ರಾಜ್ಯ

ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣ : ಎಸ್‌ಐಟಿ ತಂಡಕ್ಕೆ ಸಿಎಂ ಪದಕ

ಬೆಂಗಳೂರು : ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಮೇಲಿನ ಅತ್ಯಾಚಾರ ಆರೋಪ ಕುರಿತು ತನಿಖೆ ನಡೆಸಿ ಶಿಕ್ಷೆ ಕೊಡಿಸುವಲ್ಲಿ ಯಸಸ್ವಿಯಾದ ಎಸ್‌ಐಟಿ ತಂಡಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಭಿನಂದನೆ ಸಲ್ಲಿಸಿದ್ದಾರೆ.

ಈ ಸಂಬಂಧ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಪೊಲೀಸರ ಶ್ರಮಕ್ಕೆ ಸರ್ಕಾರ ಪ್ರಶಂಸೆ ಮಾಡುತ್ತೆ. ತನಿಖೆ ನಡೆಸಿದ ವಿಶೇಷ ತನಿಖಾ ತಂಡಕ್ಕೆ ಸಿಎಂ ಪದಕ ನೀಡುತ್ತೇವೆ. ರಾಷ್ಟ್ರಪತಿ ಪದಕಕ್ಕೂ ಶಿಫಾರಸು ಮಾಡ್ತೇವೆ ಎಂದು ಸ್ಪಷ್ಟಪಡಿಸಿದರು.

ಕೆ.ಆರ್ ನಗರದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದಾರೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಈ ಮಹತ್ವದ ತೀರ್ಪು ನೀಡಿದೆ.
ಪೊಲೀಸರು ಮೊದಲಿಂದಲೂ ಅಚ್ಚುಕಟ್ಟಾಗಿ ತನಿಖೆ ಮಾಡಿದ್ದಾರೆ. ಮೊದಲು ಎಸ್‌ಐಟಿಗೆ ಅಭಿನಂದನೆ ಹೇಳುತ್ತೇನೆ. ಇದು ಐತಿಹಾಸಿಕ ತೀರ್ಪು. ನ್ಯಾಯಾಲಯಕ್ಕೆ ನಮ್ಮ ಎಸ್‌ಐಟಿ ಎಲ್ಲಾ ದಾಖಲೆಯನ್ನು ಕೊಟ್ಟಿತ್ತು ಪೊಲೀಸರು ಬೇಗ ತನಿಖೆ ಮುಗಿಸಿದ್ದಾರೆ. ಪ್ರಜ್ವಲ್ ರೇವಣ್ಣ ಪ್ರಕರಣವನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು ಎಂದರು.

ಆಂದೋಲನ ಡೆಸ್ಕ್

Recent Posts

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

6 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

6 hours ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

7 hours ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

8 hours ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

9 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

9 hours ago