ಬೆಂಗಳೂರು : ಅತ್ಯಾಚಾರ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ಜರ್ಮನಿಯ ಮ್ಯೂನಿಚ್ ನಿಂದ ಬೆಂಗಳೂರಿಗೆ ನಾಳೆ ವಾಪಸ್ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ತಂದೆ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಜೈಲು ಸೇರಿದ್ದರು. ಇದೀಗ ಜಾಮೀನು ಪಡೆದು ಹೊರಗೆ ಬಂದಿದ್ದಾರೆ.
ಹೀಗಾಗಿ ಪ್ರಜ್ವಲ್ ರೇವಣ್ಣ ನಾಳೆಯೇ ಬೆಂಗಳೂರಿಗೆ ಆಗಮಿಸಿ ಕೋರ್ಟ್ ಗೆ ಶರಣಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಹರಿಯಾಣದ ಅಕಲ್ ಟ್ರಾವೆಲ್ಸ್ ನಿಂದ ಪ್ರಜ್ವಲ್ ಗೆ ಟಿಕೆಟ್ ಬುಕಿಂಗ್ ಮಾಡಲಾಗಿದೆ.
ಬ್ಯುಸಿನೆಸ್ ಕ್ಲಾಸ್ ನಲ್ಲಿ ಅವರ ಟಿಕೆಟ್ ಬುಕ್ ಆಗಿದ್ದು, ಮೇ 16 ರಂದು ಮಧ್ಯರಾತ್ರಿ 12:30 ಕ್ಕೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ಲ್ಯಾಂಡ್ ಆಗುವ ಲುಫ್ತಾನ್ಸಾ ಏರ್ಲೈನ್ಸ್ ವಿಮಾನದಲ್ಲಿ ಪ್ರಜ್ವಲ್ ರೇವಣ್ಣ ಆಗಮಿಸಲಿದ್ದಾರೆ ಎನ್ನಲಾಗಿದೆ.
ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…
ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…
ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ…
ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಇಡೀ…
ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ…
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಪ್ರತಿ ವರ್ಷ ಆಷಾಢ ಮಾಸದ ಶುಕ್ರವಾರಗಳಂದು…