ಬಾಗಲಕೋಟೆ: ಪ್ರಜ್ವಲ್ ರೇವಣ್ಣ ಮತ್ತು ಸೂರಜ್ ರೇವಣ್ಣ ಬಂಧನ ವಿಚಾರ ಹಾಸನದಲ್ಲಿ ಮಾನವ ಕುಲವೇ ತಲೆ ತಗ್ಗಿಸುವ ಕೆಲಸ ನಡೆದಿದ್ದು ಇದು ನಿನ್ನೆ ಮೊನ್ನೆ ನಡೆದುದ್ದಲ್ಲ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ ಎನ್ ರಾಜಣ್ಣ ಹೇಳಿದ್ದಾರೆ.
ಬಾಗಲಕೋಟೆಯಲ್ಲಿ ಅಸಹಜ ಲೈಂಗಿಕ ಪ್ರಕರಣದಲ್ಲಿ ಎಂಎಲ್ಸಿ ಸೂರಜ್ ರೇವಣ್ಣ ಮತ್ತು ಹಾಸನ ಪೆನ್ ಡ್ರೈವ್ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಬಂಧನಕ್ಕೊಳಗಾಗಿರುವ ವಿಚಾರವಾಗಿ ಮಾಧ್ಯಮಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು ಇದು ಬಹಳಷ್ಟು ವರ್ಷಗಳಿಂದ ನಡೆಯುತ್ತಾ ಬರುತ್ತಿದ್ದು ಈಗ ಸಂತ್ರಸ್ತೆಯರು ಧೈರ್ಯವಾಗಿ ಹೇಳಲು ಮುಂದೆ ಬರುತ್ತಿದ್ದಾರೆ. ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರಿಗೆ ಈ ವಯಸ್ಸಲ್ಲಿ ಈ ರೀತಿಯ ಮಾನಸಿಕೆ ಹಿಂಸೆ ದುರದೃಷ್ಟಕರ ಎಂದು ಬೇಸರ ವ್ಯಕ್ತಪಡಿಸಿದರು.
ಸಂತ್ರಸ್ತರಿಗೆ ಆಚೆ ಬಂದು ಹೇಳಿಕೊಳ್ಳುವುದಕ್ಕೆ ಧೈರ್ಯ ಇರಲಿಲ್ಲ. ಈಗ ನಾನು ಉಸ್ತುವಾರಿ ಸಚಿವನಾದ ಮೇಲೆ ನಾನು ಧೈರ್ಯ ತುಂಬಿದ್ದೇನೆ. ನಿಮಗೆ ರಕ್ಷಣೆ ಕೊಡ್ತೀವಿ, ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವ ಪ್ರಕ್ರಿಯೆ ವೇಳೆ ನಿಮ್ಮ ಜೊತೆ ಇರುತ್ತೇವೆ ಎಂದಿದ್ದೇವೆ. ಈ ರೀತಿಯಾಗಿ ಧೈರ್ಯ ತುಂಬಿದ ಪರಿಣಾಮ ಸಂತ್ರಸ್ತರು ಒಬ್ಬೊಬ್ಬರಾಗಿ ಆಚೆ ಬಂದು ಹೇಳುತ್ತಿದ್ದಾರೆ ಎಂದರು.
ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್ನಲ್ಲಿ ಶೆಡ್ವೊಂದರ ಮೇಲೆ ದಾಳಿ ನಡೆಸಿದ್ದ ಎನ್ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…