ಹಾಸನ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ವಶದಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣನನ್ನು ಇಂದು ಎಸ್ಐಟಿ ಅಧಿಕಾರಿಗಳು ಹಾಸನದಲ್ಲಿರುವ ನಿವಾಸಕ್ಕೆ ಕರೆತಂದು ಸ್ಥಳ ಮಹಜರು ನಡೆಸಿದ್ದಾರೆ.
ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೆ ಮತ್ತೆ ಸಂಕಷ್ಟ ಎದುರಾಗುತ್ತಿದೆ. ಈ ಬೆನ್ನಲ್ಲೇ ಮತ್ತೋರ್ವ ಮಹಿಳೆ ನನ್ನ ಮೇಲೆ ಪ್ರಜ್ವಲ್ ರೇವಣ್ಣ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಮಾಡಿದ್ದಾರೆ.
ಸಂತ್ರಸ್ತ ಮಹಿಳೆ ಮಾಡಿದ ಆರೋಪದ ಮೇರೆಗೆ ಇಂದು ಎಸ್ಐಟಿ ವಶದಲ್ಲಿರುವ ಪ್ರಜ್ವಲ್ ರೇವಣ್ಣನನ್ನು ಹಾಸನದ ಆರ್.ಸಿ.ನಗರದಲ್ಲಿರುವ ತಮ್ಮ ನಿವಾಸಕ್ಕೆ ಕರೆತಂದು ಸ್ಥಳ ಮಹಜರು ಮಾಡಿದ್ದಾರೆ. ಎಸ್ಐಟಿ ಜೊತೆಗೆ ಎಫ್ಎಸ್ಎಲ್ ತಂಡ ಕೂಡ ಪ್ರಜ್ವಲ್ ಮನೆಗೆ ಭೇಟಿ ನೀಡಿದ್ದು, ಅನೇಕ ಮಾಹಿತಿಗಳನ್ನು ಕಲೆಹಾಕಿದೆ ಎನ್ನಲಾಗಿದೆ. ಒಟ್ಟಾರೆಯಾಗಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣನಿಗೆ ಒಂದಲ್ಲಾ ಒಂದು ಸಂಕಷ್ಟ ಎದುರಾಗುತ್ತಿದ್ದು, ಪ್ರಜ್ವಲ್ನ ಮುಂದಿನ ನಡೆಯೇನು ಎಂಬುದು ಎಲ್ಲರ ಯಕ್ಷ ಪ್ರಶ್ನೆಯಾಗಿದೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…