇವೇಗೌಡರು, ಕುಮಾರಣ್ಣ ಹಾಗೂ ನಾನು ಉಳಿದಿರುವುದು ನಿಮ್ಮಂತಹ ಪುಣ್ಯಾತ್ಮರಿಂದಲೇ ಎಂದು ತಿಳಿಸಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…