ರಾಜ್ಯ

ಪ್ರಜ್ವಲ್‌ ರೇವಣ್ಣಗೆ ಇಂದಿನಿಂದ ಬಿಳಿ ಸಮವಸ್ತ್ರ: 8 ಗಂಟೆ ಕೆಲಸ ಹಂಚಿಕೆ

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಸಜಾಬಂಧಿಯಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಕೈದಿ ಸಂಖ್ಯೆ 15528 ನೀಡಲಾಗಿದ್ದು, ಇಂದಿನಿಂದ ಜೈಲಿನಲ್ಲಿ ಕೈದಿ ಸಮವಸ್ತ್ರ ಧರಿಸಬೇಕಿದೆ.

ಜೈಲಿನ ಸಜಾಬಂಧಿ ಕೈದಿಗಳ ನಿಯಮಗಳನ್ನು ಪ್ರಜ್ವಲ್‌ ರೇವಣ್ಣ ಪಾಲಿಸಬೇಕಿದ್ದು, ನಿಯಮದ ಪ್ರಕಾರ ಜೈಲು ಅಧೀಕ್ಷಕರು ನೀಡುವ ಕೆಲಸ ಮಾಡಬೇಕು. ಇಂದು ಪ್ರಜ್ವಲ್‌ ರೇವಣ್ಣ ಅವರಿಗೆ ಜೈಲಿನ ಸಿಬ್ಬಂದಿ ಬಿಳಿ ಸಮವಸ್ತ್ರ ಕೊಡಲಿದ್ದಾರೆ. ಅಪರಾಧಿ ಪ್ರಜ್ವಲ್‌ ರೇವಣ್ಣರನ್ನು ಸಜಾಬಂಧಿ ಸೆಲ್‌ಗೆ ಶಿಫ್ಟ್‌ ಮಾಡಲಾಗಿದೆ.

ಜೈಲಿನೊಳಗೆ ಪ್ರಜ್ವಲ್‌ ರೇವಣ್‌ ಎಂಟು ಗಂಟೆ ಕೆಲಸ ಮಾಡಬೇಕು. ಕರಕುಶಲ ವಸ್ತು, ಮರ ಕೆಲಸ ಸೇರಿದಂತೆ ಯಾವುದಾದರೂ ಒಂದು ಕೆಲಸ ಆಯ್ಕೆ ಮಾಡಿಕೊಳ್ಳಬೇಕಿದೆ.

ಪ್ರಜ್ವಲ್‌ ಆಯ್ಕೆ ಮಾಡಿಕೊಂಡ ಕೆಲಸಕ್ಕೆ ತಕ್ಕಂತೆ ಸಂಬಳ ಪಾವತಿಸಲಾಗುತ್ತದೆ. ಮೊದಲು ಒಂದು ವರ್ಷ ಕೌಶಲ್ಯ ರಹಿತ ಎಂದು 524 ರೂ ಸಂಬಳ ನೀಡಲಾಗುತ್ತದೆ.

ಬಳಿಕ ಕೌಶಲ್ಯ ಮಟ್ಟಕ್ಕೆ ಏರಿಕೆ ಮಾಡಲಾಗುತ್ತದೆ. ಬಳಿಕ ಅನುಭವದ ನಂತರ ನುರಿತ ವರ್ಗಕ್ಕೆ ಅಧಿಕಾರಿಗಳು ಭರ್ತಿ ನೀಡಲಿದ್ದಾರೆ. ಇಷ್ಟು ದಿನ ವಿಚಾರಣಾ ಕೈದಿಯಾಗಿದ್ದ ಪ್ರಜ್ವಲ್‌ ರೇವಣ್ಣ ನಿನ್ನೆಯಿಂದ ಸಜಾಬಂಧಿಯಾಗಿದ್ದಾರೆ. ಇಂದಿನಿಂದ ಪ್ರಜ್ವಲ್‌ ರೇವಣ್ಣ ಜೀವನಶೈಲಿ ಸಂಪೂರ್ಣ ಬದಲಾಗಲಿದೆ.

ಆಂದೋಲನ ಡೆಸ್ಕ್

Recent Posts

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

18 mins ago

ಕಿಚ್ಚ ಸುದೀಪ್‌ ಮಾರ್ಕ್‌ ಟ್ರೈಲರ್‌ ಅದ್ಧೂರಿ ಬಿಡುಗಡೆ

ಬೆಂಗಳೂರು: ನಟ ಕಿಚ್ಚ ಸುದೀಪ್‌ ಅಭಿನಯದ ಮಾರ್ಕ್‌ ಸಿನಿಮಾ ಟ್ರೈಲರ್‌ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್‌ ಕಾರ್ತಿಕೇಯ-ಸುದೀಪ್‌ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ…

31 mins ago

ಉಡುಪಿಯಲ್ಲಿ ಆಂಧ್ರ ಡಿಸಿಎಂ ಪವನ್‌ ಕಲ್ಯಾಣ್:‌ ಶ್ರೀಕೃಷ್ಣ ಮಠದ ಗೀತೋತ್ಸವದಲ್ಲಿ ಭಾಗಿ

ಉಡುಪಿ: ಆಂಧ್ರಪ್ರದೇಶದ ಡಿಸಿಎಂ ಪವನ್‌ ಕಲ್ಯಾಣ್‌ ಉಡುಪಿಗೆ ಆಗಮಿಸಿದ್ದು, ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಇಂದು…

46 mins ago

ಮಲೆನಾಡಿನಲ್ಲಿ ಮುಂದುವರಿದ ಕಾಫಿ ಕಳವು ಪ್ರಕರಣ

ಹಾಸನ: ಕಾಫಿ ಬೆಳೆಗೆ ಉತ್ತಮ ಬೆಲೆ ಬಂದಿರುವ ಪರಿಣಾಮ ಮಲೆನಾಡು ಭಾಗದಲ್ಲಿ ಕಾಫಿ ಕಳವು ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.…

1 hour ago

ಮದುವೆ ರದ್ದು: ಮೌನಮುರಿದ ಸ್ಮೃತಿ ಮಂದಾನ

ಮುಂಬೈ: ಭಾರತ ಮಹಿಳಾ ಕ್ರಿಕೆಟ್‌ ತಂಡದ ಉಪನಾಯಕಿ ಸ್ಮೃತಿ ಮಂದಾನ ಹಾಗೂ ಸಂಗೀತ ಸಂಯೋಜಕ ಪಲಾಶ್‌ ಮುಚ್ಚಲ್‌ ಮದುವೆ ಮುಂದೂಡಿಕೆಯಾಗಿತ್ತು.…

1 hour ago

ಅರಣ್ಯ ಕಾಯುವುದಕ್ಕೆ ರೆಡಿ ಆಯ್ತು ಬೆಲ್ಜಿಯಂ ಶ್ವಾನ

ಗುಂಡ್ಲುಪೇಟೆ: ಬಂಡೀಪುರ ರಾಜ್ಯದಲ್ಲೇ ಅತಿ ಹೆಚ್ಚು ಹುಲಿ, ಚಿರತೆ ಹಾಗೂ ಆನೆಗಳಿರುವ ತಾಣ. ಈ ಅರಣ್ಯದಲ್ಲಿ ದೇಶದಲ್ಲೇ ಮೊದಲ ಟ್ರ್ಯಾಕರ್…

2 hours ago