ರಾಜ್ಯ

ಪ್ರಜ್ವಲ್‌ ರೇವಣ್ಣ ಪ್ರಕರಣ: ತೆನೆಹೊತ್ತ ಮಹಿಳೆ ಪೆನ್‌ಡ್ರೈವ್‌ ಹೊರಬೇಕಾಗುತ್ತದೆ: ಡಿಕೆ ಸುರೇಶ್‌

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಕೆಸರೆರಚಾಟ ಏರ್ಪಟ್ಟಿದೆ. ತನ್ನನ್ನು ಹಾಗೂ ತನ್ನ ಅಣ್ಣ ಡಿಕೆ ಶಿವಕುಮಾರ್‌ ಅವರನ್ನು ಚಿಲ್ಲರೆ ಸಹೋದರರು, ಅವರದು ʼ420 ಕುಟುಂಬʼ ಎಂದು ಹೇಳಿದ್ದ ಹೆಚ್‌ಡಿ ಕುಮಾರಸ್ವಾಮಿಗೆ ತಿರುಗೇಟು ನೀಡಿರುವ ಡಿಕೆ ಸುರೇಶ್‌ ತೆನೆಹೊತ್ತ ಮಹಿಳೆ ಪೆನ್‌ಡ್ರೈವ್‌ ಹೊರಬೇಕಾಗುತ್ತದೆ ಎಂದು ಟಾಂಗ್‌ ನೀಡಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು ನಾನು ಅವರ ಕುಟುಂಬವನ್ನು 420 ಕುಟುಂಬ ಎಂದು ಕರೆಯುವುದಿಲ್ಲ. ಏಕೆಂದರೆ ಅದು ಮಾಜಿ ಪ್ರಧಾನಿಗಳ ಕುಟುಂಬ. ಅವರ ಕುಟುಂಬ, ಅಭಿಮಾನಿಗಳಿಗೆ ಬೇಸರ ಆಗಬಹುದು. ದೇವೇಗೌಡರ ಕುಟುಂಬದ ಆಸ್ತಿ ಪೆನ್‌ಡ್ರೈವ್‌ ಎಂದು ವ್ಯಂಗವಾಡಿದರು.

ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ಆಸ್ತಿ ಪೆನ್‌ಡ್ರೈವ್‌ ಆಗಿದೆ. ತೆನೆಹೊತ್ತ ಮಹಿಳೆ ಪೆನ್‌ಡ್ರೈವ್‌ ಹೊರಬೇಕಾಗುತ್ತದೆ. ಇದು ಪೆನ್‌ಡ್ರೈವ್‌ ಕುಟುಂಬ. ಎಲ್ಲವನ್ನೂ ದೇಶ ಹಾಗೂ ರಾಜ್ಯದ ಜನರು ಗಮನಿಸುತ್ತಿದ್ದಾರೆ. ಬೇಕಿದ್ದರೆ ಅವರ ಮನಸಿಗೆ ಬಂದಹಾಗೆ ಬೈದುಕೊಳ್ಳಲಿ. ಹಾಸನ ಹೆಣ್ಣುಮಕ್ಕಳ ಮರ್ಯಾದೆ ಉಳಿಸಬೇಕು ಅಷ್ಟೇ. ನಾವು ಅವರನ್ನು ಕೆಣಕಿಲ್ಲ ಎಂದು ಡಿಕೆ ಸುರೇಶ್‌ ಹೇಳಿದರು.

ಅಲ್ಲದೇ ಪೆನ್‌ಡ್ರೈವ್‌ ಬಿಡುಗಡೆ ಮಾಡಿದ್ದು ಅವರದ್ದೇ ಮೈತ್ರಿ ಪಾರ್ಟ್‌ನರ್.‌ ಅವರ ಬಗ್ಗೆ ಮಾತನಾಡುವ ಧೈರ್ಯ ಕುಮಾರಸ್ವಾಮಿಗೆ ಇಲ್ಲ. ಹಾಗಾಗಿ ನಮ್ಮ ಮೇಲೆ ಮಾತನಾಡುತ್ತಿದ್ದಾರೆ ಎಂದೂ ಸಹ ಡಿಕೆ ಸುರೇಶ್‌ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದರು.

ಕುಮಾರಸ್ವಾಮಿ ಹೇಳಿದ್ದಿಷ್ಟು:

ಇನ್ನು ಪ್ರಜ್ವಲ್‌ ರೇವಣ್ಣ ಪ್ರಕರಣದ ವಿಚಾರವಾಗಿ ಪೆನ್‌ಡ್ರೈವ್‌ ಬಿಡುಗಡೆ ಮಾಡಿದ್ದು ಪ್ರಜ್ವಲ್‌ ಮಾಜಿ ಕಾರು ಡ್ರೈವರ್‌ ಕಾರ್ತಿಕ್‌ ಎಂಬ ಆರೋಪ ಕೇಳಿಬಂದಿದ್ದು, ಸದ್ಯ ಆತ ತಲೆಮರೆಸಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ. ಈ ಕುರಿತು ಮಾತನಾಡಿದ ಹೆಚ್‌ಡಿಕೆ ಪ್ರಜ್ವಲ್‌ ಕಾರು ಡ್ರೈವರ್‌ ಆಗಿದ್ದ ಕಾರ್ತಿಕ್‌ನನ್ನು ಮಲೇಷ್ಯಾಗೆ ಕಳುಹಿಸದ್ಯಾರು? ಆತ ವಿಡಿಯೊ ಬಿಡುಗಡೆ ಮಾಡಿದ್ದಾನಲ್ವಾ? ಆ ವಿಡಿಯೊ ಬಿಡುಗಡೆ ಮಾಡಿಸಿದ್ಯಾರು? ಆತ ದೇವರಾಜೇಗೌಡ ಕೈನಲ್ಲಿ ಪೆನ್‌ಡ್ರೈವ್‌ ಕೊಟ್ಟೆ ಎಂದು ಹೇಳಿದ್ದ. ಆದರೆ ಈಗ ಚಿಲ್ಲರೆ ಸಹೋದರರು ಕುಮಾರಸ್ವಾಮಿಯೇ ಬಿಟ್ಟಿರಬೇಕು ಎಂದು ಹೇಳುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದರು.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್‌ ಹುಸೇನ್‌ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…

58 mins ago

ಹಿರಿಯ ಸಾಹಿತಿ ಪಿ.ಲಂಕೇಶ್‌ ಪತ್ನಿ ಇಂದಿರಾ ಲಂಕೇಶ್‌ ನಿಧನ

ಬೆಂಗಳೂರು: ಲಂಕೇಶ್‌ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್‌ ಅವರ ಪತ್ನಿ ಇಂದಿರಾ ಲಂಕೇಶ್‌ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…

1 hour ago

ಮಹಾರಾಷ್ಟ್ರ| ತೆರೆದ ಬಾವಿಗೆ ಬಿದ್ದ ಪಿಕ್‌ಅಪ್‌ ವಾಹನ: 8 ಮಂದಿ ದುರ್ಮರಣ

ಮುಂಬೈ: ಪಿಕ್‌ ಅಪ್‌ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…

2 hours ago

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

7 hours ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

7 hours ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

7 hours ago