ರಾಜ್ಯ

ಪ್ರಜ್ವಲ್‌ ರೇವಣ್ಣಗೆ ಜೀವಾವಧಿ ಶಿಕ್ಷೆ: ಇದೊಂದು ಐತಿಹಾಸಿಕ ತೀರ್ಪು ಎಂದ ಸಚಿವ ಪರಮೇಶ್ವರ್‌

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಜೀವಾವಧಿ ಶಿಕ್ಷೆ ಪ್ರಕಟವಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದು, ಇದೊಂದು ಐತಿಹಾಸಿಕ ತೀರ್ಪು, ಪೊಲೀಸ್‌ ಇಲಾಖೆಗೆ ಕೀರ್ತಿ ಬಂದಂತಾಗಿದೆ ಎಂದು ಹೇಳಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದೊಂದು ಐತಿಹಾಸಿಕ ತೀರ್ಪು, ಪೊಲೀಸ್‌ ಇಲಾಖೆಗೂ ಕೀರ್ತಿ ಬಂದಂತಾಗಿದೆ. ಶೀಘ್ರದಲ್ಲೇ ತನಿಖೆ ನಡೆಸಿ ವಿಚಾರಣೆ ಪೂರ್ಣಗೊಳಿಸಿ ತೀರ್ಪು ಹೊರಬಿದ್ದಿದೆ. ಆದ್ದರಿಂದ ಸಿಐಡಿ ಎಸ್‌ಐಟಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.

ಇನ್ನು ಇಂತಹ ಪ್ರಕರಣಗಳಲ್ಲಿ ವಿಚಾರಣೆ ವರ್ಷಾನುಗಟ್ಟಲೇ ನಡೆಯುತ್ತಲೇ ಇರುತ್ತದೆ. ಆದರೆ ನಮ್ಮ ಪೊಲೀಸರು ಅಚ್ಚುಕಟ್ಟಾಗಿ ಹಾಗೂ ಸಮರ್ಪಕವಾಗಿ ತನಿಖೆ ನಡೆಸಿ ಒಂದು ವರ್ಷ ನಾಲ್ಕು ತಿಂಗಳಲ್ಲಿ ಕೋರ್ಟ್‌ ತೀರ್ಪು ನೀಡುವಂತೆ ಮಾಡಿದ್ದಾರೆ. ನ್ಯಾಯಾಲಯಕ್ಕೆ ಎಸ್‌ಐಟಿ ಎಲ್ಲಾ ದಾಖಲೆಗಳನ್ನು ಸಲ್ಲಿಸಿ, ತನಿಖೆ ವೇಗವಾಗಿ ಮುಗಿಸಿದ್ದಾರೆ. ಹೀಗಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಪ್ರಜ್ವಲ್‌ ರೇವಣ್ಣ ಕೇಸನ್ನು ರಾಜಕೀಯ ದೃಷ್ಟಿಕೋನದಿಂದ ನೋಡಬಾರದು. ಪೊಲೀಸರ ಶ್ರಮಕ್ಕೆ ಸರ್ಕಾರ ಪ್ರಶಂಸೆ ಮಾಡುತ್ತದೆ. ತನಿಖೆ ನಡೆಸಿದ ವಿಶೇಷ ತಂಡಕ್ಕೆ ಸಿಎಂ ಪದಕ ನೀಡಲಾಗುವುದು. ರಾಷ್ಟ್ರಪತಿ ಪದಕಕ್ಕೂ ಶಿಫಾರಸು ಮಾಡುತ್ತೇವೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

9 mins ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

1 hour ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

2 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

6 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026: ಗಜಪಯಣಕ್ಕೆ ವಿದ್ಯುಕ್ತ ಚಾಲನೆ

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…

8 hours ago

ಓದುಗರ ಪತ್ರ: ಕಾವೇರಿ ನದಿ ನೀರಿನ ವಿವಾದಕ್ಕೆ ಮಾತುಕತೆಯೇ ಮದ್ದು

ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…

8 hours ago