ಬಾಗಲಕೋಟೆ: ಪ್ರಜ್ವಲ್ ರೇವಣ್ಣ ಮತ್ತು ಸೂರಜ್ ರೇವಣ್ಣ ಬಂಧನ ವಿಚಾರ ಹಾಸನದಲ್ಲಿ ಮಾನವ ಕುಲವೇ ತಲೆ ತಗ್ಗಿಸುವ ಕೆಲಸ ನಡೆದಿದ್ದು ಇದು ನಿನ್ನೆ ಮೊನ್ನೆ ನಡೆದುದ್ದಲ್ಲ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ ಎನ್ ರಾಜಣ್ಣ ಹೇಳಿದ್ದಾರೆ.
ಬಾಗಲಕೋಟೆಯಲ್ಲಿ ಅಸಹಜ ಲೈಂಗಿಕ ಪ್ರಕರಣದಲ್ಲಿ ಎಂಎಲ್ಸಿ ಸೂರಜ್ ರೇವಣ್ಣ ಮತ್ತು ಹಾಸನ ಪೆನ್ ಡ್ರೈವ್ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಬಂಧನಕ್ಕೊಳಗಾಗಿರುವ ವಿಚಾರವಾಗಿ ಮಾಧ್ಯಮಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು ಇದು ಬಹಳಷ್ಟು ವರ್ಷಗಳಿಂದ ನಡೆಯುತ್ತಾ ಬರುತ್ತಿದ್ದು ಈಗ ಸಂತ್ರಸ್ತೆಯರು ಧೈರ್ಯವಾಗಿ ಹೇಳಲು ಮುಂದೆ ಬರುತ್ತಿದ್ದಾರೆ. ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರಿಗೆ ಈ ವಯಸ್ಸಲ್ಲಿ ಈ ರೀತಿಯ ಮಾನಸಿಕೆ ಹಿಂಸೆ ದುರದೃಷ್ಟಕರ ಎಂದು ಬೇಸರ ವ್ಯಕ್ತಪಡಿಸಿದರು.
ಸಂತ್ರಸ್ತರಿಗೆ ಆಚೆ ಬಂದು ಹೇಳಿಕೊಳ್ಳುವುದಕ್ಕೆ ಧೈರ್ಯ ಇರಲಿಲ್ಲ. ಈಗ ನಾನು ಉಸ್ತುವಾರಿ ಸಚಿವನಾದ ಮೇಲೆ ನಾನು ಧೈರ್ಯ ತುಂಬಿದ್ದೇನೆ. ನಿಮಗೆ ರಕ್ಷಣೆ ಕೊಡ್ತೀವಿ, ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವ ಪ್ರಕ್ರಿಯೆ ವೇಳೆ ನಿಮ್ಮ ಜೊತೆ ಇರುತ್ತೇವೆ ಎಂದಿದ್ದೇವೆ. ಈ ರೀತಿಯಾಗಿ ಧೈರ್ಯ ತುಂಬಿದ ಪರಿಣಾಮ ಸಂತ್ರಸ್ತರು ಒಬ್ಬೊಬ್ಬರಾಗಿ ಆಚೆ ಬಂದು ಹೇಳುತ್ತಿದ್ದಾರೆ ಎಂದರು.
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…
ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…
ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…