ಬೆಂಗಳೂರು: ಹಾಸನ ಅಶ್ಲೀಲ ವಿಡಿಯೋ ಪೆನ್ಡ್ರೈವ್ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯವು ಮಾಜಿ ಸಂಸದ ಪ್ರಜ್ವಲ್ ರೇವಣ್ಣನನ್ನು ಜುಲೈ.8ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.
ಹಾಸನದಲ್ಲಿ ವೈರಲ್ ಆದ ಅಶ್ಲೀಲ ವಿಡಿಯೋ ಹಾಗೂ ಅತ್ಯಾಚಾರ ಆರೋಪದಡಿ ಪ್ರಜ್ವಲ್ ರೇವಣ್ಣ ಜೈಲು ಪಾಲಾಗಿದ್ದಾನೆ. ಅತ್ಯಾಚಾರ ಆರೋಪ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪ್ರಜ್ವಲ್ ನ್ಯಾಯಾಂಗ ಬಂಧನದ ಅವಧಿ ಇಂದಿಗೆ ಅಂತ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಎಸ್ಐಟಿ ಅಧಿಕಾರಿಗಳು ಇಂದು ಆರೋಪಿ ಪ್ರಜ್ವಲ್ನನ್ನು ಕೋರ್ಟ್ಗೆ ಹಾಜರುಪಡಿಸಿದ್ದರು.
ಕೋರ್ಟ್ನಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣನಿಗೆ ಜಡ್ಜ್ ಅನೇಕ ಪ್ರಶ್ನೆಗಳನ್ನು ಕೇಳಿದ್ದಾರೆ. ನಿಮಗೆ ಮೆಡಿಸನ್ ಕೊಡ್ತಿದ್ದಾರಾ ಎಂಬ ಜಡ್ಜ್ ಪ್ರಶ್ನೆಗೆ ಪ್ರಜ್ವಲ್ ಹೌದು ಮೆಡಿಸನ್ ಕೊಡ್ತಿದ್ದಾರೆ ಎಂದು ಉತ್ತರ ನೀಡಿದ್ದಾನೆ. ಪೊಲೀಸ್ ಕಸ್ಟಡಿಯಲ್ಲಿ ಏನಾದರೂ ತೊಂದರೆ ಆಯ್ತಾ ಎಂಬ ಪ್ರಶ್ನೆಗೆ ಪ್ರಜ್ವಲ್ ಇಲ್ಲಾ ನನಗೆ ಯಾವುದೇ ತೊಂದರೆಯಿಲ್ಲ ಎಂದು ಉತ್ತರ ಕೊಟ್ಟಿದ್ದಾನೆ.
ಬಳಿಕ ಜಡ್ಜ್ ಪೊಲೀಸರ ಬಳಿ ಪ್ರಜ್ವಲ್ ಮೆಡಿಕಲ್ ಟೆಸ್ಟ್ನ ವರದಿ ಕೇಳಿದ್ದಾರೆ. ಎಲ್ಲಾ ವರದಿಗಳನ್ನು ನೋಡಿದ ಪೊಲೀಸರು, ಮತ್ತೆ ಪ್ರಜ್ವಲ್ ರೇವಣ್ಣನನ್ನು ಜುಲೈ.8ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದ್ದಾರೆ.
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್ಎಸ್ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…
ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…
ಹೇಮಂತ್ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…