ರಾಜ್ಯ

ಪ್ರಜ್ವಲ್‌ ರೇವಣ್ಣ ಪ್ರಕರಣ: ಕಾರು ಚಾಲಕ ನಾಪತ್ತೆ!

ಹಾಸನ: ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣ ದಿನದಿಂದ ದಿನಕ್ಕೆ ಹೊಸ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಅಶ್ಲೀಲ ವಿಡಿಯೊಗಳ ಕುರಿತು ತನಿಖೆ ಆರಂಭವಾಗಿದ್ದು, ಇದೀಗ ಪೆನ್‌ಡ್ರೈವ್ ಕುರಿತು ಸಾಕಷ್ಟು ಸುದ್ದಿಗಳು ಹರಿದಾಡುತ್ತಿವೆ.

ನಿನ್ನೆಯಷ್ಟೇ ಹಾಸನ ಜಿಲ್ಲೆಯ ಬಿಜೆಪಿ ಮುಖಂಡ ದೇವರಾಜೇಗೌಡ ಪೆನ್‌ಡ್ರೈವ್‌ನಲ್ಲಿದ್ದ ವಿವರಗಳನ್ನು ಬಹಿರಂಗಪಡಿಸಿರುವುದು ರೇವಣ್ಣ ಕುಟುಂಬದ ಮಾಜಿ ಕಾರು ಚಾಲಕ ಕಾರ್ತಿಕ್.‌ ಪೆನ್‌ಡ್ರೈವ್ ಹಂಚಿಕೆ ಹಿಂದೆ ಯಾರಿದ್ದಾರೆ ಎಂಬ ಎಲ್ಲಾ ದಾಖಲೆಗಳನ್ನು ಎಸ್‌ಐಟಿ ಮುಂದಿಡುವೆ ಎಂದಿದ್ದರು.

ಈ ಹೇಳಿಕೆ ಬೆನ್ನಲ್ಲೇ ಸ್ಪಷ್ಟನೆ ನೀಡಿದ್ದ ಕಾರ್ತಿಕ್‌ ನಾನು ಬಿಜೆಪಿ ಮುಖಂಡ ದೇವರಾಜೇಗೌಡ ಬಿಟ್ಟರೆ ಬೇರೆ ಯಾರಿಗೂ ವಿಡಿಯೊ ಹಾಗೂ ಫೋಟೊಗಳನ್ನು ಹಂಚಿಕೊಂಡಿಲ್ಲ ಎಂದು ಹೇಳಿದ್ದರು. ಹೀಗಾಗಿ ಕಾರ್ತಿಕ್‌ಗೆ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ನೊಟೀಸ್‌ ನೀಡಿತ್ತು. ಆದರೆ ಇದೀಗ ಕಾರ್ತಿಕ್‌ ನಾಪತ್ತೆಯಾಗಿದ್ದಾನೆ.

ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕಡುವಿನಕೋಟೆ ನಿವಾಸಿ ಕಾರ್ತಿಕ್‌ 13 ವರ್ಷಗಳ ಕಾಲ ಕಾರು ಚಾಲಕನಾಗಿ ಪ್ರಜ್ವಲ್‌ ರೇವಣ್ಣ ಬಳಿ ಕೆಲಸ ನಿರ್ವಹಿಸಿದ್ದ. ಕಾರ್ತಿಕ್‌ ನಾಪತ್ತೆಯಾಗಿರುವುದರ ಬಗ್ಗೆ ಮಾತನಾಡಿದ ಹೆಚ್‌ಡಿ ಕುಮಾರಸ್ವಾಮಿ ಇದರ ಹಿಂದೆ ಪ್ರಭಾವಿಗಳ ಕೈವಾಡವಿದೆ ಎಂದಿದ್ದಾರೆ ಅಲ್ಲದೇ ಆತ ಮಲೇಷ್ಯಾಗೆ ಹೋಗಿದ್ದಾನೆ ಎಂದೂ ಸಹ ಹೇಳಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮಾನಸ ಗಂಗೋತ್ರಿ ಕ್ಯಾಂಟೀನ್‌ಗಳಲ್ಲಿ ದರ ಏರಿಕೆಗೆ ಕಡಿವಾಣ ಹಾಕಿ

ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿರುವ ಖಾಸಗಿ ಹೋಟೆಲ್‌ಗಳಲ್ಲಿ ಕಾಫಿ,ತಿಂಡಿ, ಹಣ್ಣಿನ ಪಾನೀಯ ದರ ದುಬಾರಿಯಾಗಿದ್ದು, ಉನ್ನತ ಶಿಕ್ಷಣ ವ್ಯಾಸಂಗಕ್ಕಾಗಿ ಬರುವ…

1 hour ago

ಓದುಗರ ಪತ್ರ: ಶಾಲಾ ಶಿಕ್ಷಕರ ಮಾದರಿ ನಡೆ

ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳಿಗೆ ದಾಖಲಾಗುವ ಮಕ್ಕಳ ಸಂಖ್ಯೆ ದಿನೇ ದಿನೇ ಕಡಿಮೆಯಾಗುತ್ತಿದ್ದು, ಶಾಲೆಗಳನ್ನು ಮುಚ್ಚುವ ಪರಿಸ್ಥಿತಿ ಉಂಟಾಗಿದೆ. ಗದಗ…

2 hours ago

ಓದುಗರ ಪತ್ರ: ರೇಷ್ಮೆ ನೂಲು ಘಟಕಕ್ಕೆ ಹೊಸ ಯಂತ್ರ ಅಳವಡಿಕೆ ಶ್ಲಾಘನೀಯ

ತಿ. ನರಸೀಪುರ ಪಟ್ಟಣದ ರೇಷ್ಮೆ ನೂಲು ತಯಾರಿಕಾ ಘಟಕಕ್ಕೆ ಹೊಸದಾಗಿ ಎರಡು ಯಂತ್ರಗಳನ್ನು ಅಳವಡಿಸಲು ಕ್ರಮ ಕೈಗೊಂಡಿರುವುದು ಘಟಕದ ಅಭಿವೃದ್ಧಿಯ…

2 hours ago

ಓದುಗರ ಪತ್ರ: ಶ್ರೀಕಂಠೇಶ್ವರ ದೇಗುಲದ ಆನೆ ಗೌರಿ ಕರೆತರಲು ನಿರ್ಲಕ್ಷ್ಯವೇಕೆ?

ನಂಜನಗೂಡಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಸ್ಥಾನದ ಪಟ್ಟದ ಆನೆ ಗೌರಿಯನ್ನು ಕಾಲಿನ ಗಾಯ ಹಾಗೂ ಅನಾರೋಗ್ಯದ ಕಾರಣ ಚಿಕಿತ್ಸೆಗಾಗಿ ೨೦೧೭ರಲ್ಲಿ ಬೆಂಗಳೂರಿನ…

2 hours ago

ಲಕ್ಷ್ಮಣರೇಖೆ ಕುವೆಂಪು ಕಾವ್ಯಾಭಿವ್ಯಕ್ತಿಗೆ ಆರ್.ಕೆ.ಲಕ್ಷ್ಮಣ್‌ರ ಕಲಾಸ್ಪರ್ಶ

ಎಚ್.ಎಂ.ನಟರಾಜು ಹಾನವಾಡಿ ಕಾವ್ಯ-ಕಲೆಯ ಅನುಸಂಧಾನದ ದಾಖಲೆಯನ್ನು ಸಂಪಾದಿಸಿ ಗ್ರಂಥರೂಪಕ್ಕಿಳಿದ ಡಾ.ಕೆ.ಸಿ.ಶಿವಾರೆಡ್ಡಿ  ಸಾಹಿತ್ಯ ಮತ್ತು ಚಿತ್ರಕಲೆಯ ನಡುವಿನ ಸಂಬಂಧ ಬುದ್ಧಿ ಭಾವಗಳ…

2 hours ago

ಏಕ ಪರದೆಯ ಚಿತ್ರಮಂದಿರ ಅಸ್ತಿತ್ವ , ಚಿತ್ರಗಳ ಪ್ರದರ್ಶನ, ನಿರ್ಮಾಣ ಮಿತವ್ಯಯ ಇತ್ಯಾದಿ

ವೈಡ್‌ ಆಂಗಲ್‌  ಬಾ.ನಾ.ಸುಬ್ರಹ್ಮಣ್ಯ  ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಭಾನುವಾರ ವಿಚಾರಸಂಕಿರಣವೊಂದನ್ನು ಹಮ್ಮಿಕೊಂಡಿದೆ. ಕನ್ನಡ ಚಿತ್ರರಂಗದ ಸಮಸ್ಯೆಗಳತ್ತ ಪಕ್ಷಿನೋಟ ಬೀರಬಹುದಾದ…

2 hours ago