ಬೆಂಗಳೂರು: ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹಿಂಪಡೆದಿದ್ದಾರೆ.
ಎಸ್ಐಟಿ ಪೊಲೀಸರು ದಾಖಲಿಸಿರುವ ಎಫ್ಐಆರ್ಗೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ವಿಚಾರಣೆ ಆರಂಭವಾಗುತ್ತಿದ್ದಂತೆ ವಿಶೇಷ ಸರ್ಕಾರಿ ಅಭಿಯೋಜಕರಾದ ಪ್ರೊ.ರವಿವರ್ಮ ಕುಮಾರ್ ಅವರು, ಮೇ.31ರಂದು ಪ್ರಜ್ವಲ್ ಬಂಧನದ ಹಿನ್ನೆಲೆ ಅರ್ಜಿಯು ಅನೂರ್ಜಿತಗೊಂಡಿದೆ ಎಂದು ಪ್ರಜ್ವಲ್ ಜೂನ್.12ರಂದು ವಿಚಾರಣಾಧೀನ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಹಿಂಪಡೆದಿದ್ದಾರೆ. ಹೀಗಾಗಿ ಈಗ ಹೈಕೋರ್ಟ್ನಲ್ಲಿ ನಿರೀಕ್ಷಣಾ ಜಾಮೀನು ಹೇಗೆ ಕೋರಲಾಗುತ್ತದೆ. ಅರ್ಜಿಯು ಊರ್ಜಿತವಾಗುವುದಿಲ್ಲ ಎಂದರು.
ಅರ್ಜಿದಾರರ ಪರ ವಕೀಲರು ಅರ್ಜಿ ಹಿಂಪಡೆಯಲು ನಾವೇ ನಿರ್ಧರಿಸಿದ್ದೇವೆ. ಇದನ್ನು ಪುರಸ್ಕರಿಸಬೇಕು ಎಂದು ಮನವಿ ಮಾಡಿದರು. ಅದನ್ನು ಪರಿಶೀಲಿಸಿದ ಪೀಠವು ಅರ್ಜಿ ಇತ್ಯರ್ಥಪಡಿಸಲಾಗಿದೆ ಎಂದು ಆದೇಶಿಸಿತು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…