ರಾಜ್ಯ

ನಾನು ಮೆರಿಟ್ ವಿದ್ಯಾರ್ಥಿ, ಕನಿಷ್ಠ ಶಿಕ್ಷೆ ಕೊಡಿ : ಕೋರ್ಟ್ ಹಾಲ್ ನಲ್ಲಿ ಕಣ್ಣೀರು ಹಾಕುತ್ತಾ ಬೇಡಿಕೊಂಡಿದ್ದ ಪ್ರಜ್ವಲ್

ಬೆಂಗಳೂರು : ಅತ್ಯಾಚಾರ ಪ್ರಕರಣ ಮತ್ತು ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ದೋಷಿಯಾಗಿರುವ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಕೋರ್ಟ್ ಹಾಲ್ ನಲ್ಲಿ ಕಣ್ಣೀರು ಹಾಕುತ್ತಾ ಬೇಡಿಕೊಂಡ ಘಟನೆ ನಡೆಯಿತು.

ವಿಚಾರಣೆ ವೇಳೆ ನ್ಯಾಯಾಧೀಶರು ಪ್ರಜ್ವಲ್ ರೇವಣ್ಣ ಅವರನ್ನು ಕೆಲ ಪ್ರಶ್ನೆಗಳನ್ನು ಕೇಳಿದ್ದು, ಈ ವೇಳೆ ಬಿಕ್ಕಿ ಬಿಕ್ಕಿ ಅಳುತ್ತಲೇ ಪ್ರಜ್ವಲ್ ರೇವಣ್ಣ ಉತ್ತರಿಸಿದರು. ‘ನಾನು ಹಲವು ಮಹಿಳೆಯರೊಂದಿಗೆ ಇಂತಹ ಕೃತ್ಯ ನಡೆಸಿದ್ದೇನೆ ಎಂದು ಆರೋಪಿಸಿದ್ದಾರೆ. ನಾನು ಸಂಸದನಾಗಿದ್ದ ವೇಳೆ ಯಾರೂ ಇಂತಹ ಆರೋಪ ಮಾಡಿರಲಿಲ್ಲ. ನಾನು ರೇಪ್ ಮಾಡಿದ್ದರೆ ಅವರು ಯಾರಿಗೂ ಏಕೆ ಹೇಳಿರಲಿಲ್ಲ? ಚುನಾವಣೆ ಸಮಯದಲ್ಲಿಯೇ ಅವರು ಯಾಕೆ ಹಾಗೆ ಮಾಡಿದ್ದಾರೆ? ಪೊಲೀಸರೇ ಈ ಕೆಲಸ ಮಾಡಿದ್ದಾರೆ. ಚುನಾವಣೆ ವೇಳೆ ಈ ರೀತಿ ಮಾಡಿದ್ದಾರೆ. ನ್ಯಾಯಾಲಯ ಏನೇ ತೀರ್ಮಾನ ಕೈಗೊಂಡರೂ ಅದನ್ನು ಒಪ್ಪಿಕೊಳ್ಳುತ್ತೇನೆ” ಎಂದರು.

ಆರಂಭದಲ್ಲಿ ಇಂಗ್ಲಿಷ್‌ನಲ್ಲಿಯೇ ಮಾತು ಆರಂಭಿಸಿದ ಪ್ರಜ್ವಲ್ ರೇವಣ್ಣ, ನಂತರ ಕಣ್ಣೀರಿಡುತ್ತಾ ಕನ್ನಡದಲ್ಲಿ ಮಾತು ಮುಂದುವರಿಸಿದರು. ನಾನು ಮೆಕ್ಯಾನಿಕಲ್ ಇಂಜಿನಿಯರಿಂಗ್ ಓದಿದ್ದೇನೆ. ಬೇಕಿದ್ದರೆ ನನ್ನ ಹಿನ್ನಲೆ ನೋಡಿ.. ಕಳೆದ ೬ ತಿಂಗಳುಗಳಿಂದ ತಂದೆ ತಾಯಿಯನ್ನು ನೋಡಿಲ್ಲ. ದಯಮಾಡಿ ನನಗೆ ಕನಿಷ್ಠ ಶಿಕ್ಷೆ ಕೊಡಿ ಎಂದು ಗದ್ಘತಿತರಾದರು.

ಅಂತಿಮವಾಗಿ ಕೋರ್ಟ್‌ ಪ್ರಜ್ವಲ್‌ಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಜೊತೆಗೆ ಒಟ್ಟು 11.35 ಲಕ್ಷ ರೂ ದಂಡ ವಿಧಿಸಿ ಆದೇಶಿಸಿದೆ. ಐಪಿಸಿ ಸೆಕ್ಷನ್ 376(2)(ಕ) ಅಡಿ ಜೀವಾವಧಿ ಶಿಕ್ಷೆ ಪ್ರಕಟಿಸಲಾಗಿದೆ. ದಂಡದ ಹಣದಲ್ಲಿ ಸಂತ್ರಸ್ತೆಗೆ 11 ಲಕ್ಷ ರೂ ನೀಡಬೇಕು ಎಂದು ಆದೇಶಿಸಿದ್ದಾರೆ. ಇಂದಿನಿಂದಲೇ ಪ್ರಜ್ವಲ್ ರೇವಣ್ಣಗೆ ಶಿಕ್ಷೆ ಆರಂಭವಾಗಲಿದೆ.

‘ಅತ್ಯಾಚಾರ ಸಂತ್ರಸ್ತೆಯ ದಿಟ್ಟ ನಡೆ’
ಅತ್ಯಾಚಾರ ಸಂತ್ರಸ್ತೆಯ ದಿಟ್ಟ ನಡೆಯೇ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲಿದ್ದ ಆರೋಪ ಸಾಬೀತಾಗಲು ಪ್ರಮುಖ ಕಾರಣ ಎಂದು ಪ್ರಕರಣದ ವಿಶೇಷ ತನಿಖಾ ತಂಡದ (ಎಸ್‌ಐಟಿ) ಅಧಿಕಾರಿಯೊಬ್ಬರು ಹೇಳಿದ್ದಾರೆ.
ಅತ್ಯಾಚಾರ ಆರೋಪವಾದ ಕಾರಣ ಪ್ರಕರಣವನ್ನು ಸೂಕ್ಷ ವಾಗಿ ನಿರ್ವಹಿಸಬೇಕಿತ್ತು. ತಂಡವು ಆರೋಪಿಯನ್ನು ಹುಡುಕುವ ವೇಳೆಗಾಗಲೇ ಆತನೇ ನಮ್ಮ ಬಲೆಗೆ ಬಿದ್ದ. ಅಲ್ಲಿಂದ ಪ್ರಕರಣ ತಿರುವು ಪಡೆದುಕೊಂಡಿತು. ಸತತವಾಗಿ ಏಳು ತಿಂಗಳು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಿ ೧೮೦ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆವು ಎಂದು ತಿಳಿಸಿದರು.

‘ತನಿಖೆಯ ವೇಳೆ ಸಂತ್ರಸ್ತೆಯು ಉತ್ತಮವಾಗಿ ಸಹಕರಿಸಿದ್ದಾರೆ. ಆಕೆ ಮಾಡಿರುವ ಆರೋಪಗಳಿಗೆ ಸ್ಪಷ್ಟನೆ ಕೇಳಲಾಗಿತ್ತು. ಪ್ರಕರಣದ ತನಿಖೆ ಮುಗಿಯುವವರೆಗೂ ಆಕೆ ತೋರಿದ ದಿಟ್ಟತನ ಮಾದರಿ’ ಎಂದರು.

ಪ್ರಕರಣದ ತನಿಖೆಗಾಗಿ ಎಡಿಜಿಪಿ ಬಿ.ಕೆ.ಸಿಂಗ್ ನೇತೃತ್ವದಲ್ಲಿ ಎಸ್‌ಪಿಗಳಾಗಿದ್ದ ಸೀಮಾ ಲಾಟ್ಕರ್ ಹಾಗೂ ಸುಮನ್ ಅವರು ಎಸ್‌ಐಟಿ ತಂಡ ಮುನ್ನಡೆಸಿದ್ದರು. ಅವರೊಂದಿಗೆ ೨೬ ಅಧಿಕಾರಿಗಳು ಇದ್ದರು.

ಆಂದೋಲನ ಡೆಸ್ಕ್

Recent Posts

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

7 mins ago

ಕಿಚ್ಚ ಸುದೀಪ್‌ ಮಾರ್ಕ್‌ ಟ್ರೈಲರ್‌ ಅದ್ಧೂರಿ ಬಿಡುಗಡೆ

ಬೆಂಗಳೂರು: ನಟ ಕಿಚ್ಚ ಸುದೀಪ್‌ ಅಭಿನಯದ ಮಾರ್ಕ್‌ ಸಿನಿಮಾ ಟ್ರೈಲರ್‌ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್‌ ಕಾರ್ತಿಕೇಯ-ಸುದೀಪ್‌ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ…

21 mins ago

ಉಡುಪಿಯಲ್ಲಿ ಆಂಧ್ರ ಡಿಸಿಎಂ ಪವನ್‌ ಕಲ್ಯಾಣ್:‌ ಶ್ರೀಕೃಷ್ಣ ಮಠದ ಗೀತೋತ್ಸವದಲ್ಲಿ ಭಾಗಿ

ಉಡುಪಿ: ಆಂಧ್ರಪ್ರದೇಶದ ಡಿಸಿಎಂ ಪವನ್‌ ಕಲ್ಯಾಣ್‌ ಉಡುಪಿಗೆ ಆಗಮಿಸಿದ್ದು, ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಇಂದು…

36 mins ago

ಮಲೆನಾಡಿನಲ್ಲಿ ಮುಂದುವರಿದ ಕಾಫಿ ಕಳವು ಪ್ರಕರಣ

ಹಾಸನ: ಕಾಫಿ ಬೆಳೆಗೆ ಉತ್ತಮ ಬೆಲೆ ಬಂದಿರುವ ಪರಿಣಾಮ ಮಲೆನಾಡು ಭಾಗದಲ್ಲಿ ಕಾಫಿ ಕಳವು ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.…

52 mins ago

ಮದುವೆ ರದ್ದು: ಮೌನಮುರಿದ ಸ್ಮೃತಿ ಮಂದಾನ

ಮುಂಬೈ: ಭಾರತ ಮಹಿಳಾ ಕ್ರಿಕೆಟ್‌ ತಂಡದ ಉಪನಾಯಕಿ ಸ್ಮೃತಿ ಮಂದಾನ ಹಾಗೂ ಸಂಗೀತ ಸಂಯೋಜಕ ಪಲಾಶ್‌ ಮುಚ್ಚಲ್‌ ಮದುವೆ ಮುಂದೂಡಿಕೆಯಾಗಿತ್ತು.…

1 hour ago

ಅರಣ್ಯ ಕಾಯುವುದಕ್ಕೆ ರೆಡಿ ಆಯ್ತು ಬೆಲ್ಜಿಯಂ ಶ್ವಾನ

ಗುಂಡ್ಲುಪೇಟೆ: ಬಂಡೀಪುರ ರಾಜ್ಯದಲ್ಲೇ ಅತಿ ಹೆಚ್ಚು ಹುಲಿ, ಚಿರತೆ ಹಾಗೂ ಆನೆಗಳಿರುವ ತಾಣ. ಈ ಅರಣ್ಯದಲ್ಲಿ ದೇಶದಲ್ಲೇ ಮೊದಲ ಟ್ರ್ಯಾಕರ್…

2 hours ago