ರಾಜ್ಯ

ಲೈಂಗಿಕ ಪ್ರಕರಣ : ಪ್ರಜ್ವಲ್‌ ಬಂಧನಕ್ಕೆ ಒಂದು ವರ್ಷ!

ಬೆಂಗಳೂರು : ದೇಶದ್ಯಾಂತ ಭಾರೀ ಸಂಚಲನ ಸೃಷ್ಟಿಸಿದ್ದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಮೊಮ್ಮಗ ಹಾಗೂ ಮಾಜಿ ಸಚಿವ ಹೆಚ್.ಡಿ ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ಆತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಆರೋಪದಡಿ ಜೈಲು ಪಾಲಾಗಿ ಇಂದಿಗೆ ಸರಿಯಾಗಿ ಒಂದು ವರ್ಷ!

ಸದ್ಯ ಪರಪ್ಪನ ಆಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಅಂದಿನಿಂದ ಇಂದಿನವರೆಗೂ ಜಾಮೀನು ಪಡೆಯಲು ಹೈಕೋರ್ಟ್ ನಿಂದ ಸುಪ್ರೀಂಕೋರ್ಟ್ ನವರೆಗೂ ಜಾಮೀನು ಪಡೆಯಲು ನಡೆಸಿದ ಎಲ್ಲಾ ಪ್ರಯತ್ನಗಳು ವಿಫಲವಾಗಿವೆ.

ಪರಪ್ಪನ ಆಗ್ರಹಾರದ ಜೈಲೇ ಸದ್ಯಕ್ಕೆ ಖಾಯಂ ನಿವಾಸವಾಗಿದ್ದು, ಬಂಧಿತ ಆರೋಪಿಗೆ ಯಾವುದೇ ರೀತಿಯ ವಿಶೇಷ ಸವಲತ್ತುಗಳು ನೀಡುತ್ತಿಲ್ಲ. ಸಾಮಾನ್ಯ ಖೈದಿಯೊಬ್ಬನಿಗೆ ನೀಡಲಾಗುವ ಸೌಲಭ್ಯಗಳನ್ನು ಮಾತ್ರ ಜೈಲುಧಿಕಾರಿಗಳು ನೀಡುತ್ತಾರೆ.

2024 ಮೇ 30 ರಂದು ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ’ ಆರೋಪದಡಿ ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ನಗರದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ತಡರಾತ್ರಿ ಬಂಧಿಸಿದ್ದರು.

2024 ರ ಲೋಕಸಭಾ ಚುನಾವಣೆಯ ಮತದಾನದ ನಂತರ ದೇಶದಿಂದ ಪರಾರಿಯಾಗಿದ್ದ ಪ್ರಜ್ವಲ್, 35 ದಿನಗಳ ಬಳಿಕ ಜರ್ಮನಿಯಿಂದ ನಗರದ ವಿಮಾನ ನಿಲ್ದಾಣಕ್ಕೆ ಮೇ 30 ಗುರುವಾರ ತಡರಾತ್ರಿ 12.50 ಗಂಟೆಗೆ ಸುಮಾರಿಗೆ ಬಂದಿಳಿಯುತ್ತಿದ್ದಂತೆ ನಿಲ್ದಾಣದಲ್ಲಿ ಮೊಕ್ಕಾಂ ಹೂಡಿದ್ದ ಎಸ್‌ಐಟಿ ಅಧಿಕಾರಿಗಳು, ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್‌ಎಫ್) ಸಿಬ್ಬಂದಿ ಹಾಗೂ ವಲಸೆ ಅಧಿಕಾರಿಗಳ ಸಹಾಯದಿಂದ ಪ್ರಜ್ವಲ್‌ ನನ್ನು ಬಂಧಿಸಿದ್ದರು.

ಹೊಳೆನರಸೀಪುರ ಟೌನ್ ಹಾಗೂ ಸಿಐಡಿ ಠಾಣೆಗಳಲ್ಲಿ ದಾಖಲಾಗಿದ್ದ ‘ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ’ ಪ್ರಕರಣದ ಪ್ರಮುಖ ಆರೋಪಿ ಪ್ರಜ್ವಲ್, ಬಂಧನ ಭೀತಿಯಲ್ಲಿ ತಲೆಮರೆಸಿ ಕೊಂಡಿದ್ದ. ಇವರ ಬಂಧನಕ್ಕೆ ಬ್ಲೂ ಕಾರ್ನರ್ ನೋಟಿಸ್ ಹಾಗೂ ನ್ಯಾಯಾಲಯದಿಂದ ವಾರಂಟ್ ಜಾರಿಯಾಗಿತ್ತು.

ಪ್ರಕರಣದ ಸಂಬಂಧ ಅಜ್ಞಾತ ಸ್ಥಳದಿಂದ ಇತ್ತೀಚೆಗೆ ವಿಡಿಯೊ ಬಿಡುಗಡೆ ಮಾಡಿದ್ದ ಪ್ರಜ್ವಲ್, ‘ಮೇ 31ರಂದು ಶುಕ್ರವಾರ ಎಸ್‌ಐಟಿ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗುತ್ತೇನೆ’ ಎಂದು ಹೇಳಿದ್ದರು.
‘ಜರ್ಮನಿಯ ಮ್ಯೂನಿಕ್‌ ನಗರದ ನಿಲ್ದಾಣದಿಂದ ವಿಮಾನದಲ್ಲಿ (ಲುಫ್ತಾನ್ಸಾ ಏರ್‌ಲೈನ್ಸ್‌ನ ಎಲ್‌ಎಚ್‌–764) ಗುರುವಾರ ಮಧ್ಯಾಹ್ನ ಬೆಂಗಳೂರಿನತ್ತ ಹೊರಟಿದ್ದರು. ತಡರಾತ್ರಿ 12.50 ಗಂಟೆ ಸುಮಾರಿಗೆ ಬೆಂಗಳೂರಿನ ನಿಲ್ದಾಣದ ಟರ್ಮಿನಲ್‌–2ಕ್ಕೆ ವಿಮಾನ ಬಂದಿಳಿಯಿತು.

ಕೆಲ ನಿಮಿಷಗಳ ನಂತರ ವಿಮಾನದಿಂದ ಇಳಿದ ಪ್ರಜ್ವಲ್ ರೇವಣ್ಣ, ಗೇಟ್‌ ಮೂಲಕ ನಿಲ್ದಾಣದೊಳಗೆ ಪ್ರವೇಶಿಸಿದರು. ಸ್ಥಳದಲ್ಲಿ ಹಾಜರಿದ್ದ ಭದ್ರತಾ ಸಿಬ್ಬಂದಿ ಹಾಗೂ ವಲಸೆ ಅಧಿಕಾರಿಗಳು, ಪ್ರಜ್ವಲ್ ಅವರನ್ನು ವಶಕ್ಕೆ ಪಡೆದು ವಿಶೇಷ ಕೊಠಡಿಗೆ ಕರೆದೊಯ್ದು ಪರಿಶೀಲನೆ ನಡೆಸಿದರು. ಪ್ರಜ್ವಲ್ ಅವರ ಬೆರಳಚ್ಚು ಹಾಗೂ ಫೋಟೊ ಕ್ಲಿಕ್ಕಿಸಿಕೊಂಡು ದಾಖಲಿಸಿಕೊಂಡಿದ್ದರು.

2024ರ ಎಪ್ರಿಲ್‌ನಲ್ಲಿ ನಡೆದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಕರ್ನಾಟಕದ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದ್ದಲ್ಲದೇ, ಈ ಪ್ರಕರಣವು ಕೇವಲ ರಾಜಕೀಯ ವಿವಾದವಾಗಿ ಉಳಿಯದೇ, ಸಾಮಾಜಿಕ, ನೈತಿಕ ಮತ್ತು ಕಾನೂನು ಚರ್ಚೆಗೆ ಕಾರಣವಾಗಿತ್ತು.

ಒಂದು ವರ್ಷದ ನಂತರ, ಸಂತ್ರಸ್ತರ ಸ್ಥಿತಿ, ಕಾನೂನು ಪ್ರಕ್ರಿಯೆಯ ಪ್ರಗತಿ ಮತ್ತು ಸಮಾಜದ ಮೇಲೆ ಬೀರಿದ ಪರಿಣಾಮವನ್ನು ಪರಿಶೀಲಿಸಿದಾಗ ಘಟನೆಯಲ್ಲಿ ನೊಂದವರು ಇನ್ನೂ ತಮ್ಮ ಸಾಮಾನ್ಯ ಜೀವನಕ್ಕೆ ಮರಳಿಲ್ಲ ಎನ್ನಲಾಗುತ್ತಿದೆ.

2024ರ ಎಪ್ರಿಲ್ 22ರಂದು ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದ ಅಶ್ಲೀಲ ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗತೊಡಗಿದವು. ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಈ ವೀಡಿಯೊಗಳಲ್ಲಿ ಕಾಣಿಸಿಕೊಂಡವರು ಇನ್ನೂ ಚೇತರಿಸಿಲ್ಲ ಎಂದು ತಿಳಿದು ಬಂದಿದೆ.

ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಬಿಡುಗಡೆಯಾದ ಅಶ್ಲೀಲ ವೀಡಿಯೊಗಳಿಂದ ಚುನಾವಣೆಯ ಮೇಲೆ ಪ್ರಭಾವ ಬೀರಿತ್ತು. ಇಂದಿಗೂ ಸಹ ಜೆಡಿಎಸ್ ಪಕ್ಷದ ಪ್ರಮುಖ ನಾಯಕರು ಘಟನೆಗಿಂತ ಹೆಚ್ಚಾಗಿ ಅಶ್ಲೀಲ ವೀಡಿಯೊ ಹರಿಬಿಟ್ಟವರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಾರೆ.

ಈ ಘಟನೆಯು ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾದ ನಂತರ, ಕರ್ನಾಟಕ ಸರಕಾರವು ತಕ್ಷಣವೇ ವಿಶೇಷ ತನಿಖಾ ತಂಡ ರಚಿಸಿತು.ಈ ನಡುವೆ ಪ್ರಜ್ವಲ್ ರೇವಣ್ಣ ತಮ್ಮ ರಾಜತಾಂತ್ರಿಕ ಪಾಸ್‌ಪೋರ್ಟ್ ಬಳಸಿ ಜರ್ಮನಿಗೆ ಪರಾರಿಯಾದರು. ಇದು ತನಿಖೆಯನ್ನು ಇನ್ನಷ್ಟು ಸಂಕೀರ್ಣಗೊಳಿಸಿತು. ರಾಜ್ಯ ಸರಕಾರವು ಕೇಂದ್ರ ಸರಕಾರಕ್ಕೆ ಪಾಸ್‌ಪೋರ್ಟ್ ರದ್ದತಿಗೆ ಮನವಿ ಮಾಡಿತು, ಮತ್ತು ಎಸ್‌ಐಟಿ ತಂಡವು ಲುಕ್‌ಔಟ್ ನೋಟಿಸ್ ಜಾರಿಗೊಳಿಸಿತ್ತು.

ಪ್ರಸ್ತುತ, ಪ್ರಜ್ವಲ್ ರೇವಣ್ಣ ವಿರುದ್ಧ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿವೆ. ಮತ್ತು ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಪ್ರಕರಣದಲ್ಲಿ ಪ್ರಜ್ವಲ್‌ನ ತಂದೆ ಎಚ್.ಡಿ. ರೇವಣ್ಣ ಆರೋಪಿಯಾಗಿದ್ದು. ಜಾಮೀನಿನ ಮೇಲೆ ಹೊರಗಿದ್ದಾರೆ.

ಇನ್ನು ವೀಡಿಯೊದಲ್ಲಿ ಕಾಣಿಸಿಕೊಂಡ ಮಹಿಳೆಯರು ಸಂಕಷ್ಟಕ್ಕೀಡಾದರು. ಮಹಿಳೆಯರ ಕುಟುಂಬ ಸಂಬಂಧಗಳು ಹದಗೆಟ್ಟಿತ್ತು. ಮಾನಸಿಕವಾಗಿ ನೊಂದ ಮಹಿಳೆಯರ ಪೈಕಿ ಕೆಲವರು ಆತ್ಮಹತ್ಯೆಗೆ ಯತ್ನಿಸಿದ್ದರೆಂದು ತಿಳಿದು ಬಂದಿದೆ. ಇನ್ನು ಕೆಲವರು ಸಾಮಾಜಿಕ ಬಹಿಷ್ಕಾರಕ್ಕೆ ಒಳಗಾದರೂ ಎಂದು ಹೇಳಲಾಗುತ್ತದೆ.

ಘಟನೆ ನಡೆದು ಒಂದು ವರ್ಷ ಕಳೆದರೂ, ಈ ಪ್ರಕರಣದ ಸಂತ್ರಸ್ತರಿಗೆ ಪೂರ್ಣ ನ್ಯಾಯ ದೊರೆತಿಲ್ಲ. ಎಸ್‌ಐಟಿ ತನಿಖೆಯು ನಿಧಾನಗತಿಯಲ್ಲಿ ಸಾಗುತ್ತಿದ್ದು, ಕಾನೂನು ಪ್ರಕ್ರಿಯೆಯ ವಿಳಂಬವು ಸಂತ್ರಸ್ತರಲ್ಲಿ ನಿರಾಸೆ ಮೂಡಿಸಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಪ್ರಜ್ವಲ್ ರೇವಣ್ಣ ಜೈಲಿನಲ್ಲಿದ್ದರೂ, ಸಂತ್ರಸ್ತ ಮಹಿಳೆಯರು ಭಯದಲ್ಲಿ ಇದ್ದಾರೆ. ಹಾಸನ ಜಿಲ್ಲೆಯನ್ನು ಬಿಟ್ಟು ಬೇರೆ ಪ್ರದೇಶದಲ್ಲಿ ವಾಸವಾಗಿರುವ ಒಂದು ಕುಟುಂಬ ಸ್ವಾತಂತ್ರ್ಯವನ್ನೇ ಕಳೆದುಕೊಂಡಿದೆ ಎಂಬಂತೆ ಜೀವನ ನಡೆಸುತ್ತಿದೆ. ಮಹಿಳಾ ಸುರಕ್ಷತೆಗೆ ಸಂಬಂಧಿಸಿದ ಕಾನೂನುಗಳನ್ನು ಇನ್ನಷ್ಟು ಬಲಪಡಿಸುವ ಅಗತ್ಯವನ್ನು ಈ ಪ್ರಕರಣವು ಪ್ರತಿಪಾದಿಸುತ್ತದೆ.

ಈ ಮಹಿಳೆಯರು ತಮ್ಮ ಮಕ್ಕಳನ್ನೇ ಎದುರಿಸಲಾಗದ ಸ್ಥಿತಿಯಲ್ಲಿದ್ದಾರೆ ಎಂಬ ಮಾತು ನಿಜಕ್ಕೂ ಗಂಭೀರವಾದದ್ದು. ಇವರ ಹೇಳಿಕೆ ಮಹಿಳೆಯರ ಭೀಕರ, ಭಯಾನಕ ಪರಿಸ್ಥಿತಿಯನ್ನು ವಿವರಿಸುತ್ತದೆ. ಸಂತ್ರಸ್ತರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಎಸ್‌ಐಟಿ ತಂಡವು ಕೆಲವು ಮಹಿಳೆಯರ ಹೇಳಿಕೆಗಳನ್ನು ದಾಖಲಿಸಿದೆ.

ಆಂದೋಲನ ಡೆಸ್ಕ್

Recent Posts

ಉಡುಪಿ ಮಲ್ಪೆ ಬಳಿ ದೋಣಿ ಪಲ್ಟಿ: ಮೈಸೂರಿನ ಇಬ್ಬರು ಸಾವು

ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್‌ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…

43 mins ago

ಜೆಡಿಎಸ್‌ ಬಿಟ್ಟಿದ್ದು ದ್ರೋಹ ಹೇಗಾಗುತ್ತೆ: ಶಾಸಕ ಶಿವಲಿಂಗೇಗೌಡ

ಹಾಸನ: ನಾನು ಜೆಡಿಎಸ್‌ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್‌ ಜಾಸ್ತಿ ಆಗೋದು ಅಷ್ಟೇ. ಏನು…

1 hour ago

ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲರಿಗೆ ಅಡ್ಡಿಪಡಿಸಿದ ವಿಚಾರ: ರಾಷ್ಟ್ರಪತಿಗೆ ವರದಿ ರವಾನಿಸಿದ ಲೋಕಭವನ

ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಕಾಂಗ್ರೆಸ್‌ ಸದಸ್ಯರು…

1 hour ago

ಮಳವಳ್ಳಿ: ಈಜಲು ಹೋಗಿದ್ದ ಯುವಕ ಸಾವು

ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…

1 hour ago

ಮಂಡ್ಯದಲ್ಲಿ 3 ಕೋಟಿ ವೆಚ್ಚದಲ್ಲಿ ಗಾಂಧಿಭವನ ನಿರ್ಮಾಣ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…

1 hour ago

ಗ್ರಾಮ ಪಂಚಾಯತ್‌ಗಳ 590 ಸಿಬ್ಬಂದಿಗಳಿಗೆ ಅನುಮೋದನೆ: ಆದೇಶ ಪ್ರತಿ ವಿತರಿಸಿದ ಸಚಿವ ಎನ್‌.ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…

2 hours ago