ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಸಜಾಬಂಧಿಯಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಕೈದಿ ಸಂಖ್ಯೆ 15528 ನೀಡಲಾಗಿದ್ದು, ಇಂದಿನಿಂದ ಜೈಲಿನಲ್ಲಿ ಕೈದಿ ಸಮವಸ್ತ್ರ ಧರಿಸಬೇಕಿದೆ.
ಜೈಲಿನ ಸಜಾಬಂಧಿ ಕೈದಿಗಳ ನಿಯಮಗಳನ್ನು ಪ್ರಜ್ವಲ್ ರೇವಣ್ಣ ಪಾಲಿಸಬೇಕಿದ್ದು, ನಿಯಮದ ಪ್ರಕಾರ ಜೈಲು ಅಧೀಕ್ಷಕರು ನೀಡುವ ಕೆಲಸ ಮಾಡಬೇಕು. ಇಂದು ಪ್ರಜ್ವಲ್ ರೇವಣ್ಣ ಅವರಿಗೆ ಜೈಲಿನ ಸಿಬ್ಬಂದಿ ಬಿಳಿ ಸಮವಸ್ತ್ರ ಕೊಡಲಿದ್ದಾರೆ. ಅಪರಾಧಿ ಪ್ರಜ್ವಲ್ ರೇವಣ್ಣರನ್ನು ಸಜಾಬಂಧಿ ಸೆಲ್ಗೆ ಶಿಫ್ಟ್ ಮಾಡಲಾಗಿದೆ.
ಜೈಲಿನೊಳಗೆ ಪ್ರಜ್ವಲ್ ರೇವಣ್ ಎಂಟು ಗಂಟೆ ಕೆಲಸ ಮಾಡಬೇಕು. ಕರಕುಶಲ ವಸ್ತು, ಮರ ಕೆಲಸ ಸೇರಿದಂತೆ ಯಾವುದಾದರೂ ಒಂದು ಕೆಲಸ ಆಯ್ಕೆ ಮಾಡಿಕೊಳ್ಳಬೇಕಿದೆ.
ಪ್ರಜ್ವಲ್ ಆಯ್ಕೆ ಮಾಡಿಕೊಂಡ ಕೆಲಸಕ್ಕೆ ತಕ್ಕಂತೆ ಸಂಬಳ ಪಾವತಿಸಲಾಗುತ್ತದೆ. ಮೊದಲು ಒಂದು ವರ್ಷ ಕೌಶಲ್ಯ ರಹಿತ ಎಂದು 524 ರೂ ಸಂಬಳ ನೀಡಲಾಗುತ್ತದೆ.
ಬಳಿಕ ಕೌಶಲ್ಯ ಮಟ್ಟಕ್ಕೆ ಏರಿಕೆ ಮಾಡಲಾಗುತ್ತದೆ. ಬಳಿಕ ಅನುಭವದ ನಂತರ ನುರಿತ ವರ್ಗಕ್ಕೆ ಅಧಿಕಾರಿಗಳು ಭರ್ತಿ ನೀಡಲಿದ್ದಾರೆ. ಇಷ್ಟು ದಿನ ವಿಚಾರಣಾ ಕೈದಿಯಾಗಿದ್ದ ಪ್ರಜ್ವಲ್ ರೇವಣ್ಣ ನಿನ್ನೆಯಿಂದ ಸಜಾಬಂಧಿಯಾಗಿದ್ದಾರೆ. ಇಂದಿನಿಂದ ಪ್ರಜ್ವಲ್ ರೇವಣ್ಣ ಜೀವನಶೈಲಿ ಸಂಪೂರ್ಣ ಬದಲಾಗಲಿದೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…