ರಾಜ್ಯ

ನಾನು ಮೆರಿಟ್ ವಿದ್ಯಾರ್ಥಿ, ಕನಿಷ್ಠ ಶಿಕ್ಷೆ ಕೊಡಿ : ಕೋರ್ಟ್ ಹಾಲ್ ನಲ್ಲಿ ಕಣ್ಣೀರು ಹಾಕುತ್ತಾ ಬೇಡಿಕೊಂಡಿದ್ದ ಪ್ರಜ್ವಲ್

ಬೆಂಗಳೂರು : ಅತ್ಯಾಚಾರ ಪ್ರಕರಣ ಮತ್ತು ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ದೋಷಿಯಾಗಿರುವ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಕೋರ್ಟ್ ಹಾಲ್ ನಲ್ಲಿ ಕಣ್ಣೀರು ಹಾಕುತ್ತಾ ಬೇಡಿಕೊಂಡ ಘಟನೆ ನಡೆಯಿತು.

ವಿಚಾರಣೆ ವೇಳೆ ನ್ಯಾಯಾಧೀಶರು ಪ್ರಜ್ವಲ್ ರೇವಣ್ಣ ಅವರನ್ನು ಕೆಲ ಪ್ರಶ್ನೆಗಳನ್ನು ಕೇಳಿದ್ದು, ಈ ವೇಳೆ ಬಿಕ್ಕಿ ಬಿಕ್ಕಿ ಅಳುತ್ತಲೇ ಪ್ರಜ್ವಲ್ ರೇವಣ್ಣ ಉತ್ತರಿಸಿದರು. ‘ನಾನು ಹಲವು ಮಹಿಳೆಯರೊಂದಿಗೆ ಇಂತಹ ಕೃತ್ಯ ನಡೆಸಿದ್ದೇನೆ ಎಂದು ಆರೋಪಿಸಿದ್ದಾರೆ. ನಾನು ಸಂಸದನಾಗಿದ್ದ ವೇಳೆ ಯಾರೂ ಇಂತಹ ಆರೋಪ ಮಾಡಿರಲಿಲ್ಲ. ನಾನು ರೇಪ್ ಮಾಡಿದ್ದರೆ ಅವರು ಯಾರಿಗೂ ಏಕೆ ಹೇಳಿರಲಿಲ್ಲ? ಚುನಾವಣೆ ಸಮಯದಲ್ಲಿಯೇ ಅವರು ಯಾಕೆ ಹಾಗೆ ಮಾಡಿದ್ದಾರೆ? ಪೊಲೀಸರೇ ಈ ಕೆಲಸ ಮಾಡಿದ್ದಾರೆ. ಚುನಾವಣೆ ವೇಳೆ ಈ ರೀತಿ ಮಾಡಿದ್ದಾರೆ. ನ್ಯಾಯಾಲಯ ಏನೇ ತೀರ್ಮಾನ ಕೈಗೊಂಡರೂ ಅದನ್ನು ಒಪ್ಪಿಕೊಳ್ಳುತ್ತೇನೆ” ಎಂದರು.

ಆರಂಭದಲ್ಲಿ ಇಂಗ್ಲಿಷ್‌ನಲ್ಲಿಯೇ ಮಾತು ಆರಂಭಿಸಿದ ಪ್ರಜ್ವಲ್ ರೇವಣ್ಣ, ನಂತರ ಕಣ್ಣೀರಿಡುತ್ತಾ ಕನ್ನಡದಲ್ಲಿ ಮಾತು ಮುಂದುವರಿಸಿದರು. ನಾನು ಮೆಕ್ಯಾನಿಕಲ್ ಇಂಜಿನಿಯರಿಂಗ್ ಓದಿದ್ದೇನೆ. ಬೇಕಿದ್ದರೆ ನನ್ನ ಹಿನ್ನಲೆ ನೋಡಿ.. ಕಳೆದ ೬ ತಿಂಗಳುಗಳಿಂದ ತಂದೆ ತಾಯಿಯನ್ನು ನೋಡಿಲ್ಲ. ದಯಮಾಡಿ ನನಗೆ ಕನಿಷ್ಠ ಶಿಕ್ಷೆ ಕೊಡಿ ಎಂದು ಗದ್ಘತಿತರಾದರು.

ಅಂತಿಮವಾಗಿ ಕೋರ್ಟ್‌ ಪ್ರಜ್ವಲ್‌ಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಜೊತೆಗೆ ಒಟ್ಟು 11.35 ಲಕ್ಷ ರೂ ದಂಡ ವಿಧಿಸಿ ಆದೇಶಿಸಿದೆ. ಐಪಿಸಿ ಸೆಕ್ಷನ್ 376(2)(ಕ) ಅಡಿ ಜೀವಾವಧಿ ಶಿಕ್ಷೆ ಪ್ರಕಟಿಸಲಾಗಿದೆ. ದಂಡದ ಹಣದಲ್ಲಿ ಸಂತ್ರಸ್ತೆಗೆ 11 ಲಕ್ಷ ರೂ ನೀಡಬೇಕು ಎಂದು ಆದೇಶಿಸಿದ್ದಾರೆ. ಇಂದಿನಿಂದಲೇ ಪ್ರಜ್ವಲ್ ರೇವಣ್ಣಗೆ ಶಿಕ್ಷೆ ಆರಂಭವಾಗಲಿದೆ.

‘ಅತ್ಯಾಚಾರ ಸಂತ್ರಸ್ತೆಯ ದಿಟ್ಟ ನಡೆ’
ಅತ್ಯಾಚಾರ ಸಂತ್ರಸ್ತೆಯ ದಿಟ್ಟ ನಡೆಯೇ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲಿದ್ದ ಆರೋಪ ಸಾಬೀತಾಗಲು ಪ್ರಮುಖ ಕಾರಣ ಎಂದು ಪ್ರಕರಣದ ವಿಶೇಷ ತನಿಖಾ ತಂಡದ (ಎಸ್‌ಐಟಿ) ಅಧಿಕಾರಿಯೊಬ್ಬರು ಹೇಳಿದ್ದಾರೆ.
ಅತ್ಯಾಚಾರ ಆರೋಪವಾದ ಕಾರಣ ಪ್ರಕರಣವನ್ನು ಸೂಕ್ಷ ವಾಗಿ ನಿರ್ವಹಿಸಬೇಕಿತ್ತು. ತಂಡವು ಆರೋಪಿಯನ್ನು ಹುಡುಕುವ ವೇಳೆಗಾಗಲೇ ಆತನೇ ನಮ್ಮ ಬಲೆಗೆ ಬಿದ್ದ. ಅಲ್ಲಿಂದ ಪ್ರಕರಣ ತಿರುವು ಪಡೆದುಕೊಂಡಿತು. ಸತತವಾಗಿ ಏಳು ತಿಂಗಳು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಿ ೧೮೦ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆವು ಎಂದು ತಿಳಿಸಿದರು.

‘ತನಿಖೆಯ ವೇಳೆ ಸಂತ್ರಸ್ತೆಯು ಉತ್ತಮವಾಗಿ ಸಹಕರಿಸಿದ್ದಾರೆ. ಆಕೆ ಮಾಡಿರುವ ಆರೋಪಗಳಿಗೆ ಸ್ಪಷ್ಟನೆ ಕೇಳಲಾಗಿತ್ತು. ಪ್ರಕರಣದ ತನಿಖೆ ಮುಗಿಯುವವರೆಗೂ ಆಕೆ ತೋರಿದ ದಿಟ್ಟತನ ಮಾದರಿ’ ಎಂದರು.

ಪ್ರಕರಣದ ತನಿಖೆಗಾಗಿ ಎಡಿಜಿಪಿ ಬಿ.ಕೆ.ಸಿಂಗ್ ನೇತೃತ್ವದಲ್ಲಿ ಎಸ್‌ಪಿಗಳಾಗಿದ್ದ ಸೀಮಾ ಲಾಟ್ಕರ್ ಹಾಗೂ ಸುಮನ್ ಅವರು ಎಸ್‌ಐಟಿ ತಂಡ ಮುನ್ನಡೆಸಿದ್ದರು. ಅವರೊಂದಿಗೆ ೨೬ ಅಧಿಕಾರಿಗಳು ಇದ್ದರು.

ಆಂದೋಲನ ಡೆಸ್ಕ್

Recent Posts

ಮಾವು ಬೆಳೆಗಾರರ ನೆರವಿಗೆ ಬಂದ ಕೇಂದ್ರ ಸರ್ಕಾರ: ತೋತಾಪುರಿಯ ಒಂದು ಕ್ವಿಂಟಲ್‌ಗೆ ₹1,750 ನಿಗದಿ

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…

23 mins ago

ಪ್ರಕೃತಿ ವಿಕೋಪ ನಿರ್ವಹಣೆ: ಜಿಲ್ಲೆಗಳ ಮೇಲುಸ್ತುವಾರಿಗೆ ಸಚಿವರ ನೇಮಕ

ಬೆಂಗಳೂರು: ರಾಜ್ಯದಲ್ಲಿ ಪ್ರಕೃತಿ ವಿಕೋಪ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ನಡೆಸುವ ಉದ್ದೇಶದಿಂದ ಸಚಿವರಿಗೆ ವಿವಿಧ ಜಿಲ್ಲೆಗಳ ಮೇಲುಸ್ತುವಾರಿಯನ್ನು ಹಂಚಿಕೆ ಮಾಡಿ ಅಧಿಸೂಚನೆ…

1 hour ago

ವೆನಿಜುವೆಲಾ ದೇಶದಲ್ಲಿ ಕಂಡು ಕೇಳರಿಯದ ಭೀಕರ ಭೂಕಂಪ

ವೆನಿಜುವೆಲಾ: ವೆನಿಜುವೆಲಾ ದೇಶದ ಇತಿಹಾಸದಲ್ಲೇ ಕಂಡು ಕೇಳರಿಯದ ಭೀಕರ ಭೂಕಂಪ ಸಂಭವಿಸಿ ಸಾವಿರಾರು ಜನ ಸಾವನ್ನಪ್ಪಿದ್ದು, ಭಾರೀ ಪ್ರಮಾಣದ ಜನರು…

2 hours ago

ವೆನೆಜುವೆಲಾದಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ ತುರ್ತು ಪರಿಸ್ಥಿತಿ ಘೋಷಣೆ

ಕ್ಯಾರಕಾಸ್‌ : ವೆನೆಜುವೆಲಾ ಕರಾವಳಿಯ ಸಮೀಪ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳು ದೇಶವನ್ನು ಬೆಚ್ಚಿಬೀಳಿಸಿವೆ. ರಿಕ್ಟರ್ ಮಾಪಕದಲ್ಲಿ…

5 hours ago

ಸಮ ಸಮಾಜದ ಕನಸು ಕಂಡಿದ್ದ ಹೋರಾಟಗಾರ ಜವರಪ್ಪಗೌಡ

ಪ್ರೊ.ಬಿ.ಜಯಪ್ರಕಾಶ್‌ಗೌಡ ಬದುಕಿದ್ದರೆ ೧೦೯ ವರ್ಷಗಳನ್ನು ಪೂರೈಸುತ್ತಿದ್ದ ಸ್ವಾತಂತ್ರ್ಯ ಹೋರಾಟಗಾರ ಪಿ. ಎನ್. ಜವರಪ್ಪಗೌಡರು ನಮಗೆಲ್ಲರಿಗೂ ಮಾರ್ಗದರ್ಶಕರಾಗಿದ್ದವರು. ಜವರಪ್ಪಗೌಡರು ಗಾಂಧೀಜಿಯಿಂದ ಪ್ರಭಾವಿತರಾಗಿದ್ದರು.…

5 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 25  ಗುರುವಾರ  

7 hours ago