ರಾಜ್ಯ

ಮಹಿಳೆ ಮೇಲೆ ಪ್ರಜ್ವಲ್‌ ರೇವಣ್ಣ ಅತ್ಯಾಚಾರ ಕೇಸ್:‌ ಮಧ್ಯಾಹ್ನ 2.45ಕ್ಕೆ ಶಿಕ್ಷೆ ಪ್ರಮಾಣ ಪ್ರಕಟ

ಬೆಂಗಳೂರು: ದೇಶವನ್ನೇ ಬೆಚ್ಚಿ ಬೀಳಿಸಿದ್ದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧ ಸಾಬೀತಾಗಿದ್ದು, ಇಂದು ಮಧ್ಯಾಹ್ನ 2.45ಕ್ಕೆ ಶಿಕ್ಷೆ ಪ್ರಮಾಣವನ್ನು ಕೋರ್ಟ್‌ ಪ್ರಕಟಿಸಲಿದೆ.

ಸಂತ್ರಸ್ತೆಯನ್ನು ಬ್ಲ್ಯಾಕ್‌ಮೇಲ್‌ ಮಾಡಿ ಅತ್ಯಾಚಾರ ಮಾಡಲಾಗಿದೆ. ಆತ ಒಬ್ಬ ಸಂಸದನಾಗಿ ಇಂತಹ ನೀಚ ಕೃತ್ಯ ಎಸಗಿದ್ದಾನೆ. ಮನೆಕೆಲಸದವಳ ಮೇಲೆ ಅತ್ಯಾಚಾರ ಎಸಗಿ ಬ್ಲ್ಯಾಕ್‌ ಮೇಲೆ ಮಾಡಿದ್ದಾನೆ. ಆತನಿಗೆ ನೀಡುವ ಶಿಕ್ಷೆ ಬೇರೆಯವರಿಗೆ ಎಚ್ಚರಿಕೆಯ ಸಂದೇಶವಾಗಬೇಕು ಎಂದು ಪ್ರಾಸಿಕ್ಯೂಟರ್‌ ಪರ ಎಸ್‌ಪಿಪಿ ಬಿ.ಎನ್.ಜಗದೀಶ್‌ ವಾದ ಮಂಡಿಸಿದರು.

ಇನ್ನು ಪ್ರಜ್ವಲ್‌ ರೇವಣ್ಣ ವಯಸ್ಸು ಕೇವಲ 34 ವರ್ಷ. ಆತನ ತಾತ ಮಾಜಿ ಪ್ರಧಾನಿ, ಇಷ್ಟು ದಿನದ ಆತನ ರಾಜಕೀಯ ಸ್ಥಾನಮಾನ ಹಾಳು ಮಾಡಬಾರದು. ಅದು ಚುನಾವಣೆ ವೇಳೆ ಆತನ ವಿಡಿಯೋ ಹರಿಬಿಡಲಾಗಿದೆ. ರಾಜಕೀಯ ಭವಿಷ್ಯ ಹಾಳು ಮಾಡುವ ಉದ್ದೇಶದಿಂದಲೇ ವಿಡಿಯೋ ಹರಿಬಿಡಲಾಗಿದೆ. ಶಿಕ್ಷೆ ಪ್ರಮಾಣ ಕಡಿಮೆ ಮಾಡಿ ಆದೇಶ ಹೊರಡಿಸಬೇಕು. ಸಂತ್ರಸ್ತೆಗಿಂತ ಅಪರಾಧಿಗೆ ಹೆಚ್ಚು ಹಾನಿಯಾಗಿದೆ ಎಂದು ಪ್ರಜ್ವಲ್‌ ಪರ ಹಿರಿಯ ವಕೀಲೆ ನಳಿನಾ ಮಾಯಗೌಡ ವಾದ ಮಂಡಿಸಿದರು.

ಇನ್ನು ನ್ಯಾಯಾಲಯದ ಪ್ರಶ್ನೆಗೆ ಉತ್ತರಿಸಿದ ಪ್ರಜ್ವಲ್‌ ರೇವಣ್ಣ, ನಾನು ಹಲವು ಮಹಿಳೆಯರೊಂದಿಗೆ ಇಂತಹ ಕೃತ್ಯ ನಡೆಸಿದ್ದೇನೆ ಎಂದು ಆರೋಪಿಸಿದ್ದಾರೆ. ನಾನು ಸಂಸದನಾಗಿದ್ದ ವೇಳೆ ಯಾರೂ ಇಂತಹ ಆರೋಪ ಮಾಡಿರಲಿಲ್ಲ. ಚುನಾವಣೆ ಸಮಯದಲ್ಲೇ ಅವರು ಈ ವಿಡಿಯೋ ಹರಿಬಿಟ್ಟಿದ್ದಾರೆ. ನ್ಯಾಯಾಲಯ ಏನೇ ತೀರ್ಮಾನ ಕೈಗೊಂಡರೂ ಅದನ್ನು ಒಪ್ಪಿಕೊಳ್ಳುತ್ತೇನೆ. ನಾನು ಮೆಕ್ಯಾನಿಕಲ್‌ ಎಂಜಿನಿಯರಿಂಗ್‌ ಓದಿದ್ದೇನೆ. ಕಳೆದ 6 ತಿಂಗಳುಗಳಿಂದ ತಂದೆ-ತಾಯಿಯನ್ನು ನೋಡಿಲ್ಲ ಎಂದು ಅಳುತ್ತಲೇ ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

15 mins ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

2 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

8 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

14 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

14 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

14 hours ago