ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಜಪ್ತಿ ಮಾಡಿರುವ ವಿಡಿಯೋ ಮತ್ತು ಫೋಟೋಗಳನ್ನು ನೀಡುವಂತೆ ಹೈಕೋರ್ಟ್ಗೆ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅರ್ಜಿ ಸಲ್ಲಿಸಿದ್ದಾರೆ.
ಈ ಕುರಿತು ಇಂದು(ಜನವರಿ.10) ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ತಮಗೆ ಫೋಟೋ ಮತ್ತು ವಿಡಿಯೋ ಯಾಕೆ ಎಂದು ಪ್ರಶ್ನಿಸಿದೆ. ಅಲ್ಲದೇ ಎಸ್ಐಟಿ ಅಧಿಕಾರಿಗಳ ಪರ ವಕೀಲ ಎಸ್ಪಿಪಿ ಜಗದೀಶ್ ಆಕ್ಷೇಪ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಅರ್ಜಿ ವಿಚಾರಣೆಯನ್ನು ಜನವರಿ.16ಕ್ಕೆ ಮುಂದೂಡಲಾಗಿದೆ ಎಂದು ಆದೇಶ ಹೊರಡಿಸಿದೆ.
ಹೈಕೋರ್ಟ್ಗೆ ಪ್ರಜ್ವಲ್ ಅರ್ಜಿ ಏನು?
ಲೈಂಗಿಕ ದೌರ್ಜನ್ಯ ಕೇಸ್ನ ಅಡಿಯಲ್ಲಿ ಆರು ತಿಂಗಳಿನಿಂದ ನ್ಯಾಯಾಂಗ ಬಂಧನವಾಗಿರುವ ಪ್ರಜ್ವಲ್, ತಮ್ಮ ವಿರುದ್ಧದ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳು ಜಪ್ತಿ ಮಾಡಿರುವ ವಿಡಿಯೋ ಹಾಗೂ ಫೋಟೋಗಳನ್ನು ಹಿಂತಿರುಗಿಸಬೇಕೆಂದು ತಮ್ಮ ಪರ ವಕೀಲರಿಂದ ಮನವಿ ಮಾಡಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…