ರಾಜ್ಯ

ಪ್ರಜ್ವಲ್‌ ರೇವಣ್ಣ ಪ್ರಕರಣ: ತೆನೆಹೊತ್ತ ಮಹಿಳೆ ಪೆನ್‌ಡ್ರೈವ್‌ ಹೊರಬೇಕಾಗುತ್ತದೆ: ಡಿಕೆ ಸುರೇಶ್‌

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಕೆಸರೆರಚಾಟ ಏರ್ಪಟ್ಟಿದೆ. ತನ್ನನ್ನು ಹಾಗೂ ತನ್ನ ಅಣ್ಣ ಡಿಕೆ ಶಿವಕುಮಾರ್‌ ಅವರನ್ನು ಚಿಲ್ಲರೆ ಸಹೋದರರು, ಅವರದು ʼ420 ಕುಟುಂಬʼ ಎಂದು ಹೇಳಿದ್ದ ಹೆಚ್‌ಡಿ ಕುಮಾರಸ್ವಾಮಿಗೆ ತಿರುಗೇಟು ನೀಡಿರುವ ಡಿಕೆ ಸುರೇಶ್‌ ತೆನೆಹೊತ್ತ ಮಹಿಳೆ ಪೆನ್‌ಡ್ರೈವ್‌ ಹೊರಬೇಕಾಗುತ್ತದೆ ಎಂದು ಟಾಂಗ್‌ ನೀಡಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು ನಾನು ಅವರ ಕುಟುಂಬವನ್ನು 420 ಕುಟುಂಬ ಎಂದು ಕರೆಯುವುದಿಲ್ಲ. ಏಕೆಂದರೆ ಅದು ಮಾಜಿ ಪ್ರಧಾನಿಗಳ ಕುಟುಂಬ. ಅವರ ಕುಟುಂಬ, ಅಭಿಮಾನಿಗಳಿಗೆ ಬೇಸರ ಆಗಬಹುದು. ದೇವೇಗೌಡರ ಕುಟುಂಬದ ಆಸ್ತಿ ಪೆನ್‌ಡ್ರೈವ್‌ ಎಂದು ವ್ಯಂಗವಾಡಿದರು.

ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ಆಸ್ತಿ ಪೆನ್‌ಡ್ರೈವ್‌ ಆಗಿದೆ. ತೆನೆಹೊತ್ತ ಮಹಿಳೆ ಪೆನ್‌ಡ್ರೈವ್‌ ಹೊರಬೇಕಾಗುತ್ತದೆ. ಇದು ಪೆನ್‌ಡ್ರೈವ್‌ ಕುಟುಂಬ. ಎಲ್ಲವನ್ನೂ ದೇಶ ಹಾಗೂ ರಾಜ್ಯದ ಜನರು ಗಮನಿಸುತ್ತಿದ್ದಾರೆ. ಬೇಕಿದ್ದರೆ ಅವರ ಮನಸಿಗೆ ಬಂದಹಾಗೆ ಬೈದುಕೊಳ್ಳಲಿ. ಹಾಸನ ಹೆಣ್ಣುಮಕ್ಕಳ ಮರ್ಯಾದೆ ಉಳಿಸಬೇಕು ಅಷ್ಟೇ. ನಾವು ಅವರನ್ನು ಕೆಣಕಿಲ್ಲ ಎಂದು ಡಿಕೆ ಸುರೇಶ್‌ ಹೇಳಿದರು.

ಅಲ್ಲದೇ ಪೆನ್‌ಡ್ರೈವ್‌ ಬಿಡುಗಡೆ ಮಾಡಿದ್ದು ಅವರದ್ದೇ ಮೈತ್ರಿ ಪಾರ್ಟ್‌ನರ್.‌ ಅವರ ಬಗ್ಗೆ ಮಾತನಾಡುವ ಧೈರ್ಯ ಕುಮಾರಸ್ವಾಮಿಗೆ ಇಲ್ಲ. ಹಾಗಾಗಿ ನಮ್ಮ ಮೇಲೆ ಮಾತನಾಡುತ್ತಿದ್ದಾರೆ ಎಂದೂ ಸಹ ಡಿಕೆ ಸುರೇಶ್‌ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದರು.

ಕುಮಾರಸ್ವಾಮಿ ಹೇಳಿದ್ದಿಷ್ಟು:

ಇನ್ನು ಪ್ರಜ್ವಲ್‌ ರೇವಣ್ಣ ಪ್ರಕರಣದ ವಿಚಾರವಾಗಿ ಪೆನ್‌ಡ್ರೈವ್‌ ಬಿಡುಗಡೆ ಮಾಡಿದ್ದು ಪ್ರಜ್ವಲ್‌ ಮಾಜಿ ಕಾರು ಡ್ರೈವರ್‌ ಕಾರ್ತಿಕ್‌ ಎಂಬ ಆರೋಪ ಕೇಳಿಬಂದಿದ್ದು, ಸದ್ಯ ಆತ ತಲೆಮರೆಸಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ. ಈ ಕುರಿತು ಮಾತನಾಡಿದ ಹೆಚ್‌ಡಿಕೆ ಪ್ರಜ್ವಲ್‌ ಕಾರು ಡ್ರೈವರ್‌ ಆಗಿದ್ದ ಕಾರ್ತಿಕ್‌ನನ್ನು ಮಲೇಷ್ಯಾಗೆ ಕಳುಹಿಸದ್ಯಾರು? ಆತ ವಿಡಿಯೊ ಬಿಡುಗಡೆ ಮಾಡಿದ್ದಾನಲ್ವಾ? ಆ ವಿಡಿಯೊ ಬಿಡುಗಡೆ ಮಾಡಿಸಿದ್ಯಾರು? ಆತ ದೇವರಾಜೇಗೌಡ ಕೈನಲ್ಲಿ ಪೆನ್‌ಡ್ರೈವ್‌ ಕೊಟ್ಟೆ ಎಂದು ಹೇಳಿದ್ದ. ಆದರೆ ಈಗ ಚಿಲ್ಲರೆ ಸಹೋದರರು ಕುಮಾರಸ್ವಾಮಿಯೇ ಬಿಟ್ಟಿರಬೇಕು ಎಂದು ಹೇಳುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದರು.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

5 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

9 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

9 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

9 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

9 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

9 hours ago