ರಾಜ್ಯ

ಪ್ರಜ್ವಲ್‌ ಲೈಂಗಿಕ ಪ್ರಕರಣ: ಪ್ರಧಾನಿ ಮೋದಿಗೆ ಮತ್ತೊಮ್ಮೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮತ್ತೊಮ್ಮೆ ಪತ್ರ ಬರೆದಿದ್ದಾರೆ.

ಈಗಾಗಲೇ ಮೇ ಮೊದಲ ವಾರದಲ್ಲಿ ಮೋದಿಗೆ ಒಂದು ಪತ್ರ ಬರೆದಿದ್ದರು. ಅದಕ್ಕೆ ಪ್ರತಿಕ್ರಿಯೆ ಬಾರದ ಕಾರಣ ಮತ್ತೊಮ್ಮೆ ಪತ್ರ ಬರೆದು, ಪ್ರಜ್ವಲ್‌ ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದು ಪಡಿಸಿ ಆತನನ್ನು ದೇಶಕ್ಕೆ ಕರೆತರಲು ಸಹಕರಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಪ್ರಜ್ವಲ್‌ನ ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದುಪಡಿಸಿದರೆ ಆತ ವಾಪಸ್‌ ಬರಲೇಬೇಕಾಗುತ್ತದೆ. ಹೀಗಾಗಿ ಆ ಕ್ರಮ ಕೈಗೊಳ್ಳಬೇಕು. ವಿದೇಶಾಂಗ ಸಚಿವಾಲಯ ಮಧ್ಯಪ್ರವೇಶಿಸಬೇಕು ಎಂದು ಸಿಎಂ ಸಿದ್ದರಾಮಯಯ್ಯ ಪ್ರಧಾನಿ ಮೋದಿಗೆ ಬರೆದ ಪತ್ರದಲ್ಲಿ ಮನವಿ ಮಾಡಿದ್ದಾರೆ.

ವಿದೇಶದಲ್ಲಿರುವ ಪ್ರಜ್ವಲ್‌ ರೇವಣ್ಣರನ್ನು ಕರೆಸುವುದೇ ನಮ್ಮ ಆದ್ಯತೆಯ ಕೆಲಸ. ಕಾನೂನಾತ್ಮಕವಾಗಿ ಎಲ್ಲಾ ರೀತಿಯಲ್ಲೂ ಸಹಕರಿಸಲು ಎಸ್‌ಐಟಿ ಸಿದ್ಧವಿದೆ. ಹೀಗಾಗಿ ವಿದೇಶಾಂಗ ಸಚಿವಾಲಯ ಮಧ್ಯಪ್ರವೇಶಕ್ಕೆ ಪ್ರಧಾನಿ ಮೋದಿ ಸೂಚನೆ ನೀಡಬೇಕು. ವಿದೇಶಾಂಗ ಸಚಿವಾಲಯದ ಮೂಲಕ ಕೊಡಲೇ ಕ್ರಮಕೈಗೊಳ್ಳಬೇಕು. ಅಂತಾರಾಷ್ಟ್ರೀಯ ಪೊಲೀಸ್‌ ಏಜೆನ್ಸಿ ಮೂಲಕವು ಕ್ರಮಕೈಗೊಳ್ಳಬೇಕು. ಪ್ರಜ್ವಲ್‌ ಪಾಸ್‌ಪೋರ್ಟ್‌ ರದ್ದುಪಡಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹೀಗಾಗಲೇ ಮೇ ಮೊದಲ ವಾರದಲ್ಲಿ ಪ್ರಧಾನಿಗೆ ಬರೆದ ಪತ್ರದಲ್ಲಿ ಒತ್ತಾಹಿಸಿದ್ದರು. ಆದರೆ, ಈ ಪತ್ರಕ್ಕೆ ಈವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ..

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಾ.18ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ : ಮೇ 8ರಂದು ಫಲಿತಾಂಶ ಪ್ರಕಟವಾಗುವ ಸಾಧ್ಯತೆ

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.…

1 min ago

ಮೈಸೂರಿನ ಹೊರವಲಯದಲ್ಲಿ ಹುಲಿ ಸಂಚಾರ : ಮುಂದುವರೆದ ಕಾರ್ಯಾಚರಣೆ

ಮೈಸೂರು : ಬೋಗಾದಿಯ ಗದ್ದಿಗೆ ರಸ್ತೆಯಲ್ಲಿರುವ ಜೆಟ್ಟಿಹುಂಡಿ ಗ್ರಾಮದ ತೋಟವೊಂದರಲ್ಲಿ ಹುಲಿ ಸಂಚರಿಸುತ್ತಿರುವ ಬಗ್ಗೆ ಮಂಗಳವಾರ ರೈತರೊಬ್ಬರು ನೀಡಿದ ಮಾಹಿತಿ…

14 mins ago

ನರೇಗಾ ವಿರೋಧಿ ಕೇಂದ್ರ ಸಚಿವರು, ಸಂಸದರು : ಸಚಿವ ಚಲುವರಾಯಸ್ವಾಮಿ ಕಿಡಿ

ಬೆಂಗಳೂರು : ಕರ್ನಾಟಕದಿಂದ ಚುನಾಯಿತರಾಗಿ ಕೇಂದ್ರದಲ್ಲಿ ಸಂಸದರಾಗಿ, ಮಂತ್ರಿಯಾಗಿರುವವರಿಗೆ ಕಿಂಚಿತ್ ರಾಜ್ಯದ ಜನರ ಬಗ್ಗೆ ಗೌರವ, ಕಾಳಜಿ ಇದ್ದರೆ ಮಹಾತ್ಮಗಾಂಧಿ…

38 mins ago

ಮಕ್ಕಳಲ್ಲಿ ಹೆಚ್ಚುತ್ತಿರುವ ಮೊಬೈಲ್‌ ಗೀಳು : ಡಿಜಿಟಲ್‌ ಲಾಕ್‌ ಪ್ರಯೋಗಕ್ಕೆ ಮುಂದಾದ ಸರ್ಕಾರ

ಬೆಂಗಳೂರು : ಮಕ್ಕಳಲ್ಲಿ ಹೆಚ್ಚುತ್ತಿರುವ ಮೊಬೈಲ್ ಗೀಳು ಕಡಿಮೆ ಮಾಡಿ, ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶದಲ್ಲಿ ಸುಧಾರಣೆ…

45 mins ago

ಎಸ್‌ಸಿಪಿ,ಟಿಎಸ್‌ಪಿ ಅನುದಾನ ಗ್ಯಾರಂಟಿಗೆ ಬಳಕೆ : ಕಾಂಗ್ರೆಸ್‌ನಲ್ಲೇ ಅಸಮಾಧಾನ

ಬೆಂಗಳೂರು : ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಗಿರಿಜನ ಉಪಯೋಜನೆ ಅನುದಾನವನ್ನು ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡುತ್ತಿದೆ…

1 hour ago

ರಾಜ್ಯಕ್ಕೆ ಇನ್ನೊಂದು ಹೈ ಸ್ಪೀಡ್ ರೈಲ್ವೆ ಕಾರಿಡಾರ್ : ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಜತೆ ಎಚ್‌ಡಿಕೆ ಚರ್ಚೆ

ಹೊಸದಿಲ್ಲಿ : ಬಜೆಟ್ ನಂತರ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ರೈಲ್ವೆ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ,…

2 hours ago