ರಾಜ್ಯ

ಜೀವಾವಧಿ ಶಿಕ್ಷೆ ತೀರ್ಪು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ ಪ್ರಜ್ವಲ್‌

ಬೆಂಗಳೂರು : ಮನೆ ಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಿರುವ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಹೈಕೋರ್ಟ್ʼಗೆ ಮೇಲ್ಮನವಿ ಸಲ್ಲಿಸಿದ್ದಾರೆ.

ಗುರುವಾರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಎಸ್.ಮುದ್ಗಲ್ ಮತ್ತು ನ್ಯಾ.ವೆಂಕಟೇಶ್ ನಾಯ್ಕ್ ಟಿ ಅವರಿದ್ದ​ ಹೈಕೋರ್ಟ್ ವಿಭಾಗೀಯ ಪೀಠ‌, ಸಮಗ್ರ ಸಾರಾಂಶ ಸಲ್ಲಿಸಲು ಪ್ರಜ್ವಲ್ ಪರ ವಕೀಲರಿಗೆ ಸೂಚನೆ ನೀಡಿದೆ. ಜೊತೆಗೆ ಪ್ರಜ್ವಲ್ ಮೇಲ್ಮನವಿ ಬಗ್ಗೆ ಪ್ರತಿವಾದಿಯಾಗಿ ವಾದಿಸಲು ಎಸ್‌ಪಿಪಿ ನೇಮಕದ ಬಗ್ಗೆಯೂ ಸ್ಪಷ್ಟನೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿ ವಿಚಾರಣೆಯನ್ನು ಅಕ್ಟೋಬರ್ 28ಕ್ಕೆ ಮುಂದೂಡಿದೆ.

ಪ್ರಜ್ವಲ್ ರೇವಣ್ಣ ಮೇಲ್ಮನವಿಯಲ್ಲೇನಿದೆ?
ರಾಜಕೀಯ ದುರುದ್ದೇಶದಿಂದ ಮಹಿಳೆಯನ್ನು ಅಸ್ತ್ರವಾಗಿಸಿ ಎಫ್‌ಐಆರ್ ದಾಖಲಿಸಲಾಗಿದೆ. 2023 ರಲ್ಲಿ ಫಾರ್ಮ್ ಹೌಸ್ ನ ಗೃಹಪ್ರವೇಶದಲ್ಲಿ ಮಹಿಳೆ ಪಾಲ್ಗೊಂಡಿದ್ದಾರೆ. ಅತ್ಯಾಚಾರವಾಗಿದ್ದರೆ ಮಹಿಳೆ ಗೃಹಪ್ರವೇಶಕ್ಕೆ ಹೇಗೆ ಬರುತ್ತಿದ್ದರು. ಅಲ್ಲದೇ ಈ ಮಹಿಳೆಯಿಂದ 3 ವರ್ಷದ ಬಳಿಕ ಪೊಲೀಸರು ದೂರು ಪಡೆದಿದ್ದಾರೆ. ಸ್ಟೋರ್ ರೂಮಿನಲ್ಲಿ ಬಟ್ಟೆ, ಕೂದಲಿದ್ದ ಬ್ಯಾಗ್ ಅನ್ನು ಮಹಿಳೆ ಗುರುತಿಸಿಲ್ಲ. ಬ್ಯಾಟರಿ, ಪೇಂಟ್ ಇದ್ದ ರೂಮಿನಲ್ಲಿ ಮಹಿಳೆಯ ಉಡುಪು ಸಿಕ್ಕಿತೆಂದು ಹೇಳಿದ್ದಾರೆ.

ಇದನ್ನೂ ಓದಿ:-ಕೆಎಸ್‌ಓಯು | ಕುಲಪತಿ ಹಲಸೆ ಅಧಿಕಾರದ ಅವಧಿ ವಿಸ್ತರಣೆ

ಲಾಕ್ ಆಗಿದ್ದ ರೂಮಿನಲ್ಲಿ ವೀರ್ಯಾಣುವಿದ್ದ ಬಟ್ಟೆ ಸಿಗಲು ಸಾಧ್ಯವೇ? ಕೂದಲನ್ನು ಸುತ್ತಿ ಬ್ಯಾಗ್ ನಲ್ಲಿ ಇಟ್ಟ ರಹಸ್ಯ ತಿಳಿಯುತ್ತಿಲ್ಲ. ಮಹಿಳೆಯ ಸಿಆರ್ ಪಿಸಿ 164 ಹೇಳಿಕೆಯನ್ನು ಕೋರ್ಟ್ ಗೆ ಹಾಜರುಪಡಿಸಿಲ್ಲ. ವಿಡಿಯೋ ಇತ್ತೆಂದು ಆರೋಪಿಸಲಾದ ಮೊಬೈಲ್ ಅನ್ನೇ ವಶಕ್ಕೆ ಪಡೆದಿಲ್ಲ. ಎಫ್‌ಎಸ್‌ಎಲ್ ವರದಿಯಲ್ಲೂ ವಿರೋಧಾಭಾಸಗಳಿವೆ. ಹೀಗಾಗಿ ಶಿಕ್ಷೆ ರದ್ದುಪಡಿಸುವಂತೆ ಪ್ರಜ್ವಲ್ ರೇವಣ್ಣ ಪರ ವಕೀಲರು ಹೈಕೋರ್ಟ್ ಗೆ ಸಲ್ಲಿಸಿರುವ ಮೇಲ್ಮನವಿಯಲ್ಲಿ ಉಲ್ಲೇಖಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

2 mins ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

1 hour ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

4 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

4 hours ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

4 hours ago

ನಾಲ್ಕು ಶೂಟೌಟ್ ಪ್ರಕರಣ; ಏಳು ಸಾವು

ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…

4 hours ago