ರಾಜ್ಯ

ಜೀವಾವಧಿ ಶಿಕ್ಷೆ ತೀರ್ಪು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ ಪ್ರಜ್ವಲ್‌

ಬೆಂಗಳೂರು : ಮನೆ ಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಿರುವ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಹೈಕೋರ್ಟ್ʼಗೆ ಮೇಲ್ಮನವಿ ಸಲ್ಲಿಸಿದ್ದಾರೆ.

ಗುರುವಾರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಎಸ್.ಮುದ್ಗಲ್ ಮತ್ತು ನ್ಯಾ.ವೆಂಕಟೇಶ್ ನಾಯ್ಕ್ ಟಿ ಅವರಿದ್ದ​ ಹೈಕೋರ್ಟ್ ವಿಭಾಗೀಯ ಪೀಠ‌, ಸಮಗ್ರ ಸಾರಾಂಶ ಸಲ್ಲಿಸಲು ಪ್ರಜ್ವಲ್ ಪರ ವಕೀಲರಿಗೆ ಸೂಚನೆ ನೀಡಿದೆ. ಜೊತೆಗೆ ಪ್ರಜ್ವಲ್ ಮೇಲ್ಮನವಿ ಬಗ್ಗೆ ಪ್ರತಿವಾದಿಯಾಗಿ ವಾದಿಸಲು ಎಸ್‌ಪಿಪಿ ನೇಮಕದ ಬಗ್ಗೆಯೂ ಸ್ಪಷ್ಟನೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿ ವಿಚಾರಣೆಯನ್ನು ಅಕ್ಟೋಬರ್ 28ಕ್ಕೆ ಮುಂದೂಡಿದೆ.

ಪ್ರಜ್ವಲ್ ರೇವಣ್ಣ ಮೇಲ್ಮನವಿಯಲ್ಲೇನಿದೆ?
ರಾಜಕೀಯ ದುರುದ್ದೇಶದಿಂದ ಮಹಿಳೆಯನ್ನು ಅಸ್ತ್ರವಾಗಿಸಿ ಎಫ್‌ಐಆರ್ ದಾಖಲಿಸಲಾಗಿದೆ. 2023 ರಲ್ಲಿ ಫಾರ್ಮ್ ಹೌಸ್ ನ ಗೃಹಪ್ರವೇಶದಲ್ಲಿ ಮಹಿಳೆ ಪಾಲ್ಗೊಂಡಿದ್ದಾರೆ. ಅತ್ಯಾಚಾರವಾಗಿದ್ದರೆ ಮಹಿಳೆ ಗೃಹಪ್ರವೇಶಕ್ಕೆ ಹೇಗೆ ಬರುತ್ತಿದ್ದರು. ಅಲ್ಲದೇ ಈ ಮಹಿಳೆಯಿಂದ 3 ವರ್ಷದ ಬಳಿಕ ಪೊಲೀಸರು ದೂರು ಪಡೆದಿದ್ದಾರೆ. ಸ್ಟೋರ್ ರೂಮಿನಲ್ಲಿ ಬಟ್ಟೆ, ಕೂದಲಿದ್ದ ಬ್ಯಾಗ್ ಅನ್ನು ಮಹಿಳೆ ಗುರುತಿಸಿಲ್ಲ. ಬ್ಯಾಟರಿ, ಪೇಂಟ್ ಇದ್ದ ರೂಮಿನಲ್ಲಿ ಮಹಿಳೆಯ ಉಡುಪು ಸಿಕ್ಕಿತೆಂದು ಹೇಳಿದ್ದಾರೆ.

ಇದನ್ನೂ ಓದಿ:-ಕೆಎಸ್‌ಓಯು | ಕುಲಪತಿ ಹಲಸೆ ಅಧಿಕಾರದ ಅವಧಿ ವಿಸ್ತರಣೆ

ಲಾಕ್ ಆಗಿದ್ದ ರೂಮಿನಲ್ಲಿ ವೀರ್ಯಾಣುವಿದ್ದ ಬಟ್ಟೆ ಸಿಗಲು ಸಾಧ್ಯವೇ? ಕೂದಲನ್ನು ಸುತ್ತಿ ಬ್ಯಾಗ್ ನಲ್ಲಿ ಇಟ್ಟ ರಹಸ್ಯ ತಿಳಿಯುತ್ತಿಲ್ಲ. ಮಹಿಳೆಯ ಸಿಆರ್ ಪಿಸಿ 164 ಹೇಳಿಕೆಯನ್ನು ಕೋರ್ಟ್ ಗೆ ಹಾಜರುಪಡಿಸಿಲ್ಲ. ವಿಡಿಯೋ ಇತ್ತೆಂದು ಆರೋಪಿಸಲಾದ ಮೊಬೈಲ್ ಅನ್ನೇ ವಶಕ್ಕೆ ಪಡೆದಿಲ್ಲ. ಎಫ್‌ಎಸ್‌ಎಲ್ ವರದಿಯಲ್ಲೂ ವಿರೋಧಾಭಾಸಗಳಿವೆ. ಹೀಗಾಗಿ ಶಿಕ್ಷೆ ರದ್ದುಪಡಿಸುವಂತೆ ಪ್ರಜ್ವಲ್ ರೇವಣ್ಣ ಪರ ವಕೀಲರು ಹೈಕೋರ್ಟ್ ಗೆ ಸಲ್ಲಿಸಿರುವ ಮೇಲ್ಮನವಿಯಲ್ಲಿ ಉಲ್ಲೇಖಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ರಾಜ್ಯದ ಹಲವೆಡೆ ಇಂದೂ ಕೂಡ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಂಜೆಯ ವೇಳೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯ…

16 mins ago

ಕುವೈತ್‌ ಮೇಲೆ ಇರಾನ್‌ ಭೀಕರ ದಾಳಿ: ಭಾರತೀಯ ಕಾರ್ಮಿಕ ಸಾವು

ಟೆಹರಾನ್:‌ ಕುವೈತ್‌ ವಿದ್ಯುತ್‌ ಸ್ಥಾವರದ ಮೇಲೆ ಇರಾನ್‌ ಭೀಕರ ದಾಳಿ ನಡೆಸಿದ ಪರಿಣಾಮ ಭಾರತೀಯ ಕಾರ್ಮಿಕರೊಬ್ಬರು ಸಾವನ್ನಪ್ಪಿದ್ದಾರೆ. ಇದು ದೇಶದ…

46 mins ago

ನಂಜನಗೂಡಿನ ಗೌತಮ ಪಂಚಮಹಾರಥೋತ್ಸವದಲ್ಲಿ ದುರಂತ: ಓರ್ವ ಭಕ್ತ ಸಾವು

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಇಂದು ನಡೆದ ಗೌತಮ ಪಂಚಮಹಾರಥೋತ್ಸವದಲ್ಲಿ ದುರಂತವೊಂದು ಸಂಭವಿಸಿದ್ದು, ಜಗಜಂಗುಳಿಯಲ್ಲಿ ಸಿಲುಕಿ ಓರ್ವ ಭಕ್ತ ಸಾವನ್ನಪ್ಪಿರುವ…

1 hour ago

ಹುಣಸೂರು: ಒಣಗಿದ್ದ ದಾಸವಾಳ ಹೂ ನುಂಗಿ ಮಗು ಸಾವು

ಹುಣಸೂರು: ಒಣಗಿದ್ದ ದಾಸವಾಳ ಹೂ ನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿರುವ ಮನಕಲಕುವ ಘಟನೆ ಹುಣಸೂರು ತಾಲ್ಲೂಕಿನ ದೊಡ್ಡಹೆಜ್ಜೂರಿನಲ್ಲಿ ನಡೆದಿದೆ. ದೊಡ್ಡಹೆಜ್ಜೂರಿನ…

1 hour ago

ಇವ ನಮ್ಮವ ಮಸೂದೆ; ಅಮಾಯಕ ಯುವ ಜೀವಗಳ ರಕ್ಷಣೆ

ಜಾತಿ ಆಧಾರಿತ ಅಪರಾಧಕ್ಕೆ ತಡೆ, ಅಂತರ್ಜಾತಿ ವಿವಾಹಿತರಿಗೆ ರಕ್ಷಣೆ ಒದಗಿಸುವ ಮಹತ್ವಪೂರ್ಣವಾದ ‘ಇವ ನಮ್ಮವ ಇವ ನಮ್ಮವ’ ಮಸೂದೆಯನ್ನು ರಾಜ್ಯ…

2 hours ago

ಪ್ರೊ.ಡಿ.ಆನಂದ್ – ಮ್ಯಾನೇಜ್‌ಮೆಂಟ್ ಶಿಕ್ಷಣದ ಜಂಗಮ

ನಾಳೆ ಸೇವೆಯಿಂದ ನಿವೃತ್ತಿ ಹೊಂದಲಿರುವ ಮೇಷ್ಟ್ರು  ಸಿ.ಹರಕುಮಾರ್, ಬರಹಗಾರ ಮೂರ್ನಾಲ್ಕು ದಶಕಗಳ ಹಿಂದೆ ಮ್ಯಾನೇಜ್ಮೆಂಟ್ ಕೋರ್ಸ್ ಅಥವಾ ಎಂಬಿಎ ಪದವಿ…

2 hours ago