ರಾಜ್ಯ

ಪ್ರಜ್ವಲ್‌ ರೇವಣ್ಣ ಪ್ರಕರಣ: ತೆನೆಹೊತ್ತ ಮಹಿಳೆ ಪೆನ್‌ಡ್ರೈವ್‌ ಹೊರಬೇಕಾಗುತ್ತದೆ: ಡಿಕೆ ಸುರೇಶ್‌

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಕೆಸರೆರಚಾಟ ಏರ್ಪಟ್ಟಿದೆ. ತನ್ನನ್ನು ಹಾಗೂ ತನ್ನ ಅಣ್ಣ ಡಿಕೆ ಶಿವಕುಮಾರ್‌ ಅವರನ್ನು ಚಿಲ್ಲರೆ ಸಹೋದರರು, ಅವರದು ʼ420 ಕುಟುಂಬʼ ಎಂದು ಹೇಳಿದ್ದ ಹೆಚ್‌ಡಿ ಕುಮಾರಸ್ವಾಮಿಗೆ ತಿರುಗೇಟು ನೀಡಿರುವ ಡಿಕೆ ಸುರೇಶ್‌ ತೆನೆಹೊತ್ತ ಮಹಿಳೆ ಪೆನ್‌ಡ್ರೈವ್‌ ಹೊರಬೇಕಾಗುತ್ತದೆ ಎಂದು ಟಾಂಗ್‌ ನೀಡಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು ನಾನು ಅವರ ಕುಟುಂಬವನ್ನು 420 ಕುಟುಂಬ ಎಂದು ಕರೆಯುವುದಿಲ್ಲ. ಏಕೆಂದರೆ ಅದು ಮಾಜಿ ಪ್ರಧಾನಿಗಳ ಕುಟುಂಬ. ಅವರ ಕುಟುಂಬ, ಅಭಿಮಾನಿಗಳಿಗೆ ಬೇಸರ ಆಗಬಹುದು. ದೇವೇಗೌಡರ ಕುಟುಂಬದ ಆಸ್ತಿ ಪೆನ್‌ಡ್ರೈವ್‌ ಎಂದು ವ್ಯಂಗವಾಡಿದರು.

ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ಆಸ್ತಿ ಪೆನ್‌ಡ್ರೈವ್‌ ಆಗಿದೆ. ತೆನೆಹೊತ್ತ ಮಹಿಳೆ ಪೆನ್‌ಡ್ರೈವ್‌ ಹೊರಬೇಕಾಗುತ್ತದೆ. ಇದು ಪೆನ್‌ಡ್ರೈವ್‌ ಕುಟುಂಬ. ಎಲ್ಲವನ್ನೂ ದೇಶ ಹಾಗೂ ರಾಜ್ಯದ ಜನರು ಗಮನಿಸುತ್ತಿದ್ದಾರೆ. ಬೇಕಿದ್ದರೆ ಅವರ ಮನಸಿಗೆ ಬಂದಹಾಗೆ ಬೈದುಕೊಳ್ಳಲಿ. ಹಾಸನ ಹೆಣ್ಣುಮಕ್ಕಳ ಮರ್ಯಾದೆ ಉಳಿಸಬೇಕು ಅಷ್ಟೇ. ನಾವು ಅವರನ್ನು ಕೆಣಕಿಲ್ಲ ಎಂದು ಡಿಕೆ ಸುರೇಶ್‌ ಹೇಳಿದರು.

ಅಲ್ಲದೇ ಪೆನ್‌ಡ್ರೈವ್‌ ಬಿಡುಗಡೆ ಮಾಡಿದ್ದು ಅವರದ್ದೇ ಮೈತ್ರಿ ಪಾರ್ಟ್‌ನರ್.‌ ಅವರ ಬಗ್ಗೆ ಮಾತನಾಡುವ ಧೈರ್ಯ ಕುಮಾರಸ್ವಾಮಿಗೆ ಇಲ್ಲ. ಹಾಗಾಗಿ ನಮ್ಮ ಮೇಲೆ ಮಾತನಾಡುತ್ತಿದ್ದಾರೆ ಎಂದೂ ಸಹ ಡಿಕೆ ಸುರೇಶ್‌ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದರು.

ಕುಮಾರಸ್ವಾಮಿ ಹೇಳಿದ್ದಿಷ್ಟು:

ಇನ್ನು ಪ್ರಜ್ವಲ್‌ ರೇವಣ್ಣ ಪ್ರಕರಣದ ವಿಚಾರವಾಗಿ ಪೆನ್‌ಡ್ರೈವ್‌ ಬಿಡುಗಡೆ ಮಾಡಿದ್ದು ಪ್ರಜ್ವಲ್‌ ಮಾಜಿ ಕಾರು ಡ್ರೈವರ್‌ ಕಾರ್ತಿಕ್‌ ಎಂಬ ಆರೋಪ ಕೇಳಿಬಂದಿದ್ದು, ಸದ್ಯ ಆತ ತಲೆಮರೆಸಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ. ಈ ಕುರಿತು ಮಾತನಾಡಿದ ಹೆಚ್‌ಡಿಕೆ ಪ್ರಜ್ವಲ್‌ ಕಾರು ಡ್ರೈವರ್‌ ಆಗಿದ್ದ ಕಾರ್ತಿಕ್‌ನನ್ನು ಮಲೇಷ್ಯಾಗೆ ಕಳುಹಿಸದ್ಯಾರು? ಆತ ವಿಡಿಯೊ ಬಿಡುಗಡೆ ಮಾಡಿದ್ದಾನಲ್ವಾ? ಆ ವಿಡಿಯೊ ಬಿಡುಗಡೆ ಮಾಡಿಸಿದ್ಯಾರು? ಆತ ದೇವರಾಜೇಗೌಡ ಕೈನಲ್ಲಿ ಪೆನ್‌ಡ್ರೈವ್‌ ಕೊಟ್ಟೆ ಎಂದು ಹೇಳಿದ್ದ. ಆದರೆ ಈಗ ಚಿಲ್ಲರೆ ಸಹೋದರರು ಕುಮಾರಸ್ವಾಮಿಯೇ ಬಿಟ್ಟಿರಬೇಕು ಎಂದು ಹೇಳುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದರು.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಟ್ಯಾಂಕರ್ ಮೇಲೆ ದಾಳಿ

ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್‌ಬೋಟ್‌ಗಳಿಂದ…

3 hours ago

ಮತ್ತೆ ಹೊರ್ಮುಜ್‌ ಬಂದ್‌ ಮಾಡಿದ ಇರಾನ್‌

ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್‌ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್‌, ತನ್ನ ನಿರ್ಧಾರವನ್ನು…

4 hours ago

ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಸಚಿವೆ ಹೆಬ್ಬಾಳ್ಕರ್‌ ಭರವಸೆ

ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…

5 hours ago

ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದ ನಾಲ್ಕು ಚೀತಾ

ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

5 hours ago

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…

7 hours ago

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

9 hours ago